ಆ್ಯಪ್ನಗರ

ವಿಶ್ವ ಹಿರಿಯ ನಾಗರೀಕರ ದಿನಾಚರಣೆ: ಕ್ರೀಡಾ ಸ್ಪರ್ಧೆ

ಹಿರಿಯ ನಾಗರಿಕರು ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಕಾಳಜಿ ತೋರಬೇಕು ಎಂದು ಬೀದರ್‌ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಸೆಲ್ವಮಣಿ ಆರ್‌ ಹೇಳಿದರು.

Vijaya Karnataka 14 Sep 2017, 4:57 pm

ಬೀದರ್‌: ಹಿರಿಯ ನಾಗರಿಕರು ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಕಾಳಜಿ ತೋರಬೇಕು ಎಂದು ಬೀದರ್‌ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಸೆಲ್ವಮಣಿ ಆರ್‌ ಹೇಳಿದರು.

Vijaya Karnataka Web world senior citizens day sports competition
ವಿಶ್ವ ಹಿರಿಯ ನಾಗರೀಕರ ದಿನಾಚರಣೆ: ಕ್ರೀಡಾ ಸ್ಪರ್ಧೆ


ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ನಡೆದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಪ್ರಯುಕ್ತದ ಕ್ರೀಡಾ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ‍್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಪೊಲೀಸ್‌ ಕ್ರೀಡಾಂಗಣದಲ್ಲಿ ನಡೆದ ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಈರಣ್ಣ ಎಸ್‌. ಪಂಚಾಳ್‌ ಮಾತನಾಡಿ, ಹಿರಿಯ ನಾಗರಿಕರನ್ನು ಗೌರವದಿಂದ ಕಾಣಬೇಕು. ತಂದೆ-ತಾಯಿಗೆ ನಾವು ಯಾವ ರೀತಿಯಲ್ಲಿ ಆರೈಕೆ, ಗೌರವ, ಪ್ರೀತಿ ನೀಡುತ್ತೇವೋ ಅದೇ ರೀತಿ ನಮ್ಮ ಮಕ್ಕಳು ನಮ್ಮನ್ನು ನೋಡಿ ಕಲಿತುಕೊಳ್ಳುತ್ತಾರೆ. ಅದಕ್ಕಾಗಿಯಾದರೂ ಹಿರಿಯರನ್ನು ಪ್ರೀತಿ ಗೌರವದಿಂದ ನೋಡೋಣ ಎಂದು ತಿಳಿಸಿದರು.

ಹೆಚ್ಚುವರಿ ಎಸ್ಪಿ ಶ್ರೀಹರಿಬಾಬು ಮಾತನಾಡಿ, ಹಿರಿಯ ನಾಗರಿಕರು ಕಿರುಕುಳ, ತೊಂದರೆಗಳಿಗೆ ಒಳಗಾಗದೇ ತಮ್ಮ ಯಾವುದೇ ರೀತಿಯ ಸಮಸ್ಯೆ ಇದ್ದರೂ ಉಚಿತ ದೂರವಾಣಿ ಸಂಖ್ಯೆ 1090/08482-223771/100ಗೆ ಕರೆಮಾಡಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು.

ಅಂಗವಿಕಲರ ಮಾಜಿ ರಾಜ್ಯ ಆಯುಕ್ತ ದಾಸ್‌ ಸೂರ‍್ಯವಂಶಿ ಮಾತನಾಡಿ, ಇತ್ತೀಚೆಗೆ ಯುವಕರಿಗಿಂತ ಹಿರಿಯ ನಾಗರಿಕರ ಸಂಖ್ಯೆ ಹೆಚ್ಚುತ್ತಿದೆ. ವೃದ್ಧರಾದರೆ ಸಾಕು ಅವರನ್ನು ವೃದ್ದಾಶ್ರಮಕ್ಕೆ ಸೇರಿಸುತ್ತಿದ್ದಾರೆ. ಈ ಭಾವನೆ ತೊಲಗಬೇಕು. ತಮ್ಮ ಪೋಷಕರನ್ನು ತಮ್ಮ ಬಳಿಯಲ್ಲಿಟ್ಟುಕೊಂಡು ಆರೈಕೆ ಮಾಡಬೇಕು ಎಂದಾಗ ಮಾತ್ರ ಕುಟುಂಬ ಸುಂದರವಾಗಿರುತ್ತದೆ ಎಂದರು.

ಕರ್ನಾಟಕ ಜಾನಪದ ಪರಿಷತ್‌ ಅಧ್ಯಕ್ಷ ಎಸ್‌.ಬಿ. ಕುಚಬಾಳ್‌ ಮಾತನಾಡಿದರು. ನಿವೃತ್ತ ಸಹಾಯಕ ಶಿಕ್ಷಣಾಧಿಕಾರಿ ಹಾಗೂ ಹಿರಿಯ ಸಾಹಿತಿ ಪಿ. ಬಸವರಾಜ್‌., ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಪಾಂಡುರಂಗ ಬಿ. ಕ್ರೀಡಾ ಕೂಟದ ಕುರಿತು ಮಾಹಿತಿ ನೀಡಿದರು.

ವಿಜೇತರಾದ ಹಿರಿಯ ಕ್ರೀಡಾಪಟುಗಳು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ರೇಣುಕಾ ತಾಂದಳೆ ನಿರೂಪಿಸಿದರು. ಪಾಂಡುರಂಗ ಬಿ ವಂದಿಸಿದರು. ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಯೋಜನಾ ಸಂಯೋಜಕ ಮಲಾಕಿ ಮೈಕಲ್‌, ಆಪ್ತ ಸಮಾಲೋಚ ರೈಚಲರಾಣಿ ಹಾಗೂ ನೂರಾರು ಹಿರಿಯ ನಾಗರಿಕರು, ವಿವಿಧ ಸಂಘ ಸಂಸ್ಥೆಯವರು ಹಾಜರಿದ್ದರು. ಹಿರಿಯರಾದ ಅಜ್ಜ, ಅಜ್ಜಿಯರು ನಡಿಗೆ, ಓಟ ಹಾಗೂ ಗುಂಡು ಎಸೆತ ಆಟೋಟಗಳಲ್ಲಿ ಪಾಲ್ಗೊಂಡು ಗಮನ ಸೆಳೆದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ