ಆ್ಯಪ್ನಗರ

ಬಾಲ್ಯ ವಿವಾಹಕ್ಕೆ ವರದಕ್ಷಿಣೆ ಮುಖ್ಯ ಕಾರಣ : ನ್ಯಾ. ಮನಗೂಳಿ ಪ್ರೇಮಾವತಿ

ಬಾಲ್ಯ ವಿವಾಹ ಹೆಚ್ಚಳಕ್ಕೆ ಮುಖ್ಯವಾಗಿ ವರದಕ್ಷಿಣೆ ಪಿಡುಗು ಕಾರಣವಾಗಿದೆ. ಆದ್ದರಿಂದ ವರದಕ್ಷಿಣೆ ತಡೆಯುವ ಮೂಲಕ ಬಾಲ್ಯ ವಿವಾಹವನ್ನು ತಡೆಗಟ್ಟಲು ಮುಂದಾಗಬೇಕು ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಮನಗೂಳಿ ಪ್ರೇಮಾವತಿ ಅವರು ತಿಳಿಸಿದರು.

Vijaya Karnataka 31 Dec 2018, 5:02 pm
ಬೀದರ್‌ :ಬಾಲ್ಯ ವಿವಾಹ ಹೆಚ್ಚಳಕ್ಕೆ ಮುಖ್ಯವಾಗಿ ವರದಕ್ಷಿಣೆ ಪಿಡುಗು ಕಾರಣವಾಗಿದೆ. ಆದ್ದರಿಂದ ವರದಕ್ಷಿಣೆ ತಡೆಯುವ ಮೂಲಕ ಬಾಲ್ಯ ವಿವಾಹವನ್ನು ತಡೆಗಟ್ಟಲು ಮುಂದಾಗಬೇಕು ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಮನಗೂಳಿ ಪ್ರೇಮಾವತಿ ಅವರು ತಿಳಿಸಿದರು.
Vijaya Karnataka Web dowry is the main cause of child marriage justice
ಬಾಲ್ಯ ವಿವಾಹಕ್ಕೆ ವರದಕ್ಷಿಣೆ ಮುಖ್ಯ ಕಾರಣ : ನ್ಯಾ. ಮನಗೂಳಿ ಪ್ರೇಮಾವತಿ


ಜಿಪಂ ಸಭಾಂಗಣದಲ್ಲಿ ಭಾನುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಆಶ್ರಯದಲ್ಲಿ ನಡೆದ ಜಿಲ್ಲೆಯ ಗೌರವಾನ್ವಿತ ನ್ಯಾಯಾಧೀಶರುಗಳು ಹಾಗೂ ಸರಕಾರಿ ಅಭಿಯೋಜಕರು ಮತ್ತು ಬಾಲ್ಯ ವಿವಾಹ ನಿಷೇಧಾಧಿಕಾರಿಗಳಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ಮತ್ತು ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ ) ಅಧಿನಿಯಮ 2016ರ ಕುರಿತ ಒಂದು ದಿನದ ಸಂವಾದ ಕಾರ‍್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪಾಲಕರು ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಅರಿವು ಇಲ್ಲದೇ ಇರುವುದರಿಂದ ಬಾಲ್ಯ ವಿವಾಹ ಮಾಡಲು ಮುಂದಾಗುತ್ತಾರೆ. ಪಾಲಕರು ತಮ್ಮ ಜವಾಬ್ದಾರಿಯನ್ನು ಕಳೆದುಕೊಳ್ಳಲು ಹೀಗೆ ಮಾಡುತ್ತಾರೆ. ರಕ್ತ ಸಂಬಂಧ ಉಳಿಸಿಕೊಳ್ಳಲು ಹಾಗೂ ಬಡತನ, ಅನಕ್ಷರತೆ, ಮೂಡನಂಬಿಕೆ ಬಾಲ್ಯ ವಿವಾಹಕ್ಕೆ ಮುಖ್ಯ ಕಾರಣವಾಗಿದ್ದು, ಪಾಲಕರಿಗೆ ಬಾಲ್ಯವಿವಾಹದ ಕುರಿತ ಜಾಗೃತಿ ಮೂಡಿಸಿದಾಗ ಮಾತ್ರ ಬಾಲ್ಯ ವಿವಾಹ ತಡೆಗಟ್ಟಬಹುದು ಎಂದರು.

ಪಾಲಕರು ಬಾಲ್ಯ ವಿವಾಹ ಮಾಡುವ ಮೂಲಕ ಮಕ್ಕಳ ಹಕ್ಕುಗಳಾದ ಬದುಕುವ, ಶಿಕ್ಷಣದ, ಆರೋಗ್ಯ, ರಕ್ಷಣೆಯ ಹಕ್ಕು, ವಿಕಾಸ ಹೊಂದುವ ಹಕ್ಕು, ಸ್ವಾತಂತ್ರ್ಯದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಬಾಲ್ಯ ವಿವಾಹ ಮಾಡುವುದರಿಂದ ಮಕ್ಕಳು ಮಾನಸಿಕ ದೌರ್ಬಲ್ಯಕ್ಕೆ ಒಳಗಾಗುತ್ತಾರೆ. ಭಯದ ವಾತಾವರಣದಲ್ಲಿ ಬದುಕಬೇಕಾಗುತ್ತದೆ. ಮಾನಸಿಕ ಚಿತ್ರ ಹಿಂಸೆಗಳು ಅನುಭವಿಸುತ್ತಾರೆ. ಆದ್ದರಿಂದ ಮಕ್ಕಳಿಗೆ ವಯಸ್ಸಿಗೆ ಅನುಗುಣವಾಗಿ ಮದುವೆ ಮಾಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

ಆಡಿ ಬೆಳೆಯಬೇಕಾದ ಮಕ್ಕಳು 15 -16 ವರ್ಷದಲ್ಲಿಯೇ ಒಂದು ಮಗುವಿನ ತಾಯಿಯಾಗಿ ಅದಕ್ಕೆ ಲಾಲನೆ ಪಾಲನೆ ಮಾಡುವುದು ತುಂಬ ಕಷ್ಟÜ. ಈ ಅನಿಷ್ಟ ಪದ್ಧತಿಯನ್ನು ಹೋಗಲಾಡಿಸಲು ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಮೂಲಕ ಮಕ್ಕಳ ಹಕ್ಕುಗಳನ್ನು ಕಾಪಾಡಲು ಮುಂದಾಗಬೇಕು ಎಂದು ಸಂವಾದದಲ್ಲಿ ಪಾಲ್ಗೊಂಡ ಎಲ್ಲ ಅಧಿಕಾರಿಗಳಿಗೆ ಹೇಳಿದರು.

ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಚಂದ್ರಶೇಖರ್‌ ರೆಡ್ಡಿ ಮಾತನಾಡಿ, ಬಾಲ್ಯ ವಿವಾಹ ತಡೆಗಟ್ಟಲು ಮುಂದಾದರೂ ಸಹಿತ ಸಮಾಜದಲ್ಲಿ ಹಾಗೆಯೇ ಮುಂದುವರಿದಿದೆ. ದಂಡ, ಸಜೆ, ಬಂಧನ ಆಗುತ್ತಿಲ್ಲ. ಮುಖ್ಯವಾಗಿ ತಂದೆ ತಾಯಿಗಳಲ್ಲಿ ಬಾಲ್ಯ ವಿವಾಹ ತಡೆಗಟ್ಟಲು ಮನ ಪರಿವರ್ತನೆ ಮಾಡಬೇಕು ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಮಹಾಂತೇಶ್‌ ಬೀಳಗಿ ಅಧ್ಯಕ್ಷತೆ ವಹಿಸಿ, ಮನುಷ್ಯ ಸಂಘ ಜೀವಿ. ಆದ್ದರಿಂದ ಎಲ್ಲರೂ ಚಿಕ್ಕಂದಿನಿಂದ ಮೌಲ್ಯಗಳು ತಿಳಿದುಕೊಳ್ಳಲು ಮುಂದಾದಾಗ ಸದೃಢÜ ನಾಗರಿಕರಾಗಿ ಸಮಾಜದಲ್ಲಿ ಸೇವೆ ಸಲ್ಲಿಸಬಹುದು ಎಂದರು.

ಶಾಲಾ ಕಾಲೇಜುಗಳಲ್ಲಿ ಬಾಲ್ಯ ವಿವಾಹದ ಕುರಿತ ಜಾಗೃತಿ ಮೂಡಿಸಬೇಕು. ಮೊದಲು ಗ್ರಾಮ ಮಟ್ಟದಲ್ಲಿನ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮಂಜುನಾಥ ಪ್ರಾಸ್ತಾವಿಕ ಮಾತನಾಡಿದರು.

ಮ.ಕ.ಸ. ಅಧ್ಯಕ್ಷೆ ಕವಿತಾ ಹುಷಾರೆ, ನ್ಯಾಯಾಧೀಶರು ಹಾಗೂ ಜಿ.ಕಾ.ಸೇ.ಪ್ರಾ. ಸದಸ್ಯ ಕಾರ್ಯದರ್ಶಿ ಆರ್‌. ರಾಘವೇಂದ್ರ, ನ್ಯಾಯಾಧೀಶರು, ಪೊಲೀಸ್‌ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. ಸಾಹಿತಿ ರಜಿಯಾ ಬಳಬಟ್ಟಿ ಪ್ರಾರ್ಥಿಸಿದರು. ಮ.ಕ. ಅಧಿಕಾರಿ ಗೌರಿಶಂಕರ್‌ ಪ್ರತಾಪ್‌ ನಿರೂಪಿಸಿದರು.

ಬಾಲ್ಯ ವಿವಾಹ ತಡೆಗಟ್ಟುವ 'ಕಮಲಿ' ಸಾಕ್ಷ್ಯಚಿತ್ರವು ಎಲ್ಲರ ಮನ ಸೆಳೆಯಿತು. ಕವಿತಾ ಹುಷಾರೆ, ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶೆ ನಿರ್ಮಲಾದೇವಿ ಎಸ್‌., ಅಭಿಯೋಜಕ ಭೀಮಾಶಂಕರ್‌ ಅಂಬಲಗಿ, ಪ್ರಾಂಶುಪಾಲ ಮುನಿಯಪ್ಪ ಟಿ., ಬಾಲ್ಯ ವಿವಾಹದ ಕುರಿತು ವಿಷಯ ಮಂಡನೆ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ