ಆ್ಯಪ್ನಗರ

ವಿದ್ಯಾರ್ಥಿಗಳಿಂದ ಧಾರ್ಮಿಕ ಕೇಂದ್ರಗಳ ಸ್ವಚ್ಛತಾ ಕಾರ್ಯ

ಶಿಕ್ಷ ಣದ ಜತೆಗೆ ಸಾಮಾಜಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿರುವ ಶಾಹೀನ್‌ ಪದವಿಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು, ಭಾನುವಾರ ಪಟ್ಟಣದ ವಿವಿಧ ಧಾರ್ಮಿಕ ಸ್ಥಳಗಳಲ್ಲಿ ಶುಚಿಗೊಳಿಸಿದರು.

Vijaya Karnataka 26 Nov 2018, 5:00 am
ಹುಮನಾಬಾದ್‌ :ಶಿಕ್ಷ ಣದ ಜತೆಗೆ ಸಾಮಾಜಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿರುವ ಶಾಹೀನ್‌ ಪದವಿಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು, ಭಾನುವಾರ ಪಟ್ಟಣದ ವಿವಿಧ ಧಾರ್ಮಿಕ ಸ್ಥಳಗಳಲ್ಲಿ ಶುಚಿಗೊಳಿಸಿದರು.
Vijaya Karnataka Web cleaning of religious centers by students
ವಿದ್ಯಾರ್ಥಿಗಳಿಂದ ಧಾರ್ಮಿಕ ಕೇಂದ್ರಗಳ ಸ್ವಚ್ಛತಾ ಕಾರ್ಯ


ಪಟ್ಟಣದ ಹಿರೇಮಠ ಸಂಸ್ಥಾನದ ಶ್ರೀ ರೇಣುಕ ಗಂಗಾಧರ ಶಿವಾಚಾರ್ಯರು ಚಾಲನೆ ನೀಡಿ, ಕಾಲೇಜಿನ ವಿದ್ಯಾರ್ಥಿಗಳ ಪಾಲಕರು ನೀಡಿದ ಪಾಕೆಟ್‌ ಹಣದಲ್ಲಿ ಉಳಿತಾಯ ಮಾಡಿ ಸಾಮಾಜಿಕ ಸೇವೆಗೆ ಬಳಸುತ್ತಿರುವುದು ಶ್ಲಾಘನೀಯ ಎಂದರು.

ಪಟ್ಟಣದ ಶಾಹೀನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಶಾಂತಕುಮಾರ ಪತ್ರಿ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಸ್ವಚ್ಛತೆಯ ಪಾತ್ರ ಮಹತ್ವದಾಗಿದ್ದು ಇದಕ್ಕೆ ಎಲ್ಲರು ಕೈಜೋಡಿಸಬೇಕಾಗಿದೆ ಎಂದರು.

ವಿದ್ಯಾರ್ಥಿಗಳು ಮೊದಲಿಗೆ ಮಂದಿರ, ಮಸೀದಿ ಹಾಗೂ ಚರ್ಚ್‌ಗಳ ಪರಿಸರದಲ್ಲಿನ ಶೌಚಾಲಯಗಳನ್ನು ಫಿನಾಯಿಲ್‌, ಆ್ಯಸಿಡ್‌ ಬಳಸಿ ಸ್ವಚ್ಛಗೊಳಿಸಲಿದ್ದಾರೆ. ನಂತರ ಅವುಗಳ ಪರಿಸರದಲ್ಲಿನ ಕಸ, ಕಡ್ಡಿಗಳನ್ನೂ ಆಯ್ದು ವಿಲೇವಾರಿ ಮಾಡಲಿದ್ದಾರೆ. ಅಷ್ಟು ಮಾತ್ರವಲ್ಲದೆ, ಸ್ವಚ್ಛಗೊಳಿಸಿದ ಕಿಟ್‌ಗಳನ್ನು ಶೌಚಾಲಯಗಳ ಸ್ವಚ್ಛತಾ ಕಾರ್ಯ ನಿರಂತರ ಮುಂದುವರಿಸಿಕೊಂಡು ಹೋಗಲು ಅನುಕೂಲವಾಗುವಂತೆ ಆಯಾ ಪ್ರಾರ್ಥನಾ ಮಂದಿರಗಳಿಗೆ ಕೊಡಲಿದ್ದಾರೆ. ವಿದ್ಯಾರ್ಥಿನಿಯರು ಸರಕಾರಿ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಶಾಲೆ, ಮನೆ ಸ್ವಚ್ಛತೆ, ವೈಯಕ್ತಿಕ ಸ್ವಚ್ಛತೆ ಹಾಗೂ ಪರಿಸರ ನೈರ್ಮಲ್ಯದ ಕುರಿತು ತಿಳಿವಳಿಕೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಡಾ. ಪ್ರದೀಪ ಖಜೂರೆ,ಸುನೀಲ ಜಾಧವ, ಅಲಿ ಸೌದಾಗರ,ಖಾಜಾ ಮೈನೋದ್ದಿನ್‌,ಈಫತ್‌ ಇಮ್ರಾನ್‌ ಹಾಗೂ ಕಾಲೇಜಿನ ಸಿಬ್ಬಂದಿಗಳು ಸುನೀಲ ಪತ್ರಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ