ಆ್ಯಪ್ನಗರ

ಲಾಕ್‌ಡೌನ್‌ ಎಫೆಕ್ಟ್‌: ಬೀದರ್‌ನಲ್ಲಿ ಗ್ರಾಹಕರ ಮನೆ ಬಾಗಿಲಿಗೆ ನಂದಿನಿ ಹಾಲು

ಕೊರೊನಾ ವೈರಸ್‌ ಭೀತಿಯಿಂದ ದೇಶದಲ್ಲಿ ಲಾಕ್‌ಡೌನ್‌ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಲಬುರಗಿ, ಬೀದರ್‌, ಯಾದಗಿರಿ ಹಾಲು ಒಕ್ಕೂಟ ಈಗ ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಲು ಆರಂಭಿಸಿದೆ.

Vijaya Karnataka Web 1 Apr 2020, 7:15 pm
ಬೀದರ್: ಕೊರೊನಾ ವೈರಸ್ ಭೀತಿಯಿಂದ ಕಲಬುರಗಿ-ಬೀದರ್-ಯಾದಗಿರಿ ಹಾಲು ಒಕ್ಕೂಟ ಈಗ ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಲು ಆರಂಭಿಸಿದೆ. ಈ ಹಿನ್ನೆಲೆ ಬುಧವಾರ ಬೀದರ್‌ನಲ್ಲಿ ಮನೆ ಮನೆಗೆ ನಂದಿನಿ ಉತ್ಪನ್ನಗಳನ್ನು ಪೂರೈಸುವ ವಾಹನಕ್ಕೆ ಒಕ್ಕೂಟದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ ಚಾಲನೆ ನೀಡಿದರು.
Vijaya Karnataka Web BIDAR


ಒಕ್ಕೂಟದ ವಾಹನ ಬೀದರ್ ನಗರದ ಎಲ್ಲ 35 ವಾರ್ಡ್‌ಗಳಲ್ಲಿ ಸಂಚರಿಸಿ ಗ್ರಾಹಕರಿಗೆ ನಂದಿನಿ ಹಾಲು, ಮೊಸರು, ತುಪ್ಪ, ಬಿಸ್ಕತ್, ಬಾದಾಮಿ ಹಾಲು ಸೇರಿ ವಿವಿಧ ಉತ್ಪನ್ನಗಳನ್ನು ಒದಗಿಸಲಿದೆ ಎಂದು ಬಿರಾದಾರ ತಿಳಿಸಿದರು. ಧ್ವನಿವರ್ಧಕ ಹಾಗೂ ಇಬ್ಬರು ಸಿಬ್ಬಂದಿಯನ್ನು ಹೊಂದಿರುವ ವಾಹನ ಪ್ರತಿ ದಿನ ಬೆಳಗ್ಗೆ 6 ರಿಂದ ರಾತ್ರಿ 8ರವರೆಗೆ ನಗರದಲ್ಲಿ ಸಂಚರಿಸಲಿದೆ.

ಸಿಬ್ಬಂದಿಗೆ ಸುರಕ್ಷತಾ ಕ್ರಮವಾಗಿ ಮಾಸ್ಕ್, ಹ್ಯಾಂಡ್ ಗ್ಲೌಸ್‌ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಶೀಘ್ರದಲ್ಲಿಯೇ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲೂ ತಲಾ ಒಂದು ವಾಹನವನ್ನು ನಿಯೋಜಿಸಿ ನಂದಿನಿ ಹಾಲಿನ ಉತ್ಪನ್ನಗಳನ್ನು ವಿತರಣೆಯನ್ನು ಆರಂಭಿಸಲು ಯೋಚಿಸಲಾಗಿದೆ ಎಂದು ಅವರು ಹೇಳಿದರು.

ಬೀದರ್ ಎಪಿಎಂಸಿಯಿಂದ ಸಿಎಂ ನಿಧಿಗೆ ₹50 ಲಕ್ಷ ದೇಣಿಗೆ

ಕೊರೊನಾ ವೈರಸ್‌ ನಿಯಂತ್ರಣಕ್ಕಾಗಿ ಲಾಕ್‌ಡೌನ್ ಮಾಡಿರುವ ಹಿನ್ನೆಲೆ ಗ್ರಾಹಕರಿಗೆ ಅನುಕೂಲ ಮಾಡಿಕೊಡಲು ಮನೆ ಬಾಗಿಲಿಗೆ ನಂದಿನಿ ಉತ್ಪನ್ನಗಳ ಸೇವೆ ಶುರು ಮಾಡಲಾಗಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬೇಕು. ನಂದಿನಿ ಉತ್ಪನ್ನಗಳ ಖರೀದಿ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.

ಬೀದರಲ್ಲಿ ಊರೆಲ್ಲ ಓಡಾಡಿದ ಕೊರೊನಾ ಶಂಕಿತ: ಎಫ್‌ಐಆರ್‌ ದಾಖಲು!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ