ಆ್ಯಪ್ನಗರ

ಬೆಳೆ ವಿಮೆ ಕಂಪನಿಗಳು ಕೋಟಿ ಕೋಟಿ ಲಾಭ ಗಳಿಸುತ್ತಿವೆ: ಕಾಂಗ್ರೆಸ್ ನಾಯಕ ಈಶ್ವರ ಖಂಡ್ರೆ ಆಕ್ರೋಶ

ಕಳೆದ ವರ್ಷ ಕಟ್ಟಿದ ಬೆಳೆ ವಿಮೆಯಲ್ಲೂ ಸಾಕಷ್ಟು ಕಡಿತಗೊಳಿಸಲಾಗಿದೆ. 1000 ಕೋಟಿ ರೂ. ಬರಬೇಕಿತ್ತು. ಅದರಲ್ಲಿ ಕೇವಲ 25 ರಿಂದ 30 ಕೋಟಿ ರೂ ಮಾತ್ರ ಬರುತ್ತಿದೆ. ಬೆಳೆ ವಿಮೆ ಕಂಪನಿ ಆರಾಮವಾಗಿ ನೂರಾರು ಕೋಟಿ ರೂ. ವರ್ಷವೊಂದಕ್ಕೆ ಲಾಭ ಗಳಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಈಶ್ವರ ಖಂಡ್ರೆ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲೆಗೆ ಭೇಟಿ ನೀಡಿ ಬೆಳೆ ನಷ್ಟ ಪರಿಶೀಲನೆ ಮಾಡಬೇಕು ಎಂದು ಈಶ್ವರ ಖಂಡ್ರೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Edited byದಿಲೀಪ್ ಡಿ. ಆರ್. | Lipi 12 Jul 2022, 3:14 pm

ಹೈಲೈಟ್ಸ್‌:

  • ಬಸವನ ಹುಳು ಬಾಧೆಗೆ ಬೀದರ್ ಜಿಲ್ಲಾದ್ಯಂತ ಸೋಯಾ ಬೀನ್ ಬೆಳೆ ನಾಶ
  • ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು
  • ರೈತರಿಗೆ ಉಚಿತವಾಗಿ ಔಷಧ ವಿತರಣೆ ಮಾಡಿ ರೈತರನ್ನು ಸಂಕಷ್ಟದಿಂದ ಪಾರು ಮಾಡಬೇಕು: ಈಶ್ವರ ಖಂಡ್ರೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web khandre
ಬೆಳೆ ವಿಮೆ ಕಂಪನಿಗಳು ಕೋಟಿ ಕೋಟಿ ಲಾಭ ಗಳಿಸುತ್ತಿವೆ: ಕಾಂಗ್ರೆಸ್ ನಾಯಕ ಈಶ್ವರ ಖಂಡ್ರೆ ಆಕ್ರೋಶ
ಬೀದರ್: ಬಸವನ ಹುಳು ಬಾಧೆಗೆ ಬೀದರ್ ಜಿಲ್ಲಾದ್ಯಂತ ಸೋಯಾ ಬೀನ್ ಬೆಳೆ ನಾಶವಾಗಿದ್ದು, ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ. ಬೀದರ್ ನಗರದ ಅಕ್ಕಮಹಾದೇವಿ ಕಾಲೇಜ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಬೀದರ್ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸೋಯಾಬೀನ್ ಬಿತ್ತನೆಯಾಗಿದೆ. ಈ ಪೈಕಿ ಶೇ. 60 ರಿಂದ 70 ಪ್ರತಿ ಶತ ಬೆಳೆ ನಷ್ಟವಾಗಿದೆ. ತಕ್ಷಣ ರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲೆಗೆ ಭೇಟಿ ನೀಡಿ ಬೆಳೆ ನಷ್ಟ ಪರಿಶೀಲನೆ ಮಾಡಬೇಕು. ರೈತರಿಗೆ ಉಚಿತವಾಗಿ ಔಷಧ ವಿತರಣೆ ಮಾಡಿ ರೈತರನ್ನು ಸಂಕಷ್ಟದಿಂದ ಪಾರು ಮಾಡಬೇಕು ಎಂದು ಹೇಳಿದರು.

ದೇಶಕ್ಕಾಗಿ ಬಲಿದಾನ ಮಾಡಿದ ಗಾಂಧಿ ಕುಟುಂಬಕ್ಕೆ ಅನಗತ್ಯ ಕಿರುಕುಳ: ಖಂಡ್ರೆ ವಾಗ್ದಾಳಿ!
ಕಳೆದ ವರ್ಷ ಕಟ್ಟಿದ ಬೆಳೆ ವಿಮೆಯಲ್ಲೂ ಸಾಕಷ್ಟು ಕಡಿತಗೊಳಿಸಲಾಗಿದೆ. 1000 ಕೋಟಿ ರೂ. ಬರಬೇಕಿತ್ತು. ಅದರಲ್ಲಿ ಕೇವಲ 25 ರಿಂದ 30 ಕೋಟಿ ರೂ ಮಾತ್ರ ಬರುತ್ತಿದೆ. ಬೆಳೆ ವಿಮೆ ಕಂಪನಿ ಆರಾಮವಾಗಿ ನೂರಾರು ಕೋಟಿ ರೂ. ವರ್ಷವೊಂದಕ್ಕೆ ಲಾಭ ಗಳಿಸುತ್ತಿದೆ ಎಂದೂ ಈಶ್ವರ ಖಂಡ್ರೆ ಆರೋಪಿಸಿದರು.


ಹೆದ್ದಾರಿ ನಿರ್ಮಾಣ ಮಾಡಿದ್ದಾಗಿ ಕೇಂದ್ರ ಸಚಿವ ಭಗವಂತ್ ಖೂಬಾ ಹೇಳುತ್ತಿದ್ದಾರೆ. ಆದರೆ, ಹೇಗಿವೆ ರಸ್ತೆಗಳು? ಬೀದರ್ - ಭಾಲ್ಕಿ ರಸ್ತೆ ಮೇಲೆ ಹೋದರೆ ಟೊಂಕ ಮುರಿದು ಕೊಳ್ಳಬೇಕಾಗುತ್ತದೆ. ಅವಧಿ ಮುಗಿದರೂ ರಸ್ತೆ ಕಾಮಗಾರಿ ಪೂರ್ಣಗೊಳ್ಳುತ್ತಿಲ್ಲ. ಗುಣಮಟ್ಟದ ರಸ್ತೆ ಮಾಡಲು ಇವರಿಗೆ ಬರುವುದಿಲ್ಲ ಎಂದು ಕಿಡಿಕಾರಿದರು. ಮಾತೆತ್ತಿದ್ದರೆ ಬಿಜೆಪಿಯವರು ಸುಳ್ಳು ಹೇಳುತ್ತಾರೆ. ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು ಎಂದು ಈಶ್ವರ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದರು.

ಜನ ಈಗಲೂ ಎಚ್ಚೆತ್ತುಕೊಳ್ಳದಿದ್ದರೇ ದೇಶಕ್ಕೆ ಉಳಿಗಾಲವಿಲ್ಲ: ಮಲ್ಲಿಕಾರ್ಜುನ ಖರ್ಗೆ
ಒಂದು ಮನೆ ಸಹ ಮಂಜೂರು ಮಾಡಿಲ್ಲ: ಬೀದರ್ ಜಿಲ್ಲೆಯಲ್ಲಿ ಲಕ್ಷಾಂತರ ಜನರಿಗೆ ಸೂರು ಇಲ್ಲ. ಮೂರು ವರ್ಷಗಳ ಅವಧಿಯಲ್ಲಿ ಒಂದೇ ಒಂದು ಮನೆ ಮಂಜೂರು ಮಾಡಿಲ್ಲ. ಭಾಲ್ಕಿ ಕ್ಷೇತ್ರದಲ್ಲಿ ಲಭ್ಯವಿರುವ ನಿವೇಶನದಲ್ಲಿ ಬಡವರು ಮನೆ ಕಟ್ಟಿಕೊಂಡಿದ್ದಾರೆ. ಕಡಿಮೆ ನಿವೇಶನದಲ್ಲಿ ಮನೆ ಕಟ್ಟಿದ್ದನ್ನೇ ನೆಪ ಮಾಡಿಕೊಂಡು ಹಣ ಬಿಡುಗಡೆ ಮಾಡಿಲ್ಲ. ಆರು ಸಾವಿರ ಮನೆಗಳ ಪೈಕಿ 3,345 ಮನೆಗಳನ್ನು ಕಟ್ಟಿಕೊಂಡವರ ತಪ್ಪೇನು ಎಂದು ಪ್ರಶ್ನಿಸಿದರು.

ಕೇಂದ್ರ ಸಚಿವ ಭಗವಂತ ಖೂಬಾ ಜಾಹೀರಾತಿನಲ್ಲಿ ಸುಳ್ಳು ಮಾಹಿತಿ ಕೊಟ್ಟಿದ್ದಾರೆ. ಕಾಂಗ್ರೆಸ್‌ ಅವಧಿಯಲ್ಲಿ ಮಂಜೂರಾದ ಮನೆಗಳ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಿಲ್ಲ. ನಿಗದಿ ಪಡಿಸಿದ್ದಕ್ಕಿಂತ ಕಡಿಮೆ ನಿವೇಶನದಲ್ಲಿ ಮನೆ ಕಟ್ಟಿಕೊಂಡಿದ್ದರೆ ಕಡಿಮೆ ಹಣ ಮಂಜೂರು ಮಾಡಬಹುದಿತ್ತು. ಭಾಲ್ಕಿ ಕ್ಷೇತ್ರದಲ್ಲಿ ಆರು ಸಾವಿರ ಜನರಿಗೆ ಅನ್ಯಾಯ ಮಾಡಿದ್ದೀರಿ. ಅವರ ಶಾಪ ತಟ್ಟಲಿದೆ ಎಂದರು.


ಬಿಜೆಪಿ ಸರ್ಕಾರ 2022ರ ವೇಳೆಗೆ ರೈತರ ಅದಾಯ ದುಪ್ಪಟ್ಟು ಮಾಡುವ ಭರವಸೆ ಕೊಟ್ಟಿತ್ತು. ಆದರೆ, ಎಲ್ಲ ಅಗತ್ಯ ವಸ್ತುಗಳ ಬೆಲೆ ದುಪ್ಪಟ್ಟು ಮಾಡಿದೆ. ವಿಮಾ ಕಂಪನಿಗಳ ಲಾಭ ಹೆಚ್ಚಿಸಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಪಿಎಸ್‌ಐ, ಉಪನ್ಯಾಸಕರು ಹಾಗೂ ಎಫ್‌ಡಿಎ ನೇಮಕಾತಿಯಲ್ಲಿ ನಡೆದ ಹಗರಣಗಳು ಬೆಳಕಿಗೆ ಬರುತ್ತಿವೆ. ಸಾಲು ಸಾಲು ಹಗರಣಗಳೇ ಬಿಜೆಪಿ ಸಾಧನೆ ಎಂದು ವಾಗ್ದಾಳಿ ನಡೆಸಿದರು.

ಶಾಸಕರಾದ ರಾಜಶೇಖರ್ ಪಾಟೀಲ್, ರಹೀಂ ಖಾನ್, ಪಕ್ಷದ ಜಿಲ್ಲಾಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮೀನಾಕ್ಷಿ ಸಂಗ್ರಾಮ್, ಪ್ರಧಾನ ಕಾರ್ಯದರ್ಶಿ ದತಾತ್ರಿ ಮುಲಗೆ ಉಪಸ್ಥಿತರಿದ್ದರು.
ಲೇಖಕರ ಬಗ್ಗೆ
ದಿಲೀಪ್ ಡಿ. ಆರ್.
ವಿಜಯ ಕರ್ನಾಟಕದ ಡಿಜಿಟಲ್ ಪತ್ರಕರ್ತನಾಗಿ 2019ರ ಆಗಸ್ಟ್‌ನಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡ ಟಿವಿ ನ್ಯೂಸ್ ವಾಹಿನಿಗಳಲ್ಲಿ 14 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು, ಹಸಿರು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ