ಆ್ಯಪ್ನಗರ

ಶಶಿ ತರೂರ್‌ ಗಡಿಪಾರಿಗೆ ಆಗ್ರಹ

ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಶಶಿ ತರೂರ್‌ ಅವರನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ತರೂರ್‌ ನಮ್ಮ ಜಿಲ್ಲೆಗೆ ಬಂದರೆ ಕಾಲಿಡಲೂ ಬಿಡಲ್ಲ ಎಂದು ಎಚ್ಚರಿಕೆ ನೀಡಿದರು.

Vijaya Karnataka 15 Jul 2018, 4:03 pm
ಬೀದರ್‌ : ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಶಶಿ ತರೂರ್‌ ಅವರನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ತರೂರ್‌ ನಮ್ಮ ಜಿಲ್ಲೆಗೆ ಬಂದರೆ ಕಾಲಿಡಲೂ ಬಿಡಲ್ಲ ಎಂದು ಎಚ್ಚರಿಕೆ ನೀಡಿದರು.
Vijaya Karnataka Web shashi tharoor demands exile
ಶಶಿ ತರೂರ್‌ ಗಡಿಪಾರಿಗೆ ಆಗ್ರಹ


ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಬಿಜೆಪಿ ಜಿಲ್ಲಾ ಕಾರ‍್ಯಕಾರಿಣಿ ಸಭೆಯಲ್ಲಿ ಪ್ರಾಸ್ತಾವಿಕ ಮಾತನಾಡಿದ ಅವರು, ಶಶಿ ತರೂರ್‌ ಅವರು, 2019ರಲ್ಲಿ ಬಿಜೆಪಿಗೆ ಮತ್ತೊಮ್ಮೆ ಅಧಿಕಾರ ಸಿಕ್ಕರೆ ಅದು ಭಾರತವನ್ನು ಹಿಂದೂ- ಪಾಕಿಸ್ತಾನವನ್ನಾಗಿ ಬದಲಾಯಿಸಲಿದೆ ಎಂದು ನೀಡಿದ್ದ ಹೇಳಿಕೆಗೆ ಬೆಲ್ದಾಳೆ ಮೇಲಿನಂತೆ ಪ್ರತಿಕ್ರಿಯಿಸಿದರು.

''ಜಾತಿ, ಧರ್ಮ ಎನ್ನದೇ ಎಲ್ಲರೂ ಒಂದಾಗಿದ್ದರೆ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ ಎಂದು ಮೋದಿ ಅವರು ತಾರತಮ್ಯ ಮಾಡದೇ ಕೆಲಸ ಮಾಡುತ್ತಿರುವುದರಿಂದಲೇ ವಿಶ್ವದಲ್ಲೇ ಭಾರತ 6ನೇ ಶ್ರೀಮಂತ ರಾಷ್ಟ್ರವಾಗಲು ಕಾರಣವಾಗಿದೆ. ಜನಪರ ಕೆಲಸಗಳಿಂದ ಮೋದಿ ಜನಪ್ರಿಯರಾಗುತ್ತಿರುವುದು ಕಾಂಗ್ರೆಸ್‌ನವರಿಗೆ ಸಹಿಸಲಾಗುತ್ತಿಲ್ಲ ''ಎಂದರು.

'' 2019ರ ಚುನಾವಣೆಯಲ್ಲೂ ಬಿಜೆಪಿ ಗೆದ್ದು ನರೇಂದ್ರ ಮೋದಿ ಅವರು ಪ್ರಧಾನಿಯಾದರೆ ದೇಶ ಮತ್ತಷ್ಟು ಸುಭದ್ರವಾಗುತ್ತದೆ. ಇಲ್ಲವಾದರೆ ದೇಶಕ್ಕೆ ಅಪಾಯ, ಗಂಡಾಂತರ ಕಟ್ಟಿಟ್ಟ ಬುತ್ತಿ''ಎಂದು ಬೆಲ್ದಾಳೆ ಎಚ್ಚರಿಕೆ ನೀಡಿದರು.

''ಪಕ್ಷದಲ್ಲಿ ಏನೇ ಸಣ್ಣ ಪುಟ್ಟ ಸಮಸ್ಯೆ, ತೊಂದರೆಗಳಿದ್ದರೆ ಅವನ್ನು ಬಗೆಹರಿಸಿಕೊಂಡು ಮುಂಬರುವ ಲೋಕಸಭೆ ಚುನಾವಣೆಗೆ ನಾವು ಹೋಗಬೇಕಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಬಿಜೆಪಿಯ ಸಂಸದರನ್ನು ಆಯ್ಕೆ ಮಾಡಿ ಪಕ್ಷವನ್ನು ಸಂಘಟಿಸಿ, ಮೋದಿ, ಬಿಎಸ್‌ವೈ ಅವರ ಕೈ ಬಲ ಪಡಿಸಬೇಕಿದೆ. ಈ ಬಾರಿ ಜಾತಿಯ ಸಮೀಕರಣ, ಜಾತಿಯ ರಾಜಕಾರಣ ನಮಗೆ ಮಾರಕವಾಗಿ ಪರಿಣಮಿಸಿತು''ಎಂದು ಬೆಲ್ದಾಳೆ ಹೇಳಿದರು.

ರಾಜ್ಯದ ಸಮ್ಮಿಶ್ರ ಸರಕಾರ ಶೀಘ್ರವೇ ಪತನವಾಗಲಿದೆ ಎಂದು ಭವಿಷ್ಯ ನುಡಿದ ಬೆಲ್ದಾಳೆ ಅವರು, ಭಗವಂತ ಬಿಜೆಪಿಗೆ ಎಂದಿಗೂ ದ್ರೋಹ ಮಾಡಲ್ಲ. ಬಿಎಸ್‌ವೈ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗುವರು ಎಂದರು.

ರಾಜ್ಯ ಪ್ರಧಾನ ಕಾರ‍್ಯದರ್ಶಿ ಎನ್‌. ರವಿಕುಮಾರ, ಸಂಸದ ಭಗವಂತ ಖೂಬಾ, ಶಾಸಕ ಪ್ರಭು ಚವ್ಹಾಣ್‌, ಎಂಎಲ್ಸಿ ರಘುನಾಥ ಮಲ್ಕಾಪುರೆ, ಬಿಜೆಪಿ ರಾಜ್ಯ ಕಾರ‍್ಯಕಾರಿಣಿ ಸದಸ್ಯ ಸೂರ‍್ಯಕಾಂತ ನಾಗಮಾರಪಳ್ಳಿ, ಮಾಜಿ ಶಾಸಕ ಸುಭಾಷ್‌ ಕಲ್ಲೂರು ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ