ಆ್ಯಪ್ನಗರ

ಮುಂಗಾರು ಅವಧಿಯ ಬಿತ್ತನೆ ಪೂರ್ಣವಾಗುವವರೆಗೆ ರಸಗೊಬ್ಬರ ಪೂರೈಕೆ: ಭಗವಂತ ಖೂಬಾ

ಪೂರ್ಣ ಮುಂಗಾರು ಬಿತ್ತನೆ ಆಗುವರೆಗೆ ಜಿಲ್ಲೆಯಲ್ಲಿ ರಸಗೊಬ್ಬರ ಕಡಿಮೆಯಾಗದಂತೆ ಕ್ರಮ ವಹಿಸಲಾಗುತ್ತದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವರಾದ ಭಗವಂತ ಖೂಬಾ ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದರು.

Lipi 21 Jun 2022, 5:21 pm
ಬೀದರ : ಪೂರ್ಣ ಮುಂಗಾರು ಬಿತ್ತನೆ ಆಗುವರೆಗೆ ಜಿಲ್ಲೆಯಲ್ಲಿ ರಸಗೊಬ್ಬರ ಕಡಿಮೆಯಾಗದಂತೆ ಕ್ರಮ ವಹಿಸಲಾಗುತ್ತದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವರಾದ ಭಗವಂತ ಖೂಬಾ ಹೇಳಿದರು.
Vijaya Karnataka Web fertilizer

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದರು.

ನಮ್ಮ ಜಿಲ್ಲೆ ಒಳಗೊಂಡಂತೆ ರಾಜ್ಯಕ್ಕೆ ಎಷ್ಟು ರಸಗೊಬ್ಬರ ಬೇಕು ಅದನ್ನು ಕಳುಹಿಸುವ ಜವಾಬ್ದಾರಿ ನಮ್ಮ ಮೇಲಿದೆ. ಮಳೆ ಹೆಚ್ಚು ಕಡಿಮೆಯಾಗಿ ರಸಗೊಬ್ಬರ ಬೇಡಿಕೆ ಬಂದರೆ ಮೂರು ದಿನದ ಒಳಗಾಗಿ ಇನ್ನೂ ಹೆಚ್ಚು ರಸಗೊಬ್ಬರ ಬೇಕಾದರೂ ಕಳುಹಿಸಿ ಕೊಡುತ್ತೇವೆ. ಕೃಷಿ ಅಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿ ರಸಗೊಬ್ಬರ ಮಾರಾಟದ ಕೇಂದ್ರಗಳಿಗೆ ಭೇಟಿ ನೀಡಿ ಗೊಬ್ಬರ ಮಾರಾಟದ ಕುರಿತು ಮಾಹಿತಿ ಪಡೆಯಬೇಕು ಮತ್ತು ಎನಾದರೂ ಸಮಸ್ಯೆಗಳಿದ್ದರೆ ಸಂಬಂಧಿಸಿದ ಅಧಿಕಾರಿಗಳು ತಮ್ಮ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಅಥವಾ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕೆಂದು ಅವರು ಹೇಳಿದರು.

ಮುಂಗಾರು ಬಿತ್ತನೆಗೆ ಸಕಲ ತಯಾರಿ: ಹರಪನಹಳ್ಳಿಯಲ್ಲಿ 85,300 ಹೆಕ್ಟೇರ್‌ ಬಿತ್ತನೆ ಗುರಿ

ಯಾವುದೇ ಕಾರಣಕ್ಕೆ ಜಿಲ್ಲೆಯಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಬೇಕು ಒಂದು ವೇಳೆ ಹಾಗೇನಾದರು ಆದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧವೇ ಕ್ರಮ ವಹಿಸಬೇಕಾಗುತ್ತದೆ. ಸಂಪೂರ್ಣ ಮುಂಗಾರು ಬಿತ್ತನೆಯಾಗುವರೆಗೆ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಆಗಬಾರದು ಎಂದು ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳಾದ ಗೊವಿಂದ ರೆಡ್ಡಿ ಅವರು ಮಾತನಾಡಿ ಜಿಲ್ಲೆಯಲ್ಲಿ ಜೂನ್ 19ರ ವರೆಗೆ 9646.5 ಮೆಟ್ರಿಕ್ ಟನ್ ರಸಗೊಬ್ಬರ ಸ್ಟಾಕ್ ಇದ್ದು, ಇನ್ನೂ ಗೊಬ್ಬರ ಕಳುಹಿಸುವವರಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ರಸಗೊಬ್ಬರ ಕೊರತೆಯಾಗದಂತೆ ಕೃಷಿ ಅಧಿಕಾರಿಗಳು ಮತ್ತು ಸಹಕಾರ ಇಲಾಖೆ ಅವರನ್ನು ಕರೆದು ಮಾಹಿತಿ ನೀಡಲಾಗಿದೆ. ಕೇಂದ್ರ ಸಚಿವರ ನಿರ್ದೇಶನದಂತೆ ಪ್ರಾಥಮಿಕ ಕೃಷಿ ಪತ್ತಿನ ಸಂಘ ಖಾಸಗಿ ಡೀಲರ್‌ಗಳ ಅಂಗಡಿಗಳಿಗೆ ಅಧಿಕಾರಿಗಳು ಭೇಟಿ ನೀಡಿ ರಸಗೊಬ್ಬರದ ಮಾಹಿತಿ ಪಡೆಯುತ್ತಿದ್ದಾರೆ. ತಾಲೂಕು ಮಟ್ಟದಲ್ಲಿ ಟಾಸ್ಕ್‌ಪೊರ್ಸ್ ಸಮಿತಿ ಸಭೆ ನಡೆಸಿ ಮಾಹಿತಿ ನೀಡಲಾಗುತ್ತಿದೆ. ಇಡೀ ಜಿಲ್ಲೆಗೆ ಗೊಬ್ಬರ ಸರಬರಾಜು ಮಾಡಲು ಜಿಲ್ಲಾಡಳಿತ ಅಗತ್ಯ ಕ್ರಮ ವಹಿಸಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಮುಂಗಾರಿನ ಭರ್ಜರಿ ಮಳೆಯಿಂದ ಪೂರೈಕೆಯಲ್ಲಿ ಕೊರತೆ: ತರಕಾರಿ ದರದಲ್ಲಿ ಏರಿಳಿತ

ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯ ಅಡೀಷನಲ್ ಡೈರೆಕ್ಟರ್ ವೆಂಕಟರಮಣ ರೆಡ್ಡಿ ಮಾತನಾಡಿ ರಾಜ್ಯದಲ್ಲಿ ಎಲ್ಲಾ ರಸಗೊಬ್ಬರ ಸೇರಿ 12 ಲಕ್ಷ 56 ಸಾವಿರ ಬೇಡಿಕೆ ಇದ್ದು, 15 ಲಕ್ಷ 76 ಸಾವಿರ ರಾಜ್ಯಕ್ಕೆ ರಸಗೊಬ್ಬರ ಬಂದಿದ್ದು, ಸದ್ಯ ಇದರ ಕೊರತೆ ಇರುವುದಿಲ್ಲ ಎಂದು ಹೇಳಿದರು. ಈ ಪತ್ರಿಕಾಗೊಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಹೀರಾ ನಸೀಮ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ತಾರಾಮಣಿ ಜಿ.ಎಚ್. ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ