ಆ್ಯಪ್ನಗರ

ಬಾಲ್ಯ ವಿವಾಹ ನಡೆಸದಂತೆ ಮನವಿ

ಬಾಲ್ಯವಿವಾಹ ನಿಷೇಧ ಕಾಯ್ದೆ 2016ರ ಪ್ರಕಾರ ವಿವಾಹಕ್ಕೆ ಹೆಣ್ಣಿಗೆ 18 ವರ್ಷ ಹಾಗೂ ಗಂಡಿಗೆ 21 ವರ್ಷ ಪೂರ್ಣಗೊಂಡಿರಬೇಕು. ವಯಸ್ಸಿನಲ್ಲಿ ಕಡಿಮೆ ಇರುವ ವಧು-ವರರ ವಿವಾಹವು ಬಾಲ್ಯ ವಿವಾಹ ಎಂದು ಪರಿಗಣಿಸಲಾಗುವುದು.

Vijaya Karnataka 30 May 2019, 4:43 pm
ಬೀದರ್‌: ಬಾಲ್ಯವಿವಾಹ ನಿಷೇಧ ಕಾಯ್ದೆ 2016ರ ಪ್ರಕಾರ ವಿವಾಹಕ್ಕೆ ಹೆಣ್ಣಿಗೆ 18 ವರ್ಷ ಹಾಗೂ ಗಂಡಿಗೆ 21 ವರ್ಷ ಪೂರ್ಣಗೊಂಡಿರಬೇಕು. ವಯಸ್ಸಿನಲ್ಲಿ ಕಡಿಮೆ ಇರುವ ವಧು-ವರರ ವಿವಾಹವು ಬಾಲ್ಯ ವಿವಾಹ ಎಂದು ಪರಿಗಣಿಸಲಾಗುವುದು. ಬಾಲ್ಯ ವಿವಾಹ ಮಾಡಿದಲ್ಲಿ ತಪ್ಪಿತಸ್ಥರೆಲ್ಲರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗುವುದು. ಆದ್ದರಿಂದ ಬಾಲ್ಯ ವಿವಾಹ ಮಾಡದಂತೆ ಬೀದರ್‌ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಮನವಿ ಮಾಡಿದ್ದಾರೆ.
Vijaya Karnataka Web request not to marry childhood
ಬಾಲ್ಯ ವಿವಾಹ ನಡೆಸದಂತೆ ಮನವಿ


ಅತಿಥಿ ಶಿಕ್ಷ ಕರ ನೇಮಕ ಅರ್ಜಿ ಆಹ್ವಾನ

ಬೀದರ್‌: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಟಲ್‌ ಬಿಹಾರಿ ವಾಜಪೇಯಿ, ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್‌ ಅಂಬೇಡ್ಕರ್‌ ಹಾಗೂ ಇಂದಿರಾಗಾಂಧಿ ವಸತಿ ಶಾಲಾ- ಕಾಲೇಜುಗಳಲ್ಲಿ ಖಾಲಿಯಿರುವ ಶಿಕ್ಷ ಕರ/ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ತಾತ್ಕಾಲಿಕ ಅತಿಥಿ ಶಿಕ್ಷ ಕರ/ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಯು ಮೆರಿಟ್‌ ಆಧಾರದ ಮೇಲೆ ನಡೆಯಲಿದೆ. ಅತಿಥಿ ಶಿಕ್ಷ ಕರ ಹುದ್ದೆಗೆ ಟಿ.ಇ.ಟಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಮೇ 30ರೊಳಗೆ ಹತ್ತಿರದ ವಸತಿ ಶಾಲೆಗಳಿಂದ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲಾತಿಗಳನ್ನು ಲಗತ್ತಿಸಿ ಮೇ 31ರೊಳಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಬೀದರ್‌ ಇವರಿಗೆ ಖುದ್ದಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕಚೇರಿಯ ದೂರವಾಣಿ ಸಂಖ್ಯೆ:08482-233147ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಟ್ಟಿಯನ್ನು ತಯಾರಿಸಿ ಗ್ರಾಮ ಸಭೆಯಲ್ಲಿ ಎಲ್ಲಾ ಪ್ರತಿನಿಧಿಗಳಿಗೆ ನೀಡಲಾಗಿದೆ.

ಶಿಕ್ಷ ಣ ಇಲಾಖೆ ಜೊತೆಗೆ ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಎನ್‌.ಜಿ.ಓ, ಸ್ಥಳೀಯ ಯುವಕ, ಯುವತಿ ಸಂಘಗಳ ಸಹಕಾರದಿಂದ 2019-20ನೇ ಸಾಲಿನ ವಿಶೇಷ ದಾಖಲಾತಿ ಆಂದೋಲನ ಹಾಗೂ ಸಾಮಾನ್ಯ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗುವುದು ಎಂದು ಸಮಗ್ರ ಶಿಕ್ಷ ಣ ಅಭಿಯಾನದ ಉಪ ನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ