ಆ್ಯಪ್ನಗರ

ಬರ ಪ್ರದೇಶಕ್ಕೆ ಈಶ್ವರಪ್ಪ ಟೀಂ ಭೇಟಿ ನಾಳೆ

ಬರ ಪೀಡಿತ ಪ್ರದೇಶಗಳನ್ನು ವೀಕ್ಷಿಸಲು ಹಾಗೂ ಅಧ್ಯಯನ ನಡೆಸಲು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಅವರ ನೇತೃತ್ವದ ರಾಜ್ಯ ಬಿಜೆಪಿ ತಂಡವು ಡಿ. 2 ಹಾಗೂ 3 ರಂದು ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದೆ.

Vijaya Karnataka 2 Dec 2018, 5:00 am
ಬೀದರ್‌: ಬರ ಪೀಡಿತ ಪ್ರದೇಶಗಳನ್ನು ವೀಕ್ಷಿಸಲು ಹಾಗೂ ಅಧ್ಯಯನ ನಡೆಸಲು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಅವರ ನೇತೃತ್ವದ ರಾಜ್ಯ ಬಿಜೆಪಿ ತಂಡವು ಡಿ. 2 ಹಾಗೂ 3 ರಂದು ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದೆ. ಡಿ. 2 ರಂದು ಸಂಜೆ ಬೀದರ್‌ಗೆ ಆಗಮಿಸಿ ಹಬ್ಸಿಕೋಟ್‌ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡುವರು. 3 ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಸಭೆ ನಡೆಸುವರು. ನಂತರ ಬೀದರ್‌ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಆಣದೂರು ಗ್ರಾಮದ ಕೆರೆ ಹಾಗೂ ಬರ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸುವರು.
Vijaya Karnataka Web eshwarappa will visit the drought area tomorrow
ಬರ ಪ್ರದೇಶಕ್ಕೆ ಈಶ್ವರಪ್ಪ ಟೀಂ ಭೇಟಿ ನಾಳೆ


ಹುಮನಾಬಾದ್‌ ತಾಲೂಕಿನ ಹಳ್ಳಿಖೇಡ್‌ ಹೋಬಳಿಯ ಕೆಲ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡುವರು. ಚಿಟಗುಪ್ಪ ತಾಲೂಕಿನ ಬರ ಪ್ರದೇಶಕ್ಕೂ ತೆರಳುವರು. ಬಳಿಕ ಹುಮನಾಬಾದ್‌ ನಗರದ ಆರ್ಯ ಸಮಾಜದ ಮಂದಿರದಲ್ಲಿ ಬೆಳಗ್ಗೆ 11ಕ್ಕೆ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುವರು.

ಈಶ್ವರಪ್ಪ ಅವರ ತಂಡದಲ್ಲಿ ಶಾಸಕ ಗೋವಿಂದ ಕಾರಜೋಳ, ಎಂಎಲ್ಸಿ ಎನ್‌. ರವಿಕುಮಾರ, ಸಂಸದ ಭಗವಂತ ಖೂಬಾ, ಮಾಜಿ ಸಚಿವರಾದ ಲಕ್ಷ್ಮಣ ಸವದಿ, ಬಾಬುರಾವ್‌ ಚವ್ಹಾಣ್‌, ಶಾಸಕ ನರಸಿಂಹ ನಾಯಕ, ಶಾಸಕ ದತ್ತಾತ್ರೇಯ ಪಾಟೀಲ ರೇವೂರ್‌ ಇರಲಿದ್ದಾರೆ. ಜಿಲ್ಲಾಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಎಂಎಲ್ಸಿ ರಘುನಾಥರಾವ ಮಲ್ಕಾಪೂರೆ, ಶಾಸಕ ಪ್ರಭು ಚವ್ಹಾಣ, ಮಾಜಿ ಶಾಸಕರಾದ ಸುಭಾಷ್‌ ಕಲ್ಲೂರ್‌, ರಾಜೆಂದ್ರ ವರ್ಮಾ, ಮಲ್ಲಿಕಾರ್ಜುನ ಖೂಬಾ, ಪಕ್ಷದ ಮುಖಂಡರಾದ ಸೂರ್ಯಕಾಂತ ನಾಗಮಾರಪಳ್ಳಿ, ಡಿ.ಕೆ.ಸಿದ್ರಾಮ, ಪದ್ಮಾಕರ್‌ ಪಾಟೀಲ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸೋಮನಾಥ ಪಾಟೀಲ್‌, ಬಾಬುರಾವ್‌ ಕಾರಬಾರಿ, ಈಶ್ವರ್‌ಸಿಂಗ್‌ ಠಾಕೂರ, ಜಯಕುಮಾರ ಕಾಂಗೆ ಮತ್ತಿತರರು ಇರುವರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ