ಆ್ಯಪ್ನಗರ

ಸಿಎಂ ಗ್ರಾಮ ವಾಸ್ತವ್ಯ ಸಿದ್ಧತೆ ಪರಿಶೀಲನೆ

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಮಾಡುವ ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮಕ್ಕೆ ಜಿಪಂ ಅಧ್ಯಕ್ಷೆ ಗೀತಾ ಪಂಡಿತರಾವ್‌ ಚಿದ್ರಿ ಶನಿವಾರ ಭೇಟಿ ನೀಡಿದರು.

Vijaya Karnataka 23 Jun 2019, 5:00 am
ಬೀದರ್‌ :ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಮಾಡುವ ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮಕ್ಕೆ ಜಿಪಂ ಅಧ್ಯಕ್ಷೆ ಗೀತಾ ಪಂಡಿತರಾವ್‌ ಚಿದ್ರಿ ಶನಿವಾರ ಭೇಟಿ ನೀಡಿದರು.
Vijaya Karnataka Web cm village stay preparedness review
ಸಿಎಂ ಗ್ರಾಮ ವಾಸ್ತವ್ಯ ಸಿದ್ಧತೆ ಪರಿಶೀಲನೆ


ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ರು ಹಾಗೂ ಬಸವಕಲ್ಯಾಣ ಕ್ಷೇತ್ರದ ಶಾಸಕರಾದ ಬಿ.ನಾರಾಯಣರಾವ್‌ ಅವರೊಂದಿಗೆ ಅಲ್ಲಿನ ಸಿದ್ಧತೆಯ ಬಗ್ಗೆ ಸುಧೀರ್ಘ ಚರ್ಚಿಸಿದರು. ಅಲ್ಲಿನ ಎಲ್ಲಾ ತಯಾರಿ ಬಗ್ಗೆ ಬಸವಕಲ್ಯಾಣ ಸಹಾಯಕ ಆಯುಕ್ತರಾದ ಗ್ಯಾನೇಂದ್ರಕುಮಾರ ಗಂಗವಾರ ಅವರು ಸಮಗ್ರ ಮಾಹಿತಿ ನೀಡಿದರು.

ಕಾರ್ಯಕ್ರಮದ ಮುಖ್ಯ ವೇದಿಕೆ, ಜನತಾ ದರ್ಶನ ಅರ್ಜಿ ಸ್ವೀಕಾರ ಕೇಂದ್ರ, ಮುಖ್ಯಮಂತ್ರಿಗಳು ವಾಸ್ತವ್ಯ ಮಾಡುವ ಕೊಠಡಿ ಸೇರಿದಂತೆ ಅಲ್ಲಿನ ಎಲ್ಲಾ ಸಿದ್ಧತೆಯನ್ನು ಪರಿಶೀಲಿಸಿದರು. ಜಿಪಂ ಸದಸ್ಯ ಆನಂದ ಪಾಟೀಲ, ಗ್ರಾಪಂ ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ಇನ್ನಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ