ಭಾಲ್ಕಿ: ಕಾಂಗ್ರೆಸ್ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಹಾಗೂ ಪಕ್ಷ ದ ಕಾರ್ಯಕರ್ತರ ಸಮಸ್ಯೆಗಳನ್ನು ಆಲಿಸಲು ನ.4ರಂದು ಶುಕ್ರವಾರ ಬೀದರ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡುರಾವ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದ ಭೀಮಣ್ಣ ಖಂಡ್ರೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೃಷಿ ಉತ್ಪನ್ನ ಮಾರುಕಟ್ಟೆ ಹಾಗೂ 2018ರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಅಂದು ದಿನವಿಡಿ ಈ ಮಹತ್ವದ ಸಭೆ ಜರುಗಲಿದೆ. ಅವರು ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿ ಕಾರ್ಯಕರ್ತರ ಜತೆಗೆ ಸಮಾಲೋಚನೆ ನಡೆಸಲಿದ್ದಾರೆ.
ಮಧ್ಯಾಹ್ನ 2ಕ್ಕೆ ಅಕ್ಕ ಮಹಾದೇವಿ ಕಾಲೇಜಿನಲ್ಲಿ ಪತ್ರಿಕಾ ಗೋಷ್ಠಿ, ಮಧ್ಯಾಹ್ನ 3ಕ್ಕೆ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಖಾಜಿ ಅರ್ಷದ್ ಅಲಿ ನೇತೃತ್ವದಲ್ಲಿ, ಹಿರಿಯ ಪದಾಧಿಕಾರಿಗಳು, ಯುವ ಘಟಕದ ಪದಾಧಿಕಾರಿಗಳು, ಸೇವಾದಲ್, ಮಹಿಳಾ ಕಾಂಗ್ರೆಸ್, ಎನ್ಎಸ್ವೈ, ಕೆಪಿಸಿಸಿ ಪದಾಧಿಕಾರಿಗಳು, ಜಿಪಂ ಅಧ್ಯಕ್ಷ , ಸದಸ್ಯರು, ತಾಪಂ ಅಧ್ಯಕ್ಷ , ಸದಸ್ಯರು, ಎಲ್ಲ ಜನಪ್ರತಿನಿಧಿಗಳು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರು, ಸದಸ್ಯರು, ಮಾಜಿ ಬ್ಲಾಕ್ ಸದಸ್ಯರು, ಪಕ್ಷ ದ ಪ್ರಮುಖರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಗತ್ಯ ಸಲಹೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು.
ಸದಸ್ಯತ್ವ ನೋಂದಣಿ
ಅಂದು ಮಧ್ಯಾಹ್ನ 1.30ಕ್ಕೆ ಯುವ ಕಾಂಗ್ರೆಸ್ ವತಿಯಿಂದ ಬೀದರ್ನ ನಿಜಾಂ ಹಾಲ್ನಲ್ಲಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ , ವಿಧಾನ ಪರಿಷತ್ ಸದಸ್ಯ ರಿಜ್ವಾನ ಅರ್ಷದ್ ಚಾಲನೆ ನೀಡವರು. ಪ್ರತಿ ವಿಧಾನ ಸಭೆ ಕ್ಷೇತ್ರದಿಂದ ಕನಿಷ್ಠ 10 ಸಾವಿರ ಸದಸ್ಯರ ನೋಂದಣಿ ಪ್ರಕ್ರಿಯೆ ನಡೆಯಲಿದೆ ಎಂದು ಸಚಿವ ಖಂಡ್ರೆ ತಿಳಿಸಿದರು.
ಇನ್ಪುಟ್ ಸಬ್ಸಿಡಿ ಹಣ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ
2015-16ನೇ ಸಾಲಿನಲ್ಲಿ ರಬ್ಬಿ ಬೆಳೆ ಹಾನಿಯಾದ ಇನ್ಪುಟ್ ಸಬ್ಸಿಡಿ ಹಣ ರೈತರ ಖಾತೆಗೆ ಜಮಾ ಆಗದಿರುವ ಬಗ್ಗೆ ಗಮನಕ್ಕೆ ಬಂದಿದೆ. ಸಂಬಂಧಿತ ಅಧಿಕಾರಿಗಳ ನಿರ್ಲಕ್ಷ ್ಯದಿಂದ ಭಾಲ್ಕಿ ಸೇರಿದಂತೆ ಜಿಲ್ಲೆಯ ಹಲವು ಕಡೆ ಬ್ಯಾಂಕ್ಗಳಲ್ಲಿ ಸುಮಾರು 10-12 ಕೋಟಿ ಹಣ ಹಾಗೇ ಉಳಿದುಕೊಂಡಿದೆ. ನಿರ್ಲಕ್ಷ ್ಯ ತೋರಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಸೂಚನೆ ನೀಡಲಾಗಿದೆ. ಹಾನಿಯಾದ ಬೆಳೆಗಳಿಗೆ ಪರಿಹಾರ ವಿತರಿಸಲು 27 ಕೋಟಿ ರೂ ಬಿಡುಗಡೆ ಆಗಿದ್ದು, ಶೀಘ್ರ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ತಿಳಿಸಿದರು.
ರಸ್ತೆ, ಸೇತುವೆ ದುರುಸ್ತಿಗೆ 20 ಕೋಟಿ ಬಿಡುಗಡೆ
ಸೆಪ್ಟೆಂಬರ್ ತಿಂಗಳಿನಲ್ಲಿ ಸುರಿದ ಮಳೆಗೆ ತಾಲೂಕು ಸೇರಿದಂತೆ ಜಿಲ್ಲೆಯ ರಸ್ತೆ, ಸೇತುವೆ, ಕೆರೆಗಳು ಒಡೆದು ಹೋಗಿದ್ದು ದುರಸ್ತಿಗೆ ರಾಜ್ಯ ಸರಕಾರದಿಂದ 20 ಕೋಟಿ ರೂ ಬಿಡುಗಡೆ ಮಾಡಿಸಿದೆ. ಒಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತ ಪಡಿಸಿದರು.
ಅತಿಥಿ ಶಿಕ್ಷ ಕರ ಭರ್ತಿಗೆ ಕ್ರಮ
ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅತಿಥಿ ಶಿಕ್ಷ ಕರನ್ನು ನೇಮಕ ಮಾಡಲು ಕ್ರಮ ಕೈಗೊಂಡಿದ್ದು, ಕಳೆದ ಸಾಲಿನಲ್ಲಿ ಸೇವೆ ಸಲ್ಲಿಸಿದ ಶಿಕ್ಷ ಕರಿಗೆ ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಗಾಯಾಳುಗೆ ಉಚಿತ ಚಿಕಿತ್ಸೆ
ಬೀದರ್ ನಗರದ ಗುಂಪು ಶಹಾಪೂರ್ ರಿಂಗ್ ರಸ್ತೆಯಲ್ಲಿ ಒಳ ಚರಂಡಿ ಕಾಮಗಾರಿಗಾಗಿ ತೋಡಿದ್ದ ಆಳವಾದ ಗುಂಡಿಯಲ್ಲಿ ಸ್ಕೂಟರ್ ಸವಾರ ಬಿದ್ದು ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಗೆ ಅಗತ್ಯ ಬಿದ್ದರೆ ಸರಕಾರದಿಂದ ಹೆಚ್ಚಿನ ಚಿಕಿತ್ಸೆ ನೀಡಲಾಗುವುದು. ಗುಂಡಿಯ ಸುತ್ತ ಫಲಕ ಹಾಕದೇ ನಿರ್ಲಕ್ಷ ್ಯ ತೋರಿರುವ ಗುತ್ತಿಗೆದಾರ, ಎಂಜನಿಯರ್ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಚಿವ ಖಂಡ್ರೆ ಭರವಸೆ ನೀಡಿದರು.
23ಟಿಎಂಸಿ ನೀರು ಸಂಗ್ರಹಿಸಲು ಯೋಜನೆ
ಜಿಲ್ಲೆಯಲ್ಲಿ ನೀರಾವರಿ ಪ್ರದೇಶ ಹೆಚ್ಚಿಸಲು ಚಿಂತನೆ ನಡೆದಿದ್ದು, ಈಗಾಗಲೇ ಕಾರಂಜಾ ಜಲಾಶಯದಲ್ಲಿ 7ಟಿಎಂಸಿ ನೀರು ಸಂಗ್ರಹಗೊಂಡಿದೆ. ಈ ಕುರಿತು ಪ್ರಾಥಮಿಕ ವರದಿ ಸಿದ್ಧ ಪಡಿಸಲಾಗಿದೆ ಎಂದು ಸಚಿವ ಖಂಡ್ರೆ ತಿಳಿಸಿದರು.
ಹೆಚ್ಕೆಆರ್ಡಿಬಿ ಹಣ ಸದ್ಬಳಕೆ
ರಾಜ್ಯದಲ್ಲಿ 6 ಜಿಲ್ಲೆಗಳಲ್ಲಿ ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಹಣ ಸದ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಶೇ.80-90ರಷ್ಟು ಹಣ ಅಭಿವೃದ್ಧಿ ಕಾರ್ಯಗಳಿಗೆ ಖರ್ಚಾಗಿದೆ.
ಬಿಜೆಪಿಯಿಂದ ರಾಜಕೀಯ
ಟಿಪ್ಪು ಸುಲ್ತಾನ ಜಯಂತಿ ನಿಷೇಧ ಮಾಡುವಂತೆ ಬಿಜೆಪಿ ರಾಜಕೀಯ ಮಾಡುತ್ತಿದೆ. ಹಿಂದಿನ ಬಿಜೆಪಿ ಸರಕಾರದಲ್ಲಿ ಸಾಕಷ್ಟು ಹಗರಣ, ಅಧಿಕಾರಿಕ್ಕಾಗಿ ಕಿತ್ತಾಟ ನಡೆದಿದೆ. ಬಿಜೆಪಿ ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಪ್ರಶ್ನೆಯೊಂದಕ್ಕೆ ಸಚಿವ ಖಂಡ್ರೆ ಉತ್ತರಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಖಾಜಿ ಅರ್ಷದ್ ಅಲಿ, ಪ್ರಧಾನ ಕಾರ್ಯದರ್ಶಿ ಅರವಿಂದ ಅರಳಿ, ಯುವ ಕಾಂಗ್ರೆಸ್ ಅಧ್ಯಕ್ಷ ಇರ್ಷದ್ ಪಲ್ವಾನ, ತಾಲೂಕು ಅಧ್ಯಕ್ಷ ಹಣಮಂತರಾವ ಚವ್ಹಾಣ ಇದ್ದರು.