ಆ್ಯಪ್ನಗರ

ಪಾಸ್‌ ಪೋರ್ಟ್‌ ಕೇಂದ್ರ; ಅಲ್ಪ ಸಂಖ್ಯಾತರಿಗೆ ಅನುಕೂಲ

ಸಂಸದ ಭಗವಂತ ಖೂಬಾ ಅವರ ಪ್ರಯತ್ನದಿಂದ ಬೀದರ್‌ ನಗರದಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಿಸಿದ್ದರಿಂದ ಜಿಲ್ಲೆಯ ಅಲ್ಪಸಂಖ್ಯಾತರಿಗೆ ಹಜ್‌ ಯಾತ್ರೆ, ವಿದೇಶಗಳಿಗೆ ಉದ್ಯೋಗ ಮಾಡಲು ಹೋಗಲು ಪಾಸ್‌ಪೋರ್ಟ್‌ ಪಡೆಯಲು ಅನುಕೂಲವಾಗಿದೆ ಎಂದು ಬಿಜೆಪಿ ಅಲ್ಪಸಂಖ್ಯಾತರ ಘಟಕದ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯ ರೌಫೋದ್ದೀನ್‌ ಕಚೇರಿವಾಲೆ ಹೇಳಿದರು. .

Vijaya Karnataka 20 Apr 2019, 9:44 pm
ಬೀದರ್‌ :ಸಂಸದ ಭಗವಂತ ಖೂಬಾ ಅವರ ಪ್ರಯತ್ನದಿಂದ ಬೀದರ್‌ ನಗರದಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಿಸಿದ್ದರಿಂದ ಜಿಲ್ಲೆಯ ಅಲ್ಪಸಂಖ್ಯಾತರಿಗೆ ಹಜ್‌ ಯಾತ್ರೆ, ವಿದೇಶಗಳಿಗೆ ಉದ್ಯೋಗ ಮಾಡಲು ಹೋಗಲು ಪಾಸ್‌ಪೋರ್ಟ್‌ ಪಡೆಯಲು ಅನುಕೂಲವಾಗಿದೆ ಎಂದು ಬಿಜೆಪಿ ಅಲ್ಪಸಂಖ್ಯಾತರ ಘಟಕದ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯ ರೌಫೋದ್ದೀನ್‌ ಕಚೇರಿವಾಲೆ ಹೇಳಿದರು.
Vijaya Karnataka Web passport center advantages for the minority
ಪಾಸ್‌ ಪೋರ್ಟ್‌ ಕೇಂದ್ರ; ಅಲ್ಪ ಸಂಖ್ಯಾತರಿಗೆ ಅನುಕೂಲ


ಬೀದರ್‌ನ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೀದರ್‌- ಕಲಬುರಗಿ ರೈಲು ಆರಂಭ ಮಾಡಿದ್ದರಿಂದ ಜಿಲ್ಲೆಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕಲಬುರಗಿಯಲ್ಲಿ ವಿದ್ಯಾಭ್ಯಾಸ ಮಾಡಲು ಹಾಗೂ ಅಲ್ಪಸಂಖ್ಯಾತರಿಗೆ ಖಾಜಾ ಬಂದೇ ನವಾಜರ ಜಾತ್ರೆಗೆ ಹೋಗಲು ಸಾಕಷ್ಟು ಅನುಕೂಲವಾಗಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ದಡಿ ದೇಶದ ಅಲ್ಪಸಂಖ್ಯಾತರ ಏಳಿಗೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸಂಸದ ಭಗವಂತ ಖೂಬಾ ಅವರೂ ಯೋಜನೆ ಅನುಷ್ಠಾನಗೊಳಿಸಿದ್ದಾರೆ. ಜಿಲ್ಲೆಯ ಮುಸ್ಲಿಂ ಸಮುದಾಯದವರು ಯೋಜನೆಗಳಿಂದ ಲಾಭ ಪಡೆಯುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಹಜ್‌ ಯಾತ್ರೆ ಕೈಗೊಳ್ಳುವ ಯಾತ್ರಿಗಳಿಗಾಗಿ ಬೆಂಗಳೂರಿನ ಹೆಗಡೆ ನಗರದಲ್ಲಿ 70 ಕೋಟಿ ರೂ.ಗಳ ಹಜ್‌ ಹೌಸ್‌ ನಿರ್ಮಾಣ ಮಾಡಿದ್ದಾರೆ. ಹಜ್‌ ಯಾತ್ರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ನೀಡಿದ್ದಾರೆ. ಬಿಜೆಪಿ ಸರಕಾರ ರಾಜ್ಯದ ವಕ್ಫ್ ಆಸ್ತಿಯ ಬಗ್ಗೆ ಅನ್ವರ ಮಾಣಪ್ಪಾಡಿ ನೇತೃತ್ವದಲ್ಲಿ ಸಮಿತಿಯೊಂದು ರಚಿಸಿ, ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿತ್ತು. ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಅನ್ವರ್‌ ಮಾಣಪ್ಪಾಡಿ ವರದಿಯಂತೆ ವಕ್ಫ್ ಆಸ್ತಿಯನ್ನು ಕಬಳಿಕೆ ಮಾಡಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಚೇರಿವಾಲೆ ತಿಳಿಸಿದರು.

ಪಕ್ಷದ ಮುಖಂಡರಾದ ಸೈಯ್ಯದ್‌ ಇಲಿಯಾಸ್‌, ಮುಹಮ್ಮದ್‌ ಶಫಿ, ಎಂ.ಎಂ. ಮುಖಿಮ್‌, ಬಾಬುವಾಲಿ, ರಾಜಕುಮಾರ ಚಿದ್ರಿ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ