ಆ್ಯಪ್ನಗರ

ಈಶ್ವರ -ಪ್ರಭು ಪೋಸ್ಟ್‌ ವೈರಲ್‌:ಚವ್ಹಾಣ ಸ್ಪಷ್ಟನೆ

ಶಾಸಕ ಪ್ರಭು ಚವ್ಹಾಣ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಈಶ್ವರ ಖಂಡ್ರೆಯವರ ಹಳೆ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಈಶ್ವರ ಖಂಡ್ರೆಗೆ ಶಾಸಕ ಪ್ರಭು ಚವ್ಹಾಣ ಬೆಂಬಲ ನೀಡಿದ್ದಾರೆ ಎಂಬ ಪೋಸ್ಟ್‌ಗೆ ಶಾಸಕ ಚವ್ಹಾಣ ಆಕ್ಷೇಪಿಸಿದ್ದಾರೆ.

Vijaya Karnataka 23 Apr 2019, 5:00 am
ಔರಾದ್‌:ಶಾಸಕ ಪ್ರಭು ಚವ್ಹಾಣ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಈಶ್ವರ ಖಂಡ್ರೆಯವರ ಹಳೆ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಈಶ್ವರ ಖಂಡ್ರೆಗೆ ಶಾಸಕ ಪ್ರಭು ಚವ್ಹಾಣ ಬೆಂಬಲ ನೀಡಿದ್ದಾರೆ ಎಂಬ ಪೋಸ್ಟ್‌ಗೆ ಶಾಸಕ ಚವ್ಹಾಣ ಆಕ್ಷೇಪಿಸಿದ್ದಾರೆ.
Vijaya Karnataka Web ishwar prabhupada post viral the clearance of the question
ಈಶ್ವರ -ಪ್ರಭು ಪೋಸ್ಟ್‌ ವೈರಲ್‌:ಚವ್ಹಾಣ ಸ್ಪಷ್ಟನೆ


ಈ ಕುರಿತು ಪ್ರಕಟಣೆ ಹೊರಡಿಸಿದ ಅವರು, ಇದೊಂದು ಸುಳ್ಳು ಸುದ್ದಿಯಾಗಿದ್ದು ಅತಿ ಹಳೆ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹಾಕಿ ತಾಲೂಕಿನ ಮತದಾರರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

''ಸತತ ಮೂರು ಸಲ ತಾಲೂಕಿನ ಮತದಾರ ನನ್ನನ್ನು ಕ್ಷೇತ್ರದಿಂದ ಶಾಸಕನಾಗಿ ಆಯ್ಕೆ ಮಾಡಿದ್ದಾರೆ, ಹೀಗಾಗಿ ಅನೇಕ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಾನು ಈಶ್ವರ ಖಂಡ್ರೆ ಜೊತೆ ವೇದಿಕೆ ಹಂಚಿಕೊಂಡಿದ್ದೆನೆ, ಅಂದು ತೆಗೆದ ಭಾವಚಿತ್ರವನ್ನು ನನ್ನ ಹೆಸರಿಗೆ ಮಸಿ ಬಳಿಯಲು ಕಿಡಿಗೇಡಿಗಳು ಲೋಕಸಭೆ ಚುನಾವಣೆಯಲ್ಲಿ ಬಳಸಿಕೊಂಡಿದ್ದು ಈ ಬಗ್ಗೆ ಚುನಾವಣಾಧಿಕಾರಿಗೆ ಲಿಖಿತ ದೂರು ಸಹ ಸಲ್ಲಿಸಲಾಗಿದೆ''ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

''ನಾನು ಎಂದು ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ,ಸಾಮಾನ್ಯ ಕಾರ್ಯಕರ್ತನಿಗೆ ಪಕ್ಷ ಮೂರು ಸಲ ಟಿಕೆಟ್‌ ನೀಡಿ ಪಕ್ಷದಲ್ಲಿ ಎತ್ತರಕ್ಕೆ ಬೆಳೆÜಸಿದ್ದು ಅಂತಹ ಪಕ್ಷಕ್ಕೆ ದ್ರೋಹ ಬಗೆಯುವುದಿಲ್ಲ. ತಾಲೂಕಿನ ಮತದಾರ ಸುಳ್ಳು ವದಂತಿಗಳಿಗೆ ಕಿವಿಗೊಡದೆ ನಮ್ಮ ಪಕ್ಷದ ಅಭ್ಯರ್ಥಿ ಭಗವಂತ ಖುಬಾ ಅವರನ್ನು ಬೆಂಬಲಿಸಬೇಕು''ಎಂದು ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ