ಆ್ಯಪ್ನಗರ

ಶಾಸಕ ಈಶ್ವರ್ ಖಂಡ್ರೆ ವಿರುದ್ಧದ ಚುನಾವಣಾ ತಕರಾರು ಅರ್ಜಿ, 22ರಂದು ವಿಚಾರಣೆ

ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ್ ಖಂಡ್ರೆ ವಿರುದ್ಧ ಪರಾಜಿತ ಅಭ್ಯರ್ಥಿ ಡಿ.ಕೆ. ಸಿದ್ರಾಮ್ ಬೆಂಗಳೂರು ಹೈಕೋರ್ಟ್ ನಲ್ಲಿ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ಜುಲೈ 22ರಂದು ನಡೆಯಲಿದೆ.

Vijaya Karnataka Web 10 Jul 2020, 10:37 am
ಬೀದರ್: ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ್ ಭೀಮಣ್ಣ ಖಂಡ್ರೆ ವಿರುದ್ಧ ಪರಾಜಿತ ಅಭ್ಯರ್ಥಿ ಡಿ.ಕೆ. ಸಿದ್ರಾಮ್ ಬೆಂಗಳೂರು ಹೈಕೋರ್ಟ್ನಲ್ಲಿ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ಜುಲೈ 22ರಂದು ವಿಚಾರಣೆಗೆ ಬರಲಿದೆ.
Vijaya Karnataka Web Eshwar Khandre
ಈಶ್ವರ್ ಭೀಮಣ್ಣ ಖಂಡ್ರೆ


ಹೈಕೋರ್ಟ್ ‌ನಲ್ಲಿ ಸಲ್ಲಿಸಿರುವ ಎಲೆಕ್ಷನ್ ಪಿಟಿಷನ್ (ನಂಬರ್ 200001/2018) ದಿನಾಂಕ:3-07-2020 ರಂದು ಹೈಕೋರ್ಟ್ ನಲ್ಲಿ ವಿಚಾರಣೆಗೆ ಬಂದಿತ್ತು.

ಪ್ರತಿವಾದಿ ಶಾಸಕ ಈಶ್ವರ್ ಖಂಡ್ರೆ ಅವರನ್ನು Ex- parte ಯನ್ನಾಗಿ ಮಾಡಿ ಮುಂದಿನ ವಿಚಾರಣೆ ಜು. 22ರಂದು ನಿಗದಿಪಡಿಸಲಾಗಿದ್ದು, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಎದುರಿಗೆ ಬರಲಿದೆ ಎಂದು ಮೂಲಗಳು ದೃಢಪಡಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ