ಆ್ಯಪ್ನಗರ

ಈಜಲು ಹೋದ ಯುವಕ ನೀರುಪಾಲು

ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಸ್ನೇಹಿತರೊಂದಿಗೆ ಬಂದಿದ್ದ ಯುವಕ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಬಳಿ ಇರುವ ಚೆಕ್ ಡ್ಯಾಂ ನೀರುಪಾಲಾಗಿದ್ದಾರೆ.

ವಿಕ ಸುದ್ದಿಲೋಕ 18 Sep 2017, 5:00 am

ಹನೂರು: ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಸ್ನೇಹಿತರೊಂದಿಗೆ ಬಂದಿದ್ದ ಯುವಕ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಬಳಿ ಇರುವ ಚೆಕ್ ಡ್ಯಾಂ ನೀರುಪಾಲಾಗಿದ್ದಾರೆ.

Vijaya Karnataka Web
ಈಜಲು ಹೋದ ಯುವಕ ನೀರುಪಾಲು


ಬೆಂಗಳೂರಿನ ಖಾಸಗಿ ಕಾಲ್‌ಸೆಂಟರ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವಕ ಪ್ರೀತಂ (24) ನೀರಿನಲ್ಲಿ ನಾಪತ್ತೆಯಾದವರು.

ಪ್ರೀತಂ ತನ್ನ ಜನ್ಮದಿನವನ್ನು ಆಚರಿಸಲು ಬೆಂಗಳೂರಿನಿಂದ ಸ್ನೇಹಿತರ ಜೊತೆ ಶನಿವಾರ ಸಂಜೆ ನರೀಪುರ ಬಳಿ ಇರುವ ಅವರ ಫಾರ್ಮ್ ಹೌಸ್‌ಗೆ ಆಗಮಿಸಿ ರಾತ್ರಿ ವಾಸ್ತವ್ಯ ಮಾಡಿದ್ದಾರೆ. ಭಾನುವಾರ ಮಧ್ಯಾಹ್ನ 3.30ರಲ್ಲಿ ಚಿಕ್ಕಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಲು ಬಂದಿದ್ದಾಗ 6 ಜನ ಯುವಕರು ಹೊಸಮಠ ಬಳಿ ಇರುವ ಚೆಕ್‌ಡ್ಯಾಂನಲ್ಲಿ ಈಜಲು ಇಳಿದಿದ್ದಾರೆ. ಆದರೆ ಈಜು ಬಾರದ ಪ್ರೀತಂ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹನೂರು ವೃತ್ತ ನಿರೀಕ್ಷಕ ಪರಶುರಾಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

10 ಅಡಿ ಆಳವಿರುವ ನೀರಿನಲ್ಲಿ ಪ್ರೀತಂಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ನುರಿತ ಇಬ್ಬರು ಈಜುಗಾರರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ