ಆ್ಯಪ್ನಗರ

ಪ್ರತಿ ಕೆರೆಗೆ ಪ್ರತ್ಯೇಕ ಯೋಜನೆ ರೂಪಿಸಲು ನಿರ್ಣಯ

ಜಿಲ್ಲೆಯಲ್ಲಿನ ಪ್ರತಿಯೊಂದು ಕೆರೆಗಳ ಪುನಶ್ಚೇತನಗೊಳಿಸಲು ಪ್ರತ್ಯೇಕ ಯೋಜನೆಯೊಂದನ್ನು ರೂಪಿಸಲು ಜಿಲ್ಲಾಧಿಕಾರಿ ಡಾ.ಹೆಚ್‌.ಆರ್‌.ಮಹಾದೇವ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿನಡೆದ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿನಿರ್ಣಯಿಸಲಾಯಿತು.

Vijaya Karnataka 7 Oct 2019, 5:00 am
ಬೀದರ್‌:ಜಿಲ್ಲೆಯಲ್ಲಿನ ಪ್ರತಿಯೊಂದು ಕೆರೆಗಳ ಪುನಶ್ಚೇತನಗೊಳಿಸಲು ಪ್ರತ್ಯೇಕ ಯೋಜನೆಯೊಂದನ್ನು ರೂಪಿಸಲು ಜಿಲ್ಲಾಧಿಕಾರಿ ಡಾ.ಹೆಚ್‌.ಆರ್‌.ಮಹಾದೇವ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿನಡೆದ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿನಿರ್ಣಯಿಸಲಾಯಿತು.
Vijaya Karnataka Web decision to make a separate plan for each lake
ಪ್ರತಿ ಕೆರೆಗೆ ಪ್ರತ್ಯೇಕ ಯೋಜನೆ ರೂಪಿಸಲು ನಿರ್ಣಯ


ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ, ಆಯಾ ಕೆರೆಗಳ ಅಗತ್ಯಕ್ಕೆ ತಕ್ಕಂತೆ ಪ್ರತಿಯೊಂದು ಕೆರೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಯೋಜನೆ ರೂಪುಗೊಳ್ಳುವುದು ಇಂದಿನ ಅಗತ್ಯವಾಗಿದೆ. ಕೆರೆ ಅಭಿವೃದ್ಧಿ ಸಮಿತಿ ಸಭೆಯಲ್ಲಿಈ ಬಗ್ಗೆ ಚರ್ಚೆ ಮಾಡಬೇಕು. ಜಿಲ್ಲೆಯಲ್ಲಿಇರುವ ಕೆರೆಗಳೆಷ್ಟು ? ಅವುಗಳ ಸ್ಥಿತಿಗತಿ ಏನು ? ಎಂಬುದರ ಬಗ್ಗೆ ಮಾಹಿತಿಯ ಪುಸ್ತಕವೊಂದನ್ನು ಪ್ರಕಟಿಸಬೇಕು. ಕೆರೆಗಳ ಬಗ್ಗೆ ಚರ್ಚಿಸಲು ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆಯು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯುವಂತಾಗಬೇಕು ಎಂದು ತಿಳಿಸಿದರು.

ಸಣ್ಣ ನೀರಾವರಿ ಇಲಾಖೆಯ ಅಧೀನದಲ್ಲಿರುವ 125 ಕೆರೆಗಳ ಅಳತೆ ಕಾರ್ಯ ಭೂಮಾಪನಾ ಇಲಾಖೆಯ ಸಹಯೋಗದಲ್ಲಿಮಾಡಬೇಕು. ಈ ಮೂಲಕ ಒತ್ತುವರಿಯಾಗಿರುವುದನ್ನು ಗುರುತಿಸಲು ಕ್ರಮ ವಹಿಸಬೇಕು ಎಂದು ಅವರು ಇದೇ ವೇಳೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕ ಅಭಿವೃದ್ಧಿಯಲ್ಲಿಕೆರೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿಆಯಾ ಕೆರೆಗಳ ಗಡಿ ಗುರುತಿಸಿ, ಕೆರೆ ಸಂರಕ್ಷಣೆ ಮಾಡಬೇಕು. ಮಳೆಗಾಲ ಮುಗಿದ ನಂತರ ಕೆರೆ ಹೂಳೆತ್ತುವ ಕಾರ್ಯಕ್ರಮವನ್ನು ಮಾಡಬೇಕು ಎಂದು ಸಲಹೆ ನೀಡಿದರು.

ಜಿಪಂ, ಸಣ್ಣ ನೀರಾವರಿ ಇಲಾಖೆ, ಅರಣ್ಯ ಇಲಾಖೆ ಜಂಟಿಯಾಗಿ ಉಪ ಸಮಿತಿಯೊಂದನ್ನು ರಚಿಸಿಕೊಂಡು ಕೆರೆಗಳಲ್ಲಿಗಿಡ ನೆಡುವ ಕಾರ್ಯವನ್ನು ಮಾಡಬೇಕು. ಕೆರೆ ಅಚ್ಚುಕಟ್ಟು ಪ್ರದೇಶದ ರೈತರನ್ನು ಒಳಗೊಂಡು ನೀರು ಬಳಕೆದಾರರ ಸಂಘವನ್ನು ರಚಿಸಿ ಅಲ್ಲಿನ ರೈತರಿಂದಲೇ ನಾನಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನೀರು ಬರದ ಕೆರೆಗಳ ಅಳತೆಗೆ ಮೊದಲ ಆದ್ಯತೆ ಕೊಡಬೇಕು. ಖಾಲಿ ಇರುವ ಕೆರೆಗಳ ಅಳತೆಗೆ ಒತ್ತು ಕೊಡಬೇಕು. ಈ ಸರ್ವೆ ಕಾರ್ಯ ಅಚ್ಚುಕಟ್ಟಾಗಿ ನಡೆಯಬೇಕು. ನರೇಗಾದಡಿ ಹೆಚ್ಚಿನ ಕೆಲಸವನ್ನು ಕೆರೆ ಅಭಿವೃದ್ಧಿ ಕಾಮಗಾರಿಗೆ ಮೀಸಲಿಡುವಂತಾಗಬೇಕು ಎಂದು ತಿಳಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗವಾರ, ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಟಿ. ಶ್ರೀಧರ್‌, ಬೀದರ್‌ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಲಭೀಮ ಕಾಂಬಳೆ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ವಿದ್ಯಾನಂದ.ಸಿ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಮಲ್ಲಿಕಾರ್ಜುನ ಬಾವಗೆ, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸುರೇಶ ಮೇಧಾ, ತಾಂತ್ರಿಕ ಸಹಾಯಕ ವಿವೇಕಾನಂದ ತಾಂದಳೆ, ಕಿರಿಯ ಅಭಿಯಂತರರಾದ ಆನಂದಕುಮಾರ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ