ಆ್ಯಪ್ನಗರ

ಮತದಾನ ಜಾಗೃತಿ ಮಳಿಗೆ ಉದ್ಘಾಟನೆ ಇಂದು

ಚುನಾವಣಾ ಆಯೋಗದ ನಿರ್ದೇಶನದಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ಏ.18ರಿಂದ ಏ.20ರವೆಗೆ ಮೂರು ದಿನಗಳ ಕಾಲ ಆಯೋಜಿಸಿರುವ ಮತದಾನ ಜಾಗೃತಿಯ ವಸ್ತು ಪ್ರದರ್ಶನ ಮಳಿಗೆಗೆ ಏ.18ರ ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಡಾ.ಹೆಚ್‌.ಆರ್‌.ಮಹಾದೇವ ಚಾಲನೆ ನೀಡುವರು.

Vijaya Karnataka 18 Apr 2019, 5:00 am
ಬೀದರ್‌: ಲೋಕಸಭಾ ಚುನಾವಣೆ-2019ರ ನಿಮಿತ್ತ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ಏ.18ರಿಂದ ಏ.20ರವೆಗೆ ಮೂರು ದಿನಗಳ ಕಾಲ ಆಯೋಜಿಸಿರುವ ಮತದಾನ ಜಾಗೃತಿಯ ವಸ್ತು ಪ್ರದರ್ಶನ ಮಳಿಗೆಗೆ ಏ.18ರ ಬೆಳಗ್ಗೆ 11ಕ್ಕೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಡಾ.ಹೆಚ್‌.ಆರ್‌.ಮಹಾದೇವ ಅವರು ಚಾಲನೆ ನೀಡುವರು.
Vijaya Karnataka Web voting awareness store inaugurated today
ಮತದಾನ ಜಾಗೃತಿ ಮಳಿಗೆ ಉದ್ಘಾಟನೆ ಇಂದು


ಜಿಪಂ ಸಿಇಒ ಮಹಾಂತೇಶ ಬೀಳಗಿ, ಎಸ್ಪಿ ಟಿ.ಶ್ರೀಧರ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಸ್‌.ಬಿ.ಪಾಟೀಲ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್‌.ಮುಲುಖ್ವಾನ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕ ಗವಿಸಿದ್ದಪ್ಪ ಹೊಸಮನಿ ಉಪಸ್ಥಿತರಿರುವರು. ಏ.18ರಿಂದ ಏ.20ರವರೆಗೆ ಮೂರು ದಿನಗಳ ಕಾಲ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆವರೆಗೆ ಮತದಾರರ ಜಾಗೃತಿ ಪ್ರದರ್ಶನ ಮಳಿಗೆ ತೆರೆದಿರುತ್ತದೆ. ಸಾರ್ವಜನಿಕರು ಭೇಟಿ ನೀಡಿ ವೀಕ್ಷ ಣೆ ನಡೆಸಬಹುದು ಎಂದು ವಾರ್ತಾ ಇಲಾಖೆಯ ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ