ಆ್ಯಪ್ನಗರ

ಗ್ರಾಪಂ 2ನೇ ಹಂತದ ಚುನಾವಣೆ: ಬೀದರ್, ಔರಾದ್‌ನಲ್ಲಿ ಮತಗಟ್ಟೆಗಳತ್ತ ತೆರಳಿದ ಅಧಿಕಾರಿಗಳು, ಸಿಬ್ಬಂದಿ

ಮತಗಟ್ಟೆಗೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಮತಗಟ್ಟೆಯ ಸಾಮಗ್ರಿಗಳನ್ನು ಜಾಗರೂಕತೆಯಿಂದ ನೋಡಿಕೊಳ್ಳಬೇಕು. ಜಾಗೃತಿಯಿಂದ ಚುನಾವಣಾ ಕಾರ್ಯವನ್ನು ನಿರ್ವಹಿಸಬೇಕು. ಎರಡನೇ ಹಂತದ ಮತದಾನದ ಕಾರ್ಯಕ್ಕೆ 2248 ಮತಗಟ್ಟೆ ಅಧಿಕಾರಿ ಸಿಬ್ಬಂದಿ ನೇಮಕ ಮಾಡಲಾಗಿದೆ.

Vijaya Karnataka Web 26 Dec 2020, 6:36 pm
ಬೀದರ್‌: ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಬೀದರ್, ಔರಾದ್ (ಬಿ) ಹಾಗೂ ಕಮಲನಗರ ತಾಲೂಕುಗಳಲ್ಲಿ ನಡೆಯಲಿದೆ. ವಿವಿಧ ಬೂತ್‌ಗಳಿಗೆ ನೇಮಕಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮತಗಟ್ಟೆಯ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ನಡೆಯಿತು.
Vijaya Karnataka Web ಬೀದರ್‌
ಬೀದರ್


ಈ ವೇಳೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಚುನಾವಣೆಗೆ ಸಂಬಂಧಿಸಿದ ಪ್ರಮುಖ ಸಾಮಗ್ರಿಗಳು ಮತ್ತು ಕೋವಿಡ್ ಕಿಟ್ ಮತ್ತಿತರ ಅಗತ್ಯ ಸಾಮಗ್ರಿಗಳನ್ನು ವಿತರಿಸಲಾಯಿತು. ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ, ಸಿಬ್ಬಂದಿಯು ತಂಡದೊಂದಿಗೆ ಕೆ.ಎಸ್.ಆರ್.ಟಿ.ಸಿ ಬಸ್‌ನೊಂದಿಗೆ ತಮ್ಮ ತಮ್ಮ ಮತಗಟ್ಟೆಗಳಿಗೆ ಪ್ರಯಾಣ ಬೆಳೆಸಿದರು.

ಬೀದರ್, ಔರಾದ್ (ಬಿ) ಹಾಗೂ ಕಮಲನಗರ ಮೂರು ತಾಲೂಕುಗಳು ಸೇರಿ ಒಟ್ಟು 72 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದ್ದು, 509 ಮತಗಟ್ಟೆಗಳಿವೆ. ಡಿಸೆಂಬರ್ 27ರಂದು ಜರುಗುವ ಎರಡನೇ ಹಂತದ ಮತದಾನದ ಕಾರ್ಯಕ್ಕೆ 2248 ಮತಗಟ್ಟೆ ಅಧಿಕಾರಿ ಸಿಬ್ಬಂದಿ ನೇಮಕ ಮಾಡಲಾಗಿದೆ.

ಬೀದರ್ ತಾಲೂಕಿನಲ್ಲಿ ಒಟ್ಟು 33 ಗ್ರಾಮ ಪಂಚಾಯಿತಿಗಳಿದ್ದು 241 ಮತಗಟ್ಟೆಗಳಿವೆ. ಔರಾದ್ ತಾಲೂಕಿನಲ್ಲಿ ಒಟ್ಟು 21 ಗ್ರಾಮ ಪಂಚಾಯಿತಿಗಳಿದ್ದು 153 ಮತಗಟ್ಟೆಗಳಿವೆ. ಕಮಲನಗರ ತಾಲೂಕಿನಲ್ಲಿ ಒಟ್ಟು 18 ಗ್ರಾಮ ಪಂಚಾಯಿತಿಗಳಿದ್ದು 115 ಮತಗಟ್ಟೆಗಳಿವೆ.

ಜಿಲ್ಲಾಧಿಕಾರಿಗಳ ಸೂಚನೆ


ಮತಗಟ್ಟೆಗೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಮತಗಟ್ಟೆಯ ಸಾಮಗ್ರಿಗಳನ್ನು ಜಾಗರೂಕತೆಯಿಂದ ನೋಡಿಕೊಳ್ಳಬೇಕು. ಜಾಗೃತಿಯಿಂದ ಚುನಾವಣಾ ಕಾರ್ಯವನ್ನು ನಿರ್ವಹಿಸಬೇಕು. ಚುನಾವಣೆಗೆ ಸಂಬಂಧಿಸಿದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ತಿಳಿಸಿದ್ದಾರೆ.

ಸೂಕ್ತ ಪೊಲೀಸ್ ಬಂದೋಬಸ್ತ್

ಎರಡನೇ ಹಂತದ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ನಡೆಯುವ ಮತಗಟ್ಟೆಗಳಿಗೆ ಸೂಕ್ತ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಈ ಚುನಾವಣಾ ಕಾರ್ಯದಲ್ಲಿ ಕಮಲನಗರ, ಔರಾದ್ ಬಿ ಮತ್ತು ಬೀದರ್ ತಾಲೂಕಿನಲ್ಲಿ ಅಗತ್ಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಿ ಎಲ್ಲಾ ರೀತಿಯ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಾಗೇಶ ಡಿ.ಎಲ್. ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ