ಆ್ಯಪ್ನಗರ

ಪತ್ನಿಯನ್ನು ಕೊಂದ ಪತಿ

ಮದ್ಯದ ಅಮಲಿನಲ್ಲಿ ಪತಿಯೊಬ್ಬ ಪತ್ನಿಗೆ ಕಟ್ಟಿಗೆಯಿಂದ ಹೊಡೆದು ಕೊಲೆಗೈದ ಘಟನೆ ನಗರದ ಕಾಳಿ ಗಲ್ಲಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.

Vijaya Karnataka 17 Jul 2019, 8:49 pm
ಬಸವಕಲ್ಯಾಣ :ಮದ್ಯದ ಅಮಲಿನಲ್ಲಿ ಪತಿಯೊಬ್ಬ ಪತ್ನಿಗೆ ಕಟ್ಟಿಗೆಯಿಂದ ಹೊಡೆದು ಕೊಲೆಗೈದ ಘಟನೆ ನಗರದ ಕಾಳಿ ಗಲ್ಲಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.
Vijaya Karnataka Web the husband who killed his wife
ಪತ್ನಿಯನ್ನು ಕೊಂದ ಪತಿ


ಶಿವಲೀಲಾ(34) ಮೃತ ಮಹಿಳೆ. ಪ್ರತಿನಿತ್ಯವೂ ಮದ್ಯ ಸೇವಿಸಿ ಬರುತ್ತಿದ್ದ ಪತಿ, ಪತ್ನಿಯನ್ನು ವಿನಾಕಾರಣ ಪೀಡಿಸುತ್ತಿದ್ದ ಎನ್ನಲಾಗಿದೆ.ಆದರೆ,ಗುರುವಾರ ರಾತ್ರಿ ಆರೋಪಿ ಬಸವರಾಜ ಕೋಪದಲ್ಲಿ ಕಟ್ಟಿಗೆಯಿಂದ ಹಲ್ಲೆ ನಡೆಸಿದ್ದಾನೆ. ಆಗ ಜೋರಾದ ಪೆಟ್ಟಿನಿಂದಾಗಿ ಪತ್ನಿ ಸ್ಥಳದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ.

ಆರೋಪಿ ಬಸವರಾಜನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಬ್ಬರು ಮಕ್ಕಳು ಅನಾಥ: ಮೃತ ಶಿವಲೀಲಾಗೆ ಮದುವೆಯಾಗಿ 14 ವರ್ಷವಾಗಿತ್ತು.ಒಂದು ಗಂಡು,ಇಬ್ಬರು ಹೆಣ್ಣು ಮಕ್ಕಳಿದ್ದಾರೆ.ತಾಯಿ ಕಳೆದುಕೊಂಡು ಮಕ್ಕಳು ಇದೀಗ ಅನಾಥವಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ