ಆ್ಯಪ್ನಗರ

ತಪ್ಪಿದ ಟಿಕೆಟ್‌ ಮಾಜಿ ಶಾಸಕ ಪ್ರಕಾಶ ಖಂಡ್ರೆ ಬೆಂಬಲಿಗರ ಆಕ್ರೋಶ

ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಪ್ರಕಾಶ ಖಂಡ್ರೆಗೆ ಕೊನೆಯ ಕ್ಷ ಣದಲ್ಲಿ ಟಿಕೆಟ್‌ ಕೈ ತಪ್ಪಿದ್ದಕ್ಕೆ ಕಾರ್ಯಕರ್ತರು, ಬೆಂಬಲಿಗರು ಅಸಮಾಧಾನ ಹೊರಹಾಕಿದರು.

Vijaya Karnataka 17 Apr 2018, 5:02 pm
ಭಾಲ್ಕಿ : ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಪ್ರಕಾಶ ಖಂಡ್ರೆಗೆ ಕೊನೆಯ ಕ್ಷ ಣದಲ್ಲಿ ಟಿಕೆಟ್‌ ಕೈ ತಪ್ಪಿದ್ದಕ್ಕೆ ಕಾರ್ಯಕರ್ತರು, ಬೆಂಬಲಿಗರು ಅಸಮಾಧಾನ ಹೊರಹಾಕಿದರು.
Vijaya Karnataka Web missed tickets the outrage of prakash khandres supporters
ತಪ್ಪಿದ ಟಿಕೆಟ್‌ ಮಾಜಿ ಶಾಸಕ ಪ್ರಕಾಶ ಖಂಡ್ರೆ ಬೆಂಬಲಿಗರ ಆಕ್ರೋಶ


ಪಟ್ಟಣದ ಮಹಾತ್ಮ ಗಾಂಧಿ ವೃತ್ತದ ಎದುರು ಸೋಮವಾರ ನೂರಾರು ಕಾರ್ಯಕರ್ತರು, ಬೆಂಬಲಿಗರು ಜಮಾಯಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಪ್ರತಿಕೃತಿ ಸೇರಿ ಟೈರ್‌ ಸುಟ್ಟು ಬಿಜೆಪಿ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕರಿಗೆ ಟಿಕೆಟ್‌ ಕೈ ತಪ್ಪಿದ್ದರೆ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂಬ ಅನುಮಾನ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಎರಡು ದಶಕಗಳಿಂದ ಬಿಜೆಪಿ ಕಟ್ಟುವಲ್ಲಿ ಮಾಜಿ ಶಾಸಕ ಪ್ರಕಾಶ ಖಂಡ್ರೆ ಕೊಡುಗೆ ಮಹತ್ವದ್ದಾಗಿದೆ. ಎರಡು ಸಲ ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಆದರೆ, ಅಂಥವರಿಗೆ ಈಗ ಬಿಜೆಪಿ ಟಿಕೆಟ್‌ ನೀಡದಿರುವುದು ತೀವ್ರ ಬೇಸರ ಮೂಡಿಸಿದೆ. ಪ್ರಕಾಶ ಖಂಡ್ರೆ ತುಮ್‌ ಆಗೇ ಬಡೋ ಹಮ್‌ ತುಮಾರೇ ಸಾಥ್‌ ಎಂಬ ಘೋಷಣೆ ಕೂಗಿ ಕಾರ್ಯಕರ್ತರು ಅಸಮಾಧಾನ ಹೊರ ಹಾಕಿದರು.


ನಾನು ಅಪ್ಪಟ ಬಿಜೆಪಿಗ ಆದರೆ, ಟಿಕೆಟ್‌ ಕೈ ತಪ್ಪಿದರ ಬಗ್ಗೆ ಸದ್ಯಕ್ಕೆ ಏನೂ ಹೇಳುವುದಿಲ್ಲ ಮುಂದಿನ ನಿರ್ಧಾರ ಬೆಂಬಲಿಗರ ಜತೆ ಚರ್ಚಿಸಿ ಶೀಘ್ರ ಪ್ರಕಟಿಸಲಾಗುವುದು.

- ಪ್ರಕಾಶ ಖಂಡ್ರೆ ಮಾಜಿ ಶಾಸಕ, ಟಿಕೆಟ್‌ ಆಕಾಂಕ್ಷಿ ಭಾಲ್ಕಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ