ಆ್ಯಪ್ನಗರ

ಅನುದಾನ ನೀಡದಿದ್ದರೆ ಬಸವಣ್ಣ ನೋಡಕೊಳ್ತಾನೆ: ಶ್ರೀಗಳ ಬೇಸರ

ತಾಲೂಕಿನ ಉಜಳಂಬ ಗ್ರಾಮದಲ್ಲಿ ಇತ್ತೀಚೆಗೆ ಗ್ರಾಮ ವಾಸ್ತವ್ಯಕ್ಕೆ ಬಂದಿದ್ದ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಅನುದಾನ ಘೋಷಣೆ ಮಾಡದಿರುವ ಬಗ್ಗೆ ವಿಶ್ವ ಬಸವಧರ್ಮ ಅನುಭವ ಮಂಟಪ ಟ್ರಸ್ಟ್‌ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಬೇಸರ ವ್ಯಕ್ತಪಡಿಸಿದ್ದಾರೆ.

Vijaya Karnataka 4 Jul 2019, 8:57 pm
ಬಸವಕಲ್ಯಾಣ :ತಾಲೂಕಿನ ಉಜಳಂಬ ಗ್ರಾಮದಲ್ಲಿ ಇತ್ತೀಚೆಗೆ ಗ್ರಾಮ ವಾಸ್ತವ್ಯಕ್ಕೆ ಬಂದಿದ್ದ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಅನುದಾನ ಘೋಷಣೆ ಮಾಡದಿರುವ ಬಗ್ಗೆ ವಿಶ್ವ ಬಸವಧರ್ಮ ಅನುಭವ ಮಂಟಪ ಟ್ರಸ್ಟ್‌ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಬೇಸರ ವ್ಯಕ್ತಪಡಿಸಿದ್ದಾರೆ.
Vijaya Karnataka Web undeclared cm for grant of anubhavmantap
ಅನುದಾನ ನೀಡದಿದ್ದರೆ ಬಸವಣ್ಣ ನೋಡಕೊಳ್ತಾನೆ: ಶ್ರೀಗಳ ಬೇಸರ


ನಗರದಲ್ಲಿ 'ಮತ್ತೆ ಕಲ್ಯಾಣ ಅಭಿಯಾನ' ನಿಮಿತ್ತ ಬಸವಕಲ್ಯಾಣದಲ್ಲಿ ಬುಧವಾರ ಸಂಜೆ ನಡೆದ ಸಭೆಯಲ್ಲಿ, ಈ ವಿಷಯ ಪ್ರಸ್ತಾಪಿಸಿ ಬೇಸರ ವ್ಯಕ್ತಪಡಿಸಿದ ಶ್ರೀಗಳು, ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಅನುಭವ ಮಂಟಪ್ಪ ನಿರ್ಮಾಣಕ್ಕೆ ಅನುದಾನ ನೀಡುವ ಬಗ್ಗೆ ಚಕಾರ ಎತ್ತಲಿಲ್ಲ.ಇದನ್ನೆಲ್ಲ ಬಸವಣ್ಣನೇ ನೋಡಿಕೊಳ್ಳುತ್ತಾರೆ ಎಂದು ಖೇದ ವ್ಯಕ್ತಪಡಿಸಿದರು.

''ಸಚಿವರಾದ ರಾಜಶೇಖರ್‌ ಪಾಟೀಲ್‌, ಬಂಡೆಪ್ಪ ಕಾಶಂಪುರ ಮತ್ತು ಶಾಸಕ ಬಿ. ನಾರಾಯಣರಾವ್‌ ಅವರು ಅನುಭವ ಮಂಟಪಕ್ಕೆ ಅನುದಾನ ನೀಡುವಂತೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಲ್ಲಿ ಬಹಳಷ್ಟು ಮನವಿ ಮಾಡಿದರೂ ಸ್ಪಂದಿಸಿಲ್ಲ. ಮುಂದೆಯಾದರೂ ಅನುಭವ ಮಂಟಪದ ಬಗ್ಗೆ ಆಸಕ್ತಿವಹಿಸಿ ಅನುದಾನ ಕುರಿತು ಒಲವು ತೋರಿದರೆ ಮಾತ್ರ ಸಿಎಂ ಅವರು ಮುಂದುವರಿಯುತ್ತಾರೆ. ಇಲ್ಲದಿದ್ದರೆ ಅವರನ್ನು ಬಸವಣ್ಣನ್ನೇ ನೋಡಿಕೊಳ್ಳುತ್ತಾನೆ''ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ