ಆ್ಯಪ್ನಗರ

ಚಾಮರಾಜನಗರದಲ್ಲಿ ಗುಂಡು ಹಾರಿಸಿಕೊಂಡು ಒಂದೇ ಕುಟುಂಬದ ಐವರ ಆತ್ಮಹತ್ಯೆ

ಗುಂಡ್ಲುಪೇಟೆ ಹೊರವಲಯದಲ್ಲಿ ಬಾಲಕ ಸೇರಿದಂತೆ ಐವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

Vijaya Karnataka Web 16 Aug 2019, 10:35 am
ಚಾಮರಾಜನಗರ: ಗುಂಡು ಹಾರಿಸಿಕೊಂಡು ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಶುಕ್ರವಾರ ನಸುಕಿನ ಜಾವ ನಡೆದಿದೆ. ಆರ್ಥಿಕ ನಷ್ಟದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
Vijaya Karnataka Web SUICIDE


ಗುಂಡು ಹಾರಿಸಿಕೊಂಡು ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಮತ್ತು , ಒಬ್ಬ ಬಾಲಕ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೂರು ದಿನಗಳ ಹಿಂದೆ ಗುಂಡ್ಲುಪೇಟೆ ಗೆ ಆಗಮಿಸಿದ್ದ ಕುಟುಂಬ ಎಲಚೆಟ್ಟಿ ಗ್ರಾಮದ ಸ್ನೇಹಿತನ ಫಾರಂಹೌಸ್‌ನಲ್ಲಿ ಉಳಿದುಕೊಂಡಿತ್ತು. ನಿನ್ನೆ ರಾತ್ರಿ ಗುಂಡ್ಲುಪೇಟೆಯ ನಂದಿ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದರು. ಓಂಪ್ರಕಾಶ್ ಎಂಬುವವರ ಹೆಸರಲ್ಲಿ ರೂಂ ಬುಕ್ ಆಗಿತ್ತು. ಜೊತೆಯಲ್ಲಿ ಬಂದಿದ್ದ ಚೇತನ್, ಸುರೇಶ್ ನನ್ನು ವಾಪಸ್ ಮೈಸೂರಿಗೆ ಕಳುಹಿಸಿ, ಇಂದು ಬೆಳಗಿನ ಜಾವ ಪಟ್ಟಣದ ಹೊರವಲಯಕ್ಕೆ ಬಂದು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಓಂ ಪ್ರಕಾಶ್ (37) ಪತ್ನಿ ನಿಖಿತ, ಮಗ ಆರ್ಯ ಕೃಷ್ಣ, ತಾಯಿ ಹೇಮಲತ, ತಂದೆ ನಾಗರಾಜು ಭಟ್ಟಾಚಾರ್ಯ ಎಂದು ಗುರುತಿಸಲಾಗಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ಜಮೀನು ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಫ್ರೊಫೆಸರ್ ಅಗಿರುವ ಮಹೇಶ್ ಚಂದ್ರ ಅವರಿಗೆ ಸೇರಿದ್ದು ಎಂದು ತಿಳಿದುಬಂದಿದೆ.

ಮಧ್ಯರಾತ್ರಿ ಸ್ನೇಹಿತರಿಗೆ ಕರೆ ಮಾಡಿದ್ದ ಓಂ ಪ್ರಕಾಶ್, ನಾನು ಜೀವನದಲ್ಲಿ ಸೋತಿದ್ದೇನೆ, ನಂಬಿದವರು ಕೈಕೊಟ್ಟರು. ಗುಂಡ್ಲುಪೇಟೆ ಬಳಿ ಕಾರು ನಿಲ್ಲಿಸಿದ್ದೇವೆ ತೆಗೆದುಕೊಂಡು ಹೋಗಿ ಎಂದು ಹೇಳಿದ್ದರು ಎಂದು ತಿಳಿದುಬಂದಿದೆ.

ಓಂಪ್ರಕಾಶ್ ಮೈಸೂರಿನಲ್ಲಿ ಡಾಟಾ ಬೇಸ್ ಕಂಪನಿ ನಡೆಸುತ್ತಿದ್ದರು. ಕೋಟ್ಯಂತರ ರೂಪಾಯಿ ಲಾಸ್ ಬಳಿಕ ಅನಿಮೇಷನ್ ಕಂಪನಿ ನಡೆಸುತ್ತಿದ್ದರು. ಮೂಲತಃ ತುಮಕೂರಿನವರಾಗಿದ್ದ ಇವರು ಮೈಸೂರಿನ ದಟ್ಟಗಳ್ಳಿ ಬಡಾವಣೆಯ ಜೋಡಿಬೇವಿನ ಮರದ ಬಳಿ ವಾಸವಾಗಿದ್ದರು. ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರ ಭೇಟಿ ನೀಡಿದ್ದು ತನಿಖೆ ಆರಂಭಿಸಿದ್ದಾರೆ.

ಆತ್ಮಹತ್ಯೆಯ ಸುತ್ತ ಅನುಮಾನಗಳ ಹುತ್ತ

ಪ್ರಕರಣದಲ್ಲಿ ಹಲವು ಅನುಮಾನಗಳು ಎದ್ದಿದ್ದು, ನಾಲ್ವರಿಗೆ ಹಣೆಯ ಭಾಗಕ್ಕೆ ಗುಂಡು ತಗುಲಿದೆ. ಮತ್ತೊಬ್ಬರು ಕಿವಿಯ ಭಾಗದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಡಿ ಆನಂದ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ