ಆ್ಯಪ್ನಗರ

ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ವಿಜಯೀಭವ

ವಿಜಯ ಕರ್ನಾಟಕ ದಿನಪತ್ರಿಕೆ ವತಿಯಿಂದ ಹಾಗೂ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ ಭಾಲ್ಕಿ, ಶ್ರೀ ಚನ್ನಬಸವೇಶ್ವರ ಗುರುಕುಲ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಕರಡ್ಯಾಳ ಸಹಯೋಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಾರ್ಗದರ್ಶನ-ಸಂವಾದ ವಿಜಯೀಭವ ಕಾರ್ಯಕ್ರಮ ಫೆ.22 ರಂದು ಆಯೋಜಿಸಲಾಗಿದೆ.

Vijaya Karnataka 21 Feb 2019, 5:00 am
ಭಾಲ್ಕಿ :ರಾಜ್ಯದ ಮನೆ ಮಾತಾಗಿರುವ ವಿಜಯ ಕರ್ನಾಟಕ ದಿನಪತ್ರಿಕೆ ವತಿಯಿಂದ ಹಾಗೂ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ ಭಾಲ್ಕಿ, ಶ್ರೀ ಚನ್ನಬಸವೇಶ್ವರ ಗುರುಕುಲ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಕರಡ್ಯಾಳ ಸಹಯೋಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಾರ್ಗದರ್ಶನ-ಸಂವಾದ ವಿಜಯೀಭವ ಕಾರ್ಯಕ್ರಮ ಫೆ.22 ರಂದು ಬೆಳಗ್ಗೆ 10.30ಕ್ಕೆ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಅನುಭವ ಮಂಟಪ ಆಡಿಟೋರಿಯಂ ಹಾಲ್‌ನಲ್ಲಿ ಆಯೋಜಿಸಲಾಗಿದೆ.
Vijaya Karnataka Web vijaybhava progrom in karadyal
ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ವಿಜಯೀಭವ


ಭಾಲ್ಕಿಯ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸಾನ್ನಿಧ್ಯ ವಹಿಸಲಿದ್ದಾರೆ. ಕಲಬುರಗಿ ಸಾರ್ವಜನಿಕ ಶಿಕ್ಷ ಣ ಇಲಾಖೆಯ ಅಪರ ಆಯುಕ್ತಾಲಯ ಜಂಟಿ ನಿರ್ದೇಶಕ ವಿಜಯಕುಮಾರ ಜಿ.ಎಂ ಅವರು ವಿಜಯೀಭವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಕ್ಷೇತ್ರ ಶಿಕ್ಷ ಣಾಧಿಕಾರಿ ಸಿದ್ದವೀರಯ್ಯ ರುದನೂರ್‌ ಅಧ್ಯಕ್ಷ ತೆ ವಹಿಸಲಿದ್ದು, ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ನ ಆಡಳಿತಾಧಿಕಾರಿ ಮೋಹನ ರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಬಾಲನ್ಯಾಯ ಮಂಡಳಿ ಸದಸ್ಯ ಶಶಿಧರ ಕೋಸಂಬೆ ಭಾಗವಹಿಸಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ತಾಲೂಕಿನ ನಡಾ ಸರಕಾರಿ ಪ್ರೌಢ ಶಾಲೆಯ ಗಣಿತ ಶಿಕ್ಷ ಕ ಯಾಕುಬ್‌ ಕೊಯೂರ್‌, ಬೆಳಗಾವಿ ಗ್ರಾಮೀಣ ಹಿರೇಬಾಗೇವಾಡಿ ಕರ್ನಾಟಕ ಪ್ರೌಢ ಶಾಲೆಯ ಇಂಗ್ಲೀಷ್‌ ಶಿಕ್ಷ ಕ ಎಂ.ಐ.ಪೂಜಾರ್‌ ಮತ್ತು ಬೀದರ್‌ ಕರ್ನಾಟಕ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷ ಕ ಮಹ್ಮದ್‌ ರಫೀ ತಾಳಿಕೋಟಿ ಪಾಲ್ಗೊಳ್ಳಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ