ಆ್ಯಪ್ನಗರ

ಬಜೆಟ್‌ ಬಂಪರ್ ಕೊಡುಗೆ: ಮೋದಿ ಚಿತ್ರಕ್ಕೆ ಪಂಚಾಮೃತ ಅಭಿಷೇಕ

ಕೇಂದ್ರ ಸರಕಾರದ ಬಜೆಟ್ ನಲ್ಲಿ ಎಲ್ಲರಿಗೂ ಬಂಪರ್ ಕೊಡುಗೆ ನೀಡಲಾಗಿದೆ. ನರೇಂದ್ರ ಮೋದಿ ನೇತೃತ್ವದಲ್ಲಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಬಜೆಟ್ ಇದಾಗಿದೆ.

Vijaya Karnataka Web 2 Feb 2019, 6:32 pm
ಬೀದರ್: ಕೇಂದ್ರ ಸರಕಾರವು ಫೆ. 2 ರಂದು ಮಂಡಿಸಿದ ಬಜೆಟ್ ದೇಶದ ಬಡವರು, ರೈತರು, ಕಾರ್ಮಿಕರು ಮತ್ತು ಮಧ್ಯಮ ವರ್ಗದವರಿಗೆ ಬಂಪರ್ ಕೊಡುಗೆ ನೀಡಿದೆ ಎಂದು ಬಿಜೆಪಿ ಹರ್ಷ ವ್ಯಕ್ತಪಡಿಸಿದೆ.
Vijaya Karnataka Web modi


ಈ ನಿಮಿತ್ತ ಪಕ್ಷದ ಪ್ರಮುಖರು ಶನಿವಾರ ಬೀದರ‌್‌ನ ಅಂಬೇಡ್ಕರ್ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರಕ್ಕೆ ಪಂಚಾಮೃತ ಅಭಿಷೇಕ ಮಾಡಿ, ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕೇಂದ್ರ ಸರಕಾರದ ಬಜೆಟ್ ನಲ್ಲಿ ಎಲ್ಲರಿಗೂ ಬಂಪರ್ ಕೊಡುಗೆ ನೀಡಲಾಗಿದೆ. ನರೇಂದ್ರ ಮೋದಿ ನೇತೃತ್ವದಲ್ಲಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಬಜೆಟ್ ಇದಾಗಿದೆ.

ಸರ್ವರಿಗೂ ಖುಷಿ ಕೊಡುವ ಬಜೆಟ್ ಇದಾಗಿದ್ದರಿಂದ ವಿಜಯೋತ್ಸವ ಆಚರಿಸುತ್ತಿದ್ದೇವೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಬಾಬುವಾಲಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ