ಆ್ಯಪ್ನಗರ

ಕುಡಿಯುವ ನೀರು, ಮೇವಿಗೆ ಕ್ರಮವಹಿಸಿ

ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿ ಯುವ ನೀರು ಹಾಗೂ ಜಾನು ವಾರುಗಳಿಗೆ ಮೇವಿಗೆ ತೊಂದರೆ ಯಾಗದಂತೆ ಅಧಿಕಾರಿಗಳು ಕ್ರಮ ವಹಿಸ ಬೇಕು ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಹೊಂಗನೂರು ಚಂದ್ರು ತಾಕೀತು ಮಾಡಿದರು.

ವಿಕ ಸುದ್ದಿಲೋಕ 8 Mar 2017, 8:24 pm
ಚಾಮರಾಜನಗರ: ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿ ಯುವ ನೀರು ಹಾಗೂ ಜಾನು ವಾರುಗಳಿಗೆ ಮೇವಿಗೆ ತೊಂದರೆ ಯಾಗದಂತೆ ಅಧಿಕಾರಿಗಳು ಕ್ರಮ ವಹಿಸ ಬೇಕು ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಹೊಂಗನೂರು ಚಂದ್ರು ತಾಕೀತು ಮಾಡಿದರು.
Vijaya Karnataka Web
ಕುಡಿಯುವ ನೀರು, ಮೇವಿಗೆ ಕ್ರಮವಹಿಸಿ


ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈಗಾಗಲೇ ಬಹಳಷ್ಟು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿದ್ದು, ಎಷ್ಟೇ ಆಳ ಕೊಳವೆ ಬಾವಿ ಕೊರೆದರೂ ನೀರು ಸಿಗುತ್ತಿಲ್ಲ. ಈಗಾಗಲೇ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಮುಕ್ತಾಯ ಹಂತಕ್ಕೆ ಬಂದಿದೆ. ಅದು ಪೂರ್ಣಗೊಂಡು ಕೊಳವೆ ಮೂಲಕ ಸದ್ಯದಲ್ಲೇ ಆಯಾ ಗ್ರಾಮಗಳ ಟ್ಯಾಂಕ್‌ಗಳಿಗೆ ತುಂಬಿಸುವ ಕೆಲಸವಾಗಬೇಕಿದೆ. ಆ ನಿಟ್ಟಿನಲ್ಲಿ ತಕ್ಷಣದಲ್ಲೇ ತಮ್ಮ ಗ್ರಾಮ ವ್ಯಾಪ್ತಿಯಲ್ಲಿರುವ ಓವರ್‌ಹೆಡ್ ಟ್ಯಾಂಕ್‌ಗಳನ್ನು ದುರಸ್ತಿಪಡಿಸಿ ವ್ಯವಸ್ಥಿತವಾಗಿ ನೀರು ತುಂಬುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಕಾವುದವಾಡಿ, ಹೊಂಗನೂರು, ಮಸಣಾಪುರ, ಹೊಂಗನೂರು, ಅಟ್ಟುಗುಳಿಪುರ ಗ್ರಾಮಗಳಲ್ಲಿ ನಿವೇಶನ ಇಲ್ಲ ಎಂಬ ಕಾರಣಕ್ಕೆ ಓವರ್ ಹೆಡ್ ಟ್ಯಾಂಕ್ ನಿರ್ಮಾಣವಾಗಿಲ್ಲ. ಬಹು ಗ್ರಾಮ ಯೋಜನೆ ಚಾಲನೆಗೊಂಡಾಗ ಈ ಗ್ರಾಮಗಳಿಗೆ ನೀರು ಸರಬರಾಜು ಮಾಡುವುದು ಹೇಗೆ? ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.

ಬರ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾರಿಕೆಯ ಉತ್ತರ ನೀಡಬಾರದು. ಜನರಿಗೆ ನೀರು ನೀಡುವವರೆಗೆ ಪ್ರತಿ ಹಂತದಲ್ಲಿಯೂ ಜಾಗತರಾಗಬೇಕು. ಅಪೂರ್ಣ ಕಾಮಗಾರಿಗಳ ಬಗ್ಗೆ ನಿಗಾ ವಹಿಸಿ ಪೂರ್ಣಗೊಳಿಸಿ, ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರು ಪೂರೆಸಬೇಕು ಎಂದರು.

ಕಡಿಮೆ ನೀರು ಬಳಸಿ, ಉತ್ತಮ ಲಾಭ ತರುವ ಸಾಮೆ, ನವಣೆ, ಸಜ್ಜೆಯಂತ ಬಿತ್ತನೆ ಬೀಜಗಳನ್ನು ಪೂರೆಕೆ ಮಾಡಲು ಕಷಿ ಇಲಾಖೆಯವರು ಮುಂದಾಗಬೇಕು. ಕಷಿ ಹೊಂಡಗಳಿಗೆ ಉಪಯೋಗಿಸುವ ಪ್ಲಾಸ್ಟಿಕ್ ಟಾರ್ಪಾಲಿನ್‌ಗೆ ಬೇಡಿಕೆ ಇದ್ದು, ಸೂಕ್ತ ಸಮಯದಲ್ಲಿ ಖರೀದಿಸಿ ರೆತರ ನೆರವಿಗೆ ಇಲಾಖೆ ನಿಲ್ಲಬೇಕು ಎಂದು ತಿಳಿಸಿದರು. ತಾಪಂ ಉಪಾಧ್ಯಕ್ಷ ಪಿ.ಎನ್. ದಯಾನಿಧಿ, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ನಾಗಸುಂದ್ರಮ್ಮ, ಇಒ ಪ್ರೇಮ್ ಕುಮಾರ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ