ಆ್ಯಪ್ನಗರ

ಹೊಟ್ಟೆ ನೋವು ತಾಳಲಾರದೆ ವ್ಯಕ್ತಿ ಸಾವು

ಹೊಟ್ಟೆ ನೋವು ತಾಳಲಾರದೆ ವ್ಯಕ್ತಿಯೊಬ್ಬ ಸೀಮೆಎಣ್ಣೆ ಸುರಿದುಕೊಂಡು ಮೃತಪಟ್ಟಿರುವ ಘಟನೆ ತಾಲೂಕಿನ ನೇಳಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ವಿಕ ಸುದ್ದಿಲೋಕ 4 Mar 2017, 4:51 pm

ಭಾಲ್ಕಿ: ಹೊಟ್ಟೆ ನೋವು ತಾಳಲಾರದೆ ವ್ಯಕ್ತಿಯೊಬ್ಬ ಸೀಮೆಎಣ್ಣೆ ಸುರಿದುಕೊಂಡು ಮೃತಪಟ್ಟಿರುವ ಘಟನೆ ತಾಲೂಕಿನ ನೇಳಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.

Vijaya Karnataka Web hoe nvu talrade vyakti svu
ಹೊಟ್ಟೆ ನೋವು ತಾಳಲಾರದೆ ವ್ಯಕ್ತಿ ಸಾವು


ಯಲಸನ ಸ್ವಾಮಿದಾಸ(25) ಮೃತ. ಈತ ಮದ್ಯ ವ್ಯಸನಿಯಾಗಿದ್ದು, 5 ವರ್ಷಗಳಿಂದ ವಿಪರರೀತ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಎನ್ನಲಾಗಿದೆ. ಫೆ.26ರಂದು ಮನೆಯಲ್ಲಿ ಸೀಮೆ ಎಣ್ಣೆ ಸುರಿದುಕೊಂಡು ಮೈಸುಟ್ಟುಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗಿದೆ ಗುರುವಾರ ಮೃತಪಟ್ಟಿದ್ದಾರೆ. ಪತ್ನಿ ರೇಣುಕಾ ಯಲಸನ ನೀಡಿರುವ ದೂರಿನ ಮೇರೆಗೆ ಧನ್ನೂರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ ಕಳವು: ದೂರು ದಾಖಲು

ಪಟ್ಟಣದ ಬಾಲಾಜಿ ಮಂದಿರ ಹೊರಭಾಗದ ರಸ್ತೆಯಲ್ಲಿ ನಿಲ್ಲಿಸಿದ ದ್ವಿಚಕ್ರವಾಹನ ಕಳವು ಆಗಿರುವ ಘಟನೆ ಬುಧವಾರ ಜರುಗಿದೆ. ತಾಲೂಕಿನ ಜೋಳದಾಪಕಾ ಗ್ರಾಮದ ವಿಜಯಕುಮಾರ ಕಾಶಿನಾಥರಾವ ಹುಣಸನಾಳೆ ಎಂಬುವರಿಗೆ ಸೇರಿದ ಬೈಕ್‌ ಕಳವು ಆಗಿದೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ