ಆ್ಯಪ್ನಗರ

ಸ್ವಾಗತ ಸಮಿತಿ ಅಧ್ಯಕ್ಷ ರಾಗಿ ಶಾಸಕ ಈಶ್ವರ ಖಂಡ್ರೆ

ಪಟ್ಟಣದ ತಾಲೂಕು ಕಚೇರಿ ಸಮೀಪದ ನೂತನ ಟೌನ್‌ಹಾಲ್‌ ಕಟ್ಟಡದಲ್ಲಿ 29 ರಂದು ನಡೆಯಲಿರುವ ಮೂರನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ರನ್ನಾಗಿ ಶಾಸಕ ಈಶ್ವರ ಖಂಡ್ರೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Vijaya Karnataka 9 Jun 2019, 8:36 pm
ಭಾಲ್ಕಿ:ಪಟ್ಟಣದ ತಾಲೂಕು ಕಚೇರಿ ಸಮೀಪದ ನೂತನ ಟೌನ್‌ಹಾಲ್‌ ಕಟ್ಟಡದಲ್ಲಿ 29 ರಂದು ನಡೆಯಲಿರುವ ಮೂರನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ರನ್ನಾಗಿ ಶಾಸಕ ಈಶ್ವರ ಖಂಡ್ರೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
Vijaya Karnataka Web complete cooperation for the literary conference successfully
ಸ್ವಾಗತ ಸಮಿತಿ ಅಧ್ಯಕ್ಷ ರಾಗಿ ಶಾಸಕ ಈಶ್ವರ ಖಂಡ್ರೆ


ಸಮ್ಮೇಳನದ ಸ್ವಾಗತಿ ಸಮಿತಿ ಅಧ್ಯಕ್ಷ ರಾಗಿ ಆಯ್ಕೆಗೊಂಡ ಶಾಸಕರ ನಿವಾಸಕ್ಕೆ ಬುಧವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಸುರೇಶ್‌ ಚನಶೆಟ್ಟಿ ನೇತೃತ್ವದಲ್ಲಿ ಪದಾಧಿಕಾರಿಗಳು, ಪ್ರಮುಖರು ಮತ್ತು ಕನ್ನಡ ಪ್ರೇಮಿಗಳು ಭೇಟಿ ನೀಡಿ ಸಂಪ್ರದಾಯದಂತೆ ಸನ್ಮಾನಿಸಿ, ಸಮ್ಮೇಳನಕ್ಕೆ ಆಹ್ವಾನಿಸಿದರು.

ಸನ್ಮಾನ ಸ್ವೀಕರಿಸಿ ಶಾಸಕ ಈಶ್ವರ ಖಂಡ್ರೆ ಮಾತನಾಡಿ, ಮೂರನೇ ತಾಲೂಕು ಸಮ್ಮೇಳನವನ್ನು ವಿಜೃಂಭಣೆಯಿಂದ ಆಚರಿಸಲು ತನು, ಮನ, ಧನದಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಹಿರಿಯ ಸಾಹಿತಿ ವೀರಶೆಟ್ಟಿ ಬಾವುಗೆ, ಶರಣ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಶಂಭುಲಿಂಗ ಕಾಮಣ್ಣ, ತಾಲೂಕು ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ, ಗೌರವ ಕಾರ್ಯದರ್ಶಿ ರಮೇಶ ಚಿದ್ರಿ, ಪ್ರಾಚಾರ್ಯ ಚಂದ್ರಕಾಂತ ಬಿರಾದಾರ್‌, ಶಿಕ್ಷ ಕರಾದ ಶರಣಪ್ಪ ಬಿರಾದಾರ್‌, ಪ್ರಭು ಡಿಗ್ಗೆ, ವಿಠಲರಾವ ಮೇತ್ರೆ, ಕರ್ನಾಟಕ ರಕ್ಷ ಣಾ ವೇದಿಕೆ(ನಾರಾಯಣ ಗೌಡ)ಬಣದ ತಾಲೂಕು ಅಧ್ಯಕ್ಷ ಗಣೇಶ ಪಾಟೀಲ್‌ ಜ್ಯಾಂತಿ, ಯುವಕ ಮುಖಂಡರಾದ ಗಿರೀಶ ಬಿರಾದಾರ್‌, ಲೋಕೇಶ ಭೂರೆ ಹಲವರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ