ಆ್ಯಪ್ನಗರ

ಬಸವಕಲ್ಯಾಣ ಉಪ ಚುನಾವಣೆ: ಸ್ಥಳೀಯರಿಗೆ ಟಿಕೆಟ್ ನೀಡಿ, ಪಕ್ಷದ ವರಿಷ್ಠರಿಗೆ ಸಂದೇಶ ರವಾನಿಸಿದ ನಾಯಕರು

ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ಸುಮಾರು 12ಕ್ಕೂ ಆಧಿಕ ಸ್ಥಳೀಯ ಆಕಾಂಕ್ಷಿಗಳು ಟಿಕೆಟ್‌ಗಾಗಿ ಪೈಪೋಟಿ ನಡೆಸುತ್ತಿರುವುದು ಒಂದೆಡೆಯಾದರೆ, ಹೊರ ತಾಲೂಕು ಮತ್ತು ನೆರೆ ಜಿಲ್ಲೆಗಳಿಂದ ಇಲ್ಲಿಗೆ ಬಂದು ಟಿಕೆಟ್ ಕೇಳುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ.

Vijaya Karnataka Web 20 Nov 2020, 7:54 pm
ಬಸವಕಲ್ಯಾಣ: ಶೀಘ್ರ ನಡೆಯಲಿರುವ ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಟಿಕೆಟ್ ಅನ್ನು ಬಸವಕಲ್ಯಾಣದ ಸ್ಥಳೀಯರಿಗೆ ನೀಡಬೇಕು. ಹೊರಗಿನಿಂದ ಬಂದವರಿಗೆ ನೀಡಬಾರದು ಎಂದು ಸ್ಥಳೀಯ ಟಿಕೆಟ್ ಆಕಾಂಕ್ಷಿಗಳೆಲ್ಲರೂ ಒಂದೆಡೆ ಸೇರಿ ಶಕ್ತಿ ಪ್ರದರ್ಶನ ನಡೆಸಿದರು.
Vijaya Karnataka Web ಬಸವಕಲ್ಯಾಣ ನಾಯಕರು
ಬಸವಕಲ್ಯಾಣ ನಾಯಕರು


ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಆಗಮನದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ನಗರದ ಬಿಜೆಪಿ ಹಿರಿಯ ಮುಖಂಡ ಸಂಜಯ್ ಪಟವಾರಿ ಅವರ ನಿವಾಸದಲ್ಲಿ ಸಭೆ ನಡೆಸಿದ ಸ್ಥಳೀಯ ಟಿಕೆಟ್ ಆಕಾಂಕ್ಷಿಗಳು, ಪರಸ್ಪರ ಪ್ರತಿಷ್ಠೆ ಬದಿಗಿಟ್ಟು ಎಲ್ಲರೂ ಒಗ್ಗಟ್ಟು ಪ್ರದರ್ಶಿಸಿದರು. ಸ್ಥಳೀಯರನ್ನು ಕಡೆಗಣಿಸಿ, ಹೊರಗಿನವರಿಗೆ ಟಿಕೆಟ್ ಸಿಗಲು ಬಿಡಲ್ಲ ಎನ್ನುವ ಸಂದೇಶ ಸಾರಿದರು.

ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಮುಖಂಡರಾದ ಸಂಜಯ ಪಟವಾರಿ, ಗುಂಡುರೆಡ್ಡಿ, ಪ್ರದೀಪ ವಾತಡೆ, ಅನೀಲ, ಉಮೇಶ ಬಿರಬಿಟ್ಟೆ, ವಿಜಯ ಕುಮಾರ ಮಂಠಾಳೆ, ಸೂರ್ಯಕಾಂತ ಚಿಲ್ಲಾಬಟ್ಟೆ ಸೇರಿದಂತೆ ಹಲವರು ಕೈಜೋಡಿಸಿ ಒಗ್ಗಟ್ಟು ಪ್ರದರ್ಸಿಸಿದರು.

ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಹಾಗೂ ಭಿನ್ನಮತ ಇಲ್ಲ. ನಾವೆಲ್ಲರೂ ಒಂದೇ ಆಗಿದ್ದೇವೆ. ಸ್ಥಳೀಯರ ಪೈಕಿ ಯಾರಿಗೆ ಟಿಕೆಟ್ ನೀಡಿದರೂ ನಾವೆಲ್ಲ ಕೂಡಿ ಪಕ್ಷ ಗುರುತಿಸಿದ ಅಭ್ಯರ್ಥಿ ಗೆಲ್ಲಿಸಿಕೊಡುತ್ತೇವೆ ಎಂದರು.

ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ಸುಮಾರು 12ಕ್ಕೂ ಆಧಿಕ ಸ್ಥಳೀಯ ಆಕಾಂಕ್ಷಿಗಳು ಟಿಕೆಟ್‌ಗಾಗಿ ಪೈಪೋಟಿ ನಡೆಸುತ್ತಿರುವುದು ಒಂದೆಡೆಯಾದರೆ, ಹೊರ ತಾಲೂಕು ಮತ್ತು ನೆರೆ ಜಿಲ್ಲೆಗಳಿಂದ ಇಲ್ಲಿಗೆ ಬಂದು ಟಿಕೆಟ್ ಕೇಳುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ.

ಹೀಗಾಗಿ, ನಮ್ಮಲ್ಲಿಯ ಒಡಕಿನ ಲಾಭ ಪಡೆದು ಹೊರಗಿನಿಂದ ಬಂದವರಿಗೆ ಟಿಕೆಟ್ ನೀಡಿದರೆ ಹೇಗೆ?, ಇದರಿಂದ ಪಕ್ಷದ ಸ್ಥಳೀಯರು ಅವಕಾಶದಿಂದ ವಂಚನೆಗೆ ಒಳಗಾಗಬೇಕಾಗುತ್ತದೆ ಎನ್ನುವ ಕಾರಣ ಎಲ್ಲರೂ ಕೂಡಿ ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎನ್ನುವ ಬೇಡಿಕೆಯನ್ನು ಪಕ್ಷದ ವರಿಷ್ಠರ ಮುಂದಿಡಲು ನಿರ್ಧಸಿದ್ದೇವೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ