ಆ್ಯಪ್ನಗರ

ತನಿಖೆಗೆ ಬಂದ ಪೊಲೀಸರ ಮೇಲೆ ಹಲ್ಲೆ: ನಾಲ್ವರ ವಿರುದ್ಧ ಕೇಸ್‌

ಯುವತಿಯೊಬ್ಬಳ ನಾಪತ್ತೆ ಪ್ರಕರಣದ ತನಿಖೆಗೆಂದು ಬಂದಿದ್ದ ಇಬ್ಬರು ಪೇದೆಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಬಗ್ಗೆ ರಾಮಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijaya Karnataka 10 Nov 2018, 5:00 am
ರಾಮಾಪುರ: ಯುವತಿಯೊಬ್ಬಳ ನಾಪತ್ತೆ ಪ್ರಕರಣದ ತನಿಖೆಗೆಂದು ಬಂದಿದ್ದ ಇಬ್ಬರು ಪೇದೆಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಬಗ್ಗೆ ರಾಮಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Vijaya Karnataka Web a group was attacked on the constables
ತನಿಖೆಗೆ ಬಂದ ಪೊಲೀಸರ ಮೇಲೆ ಹಲ್ಲೆ: ನಾಲ್ವರ ವಿರುದ್ಧ ಕೇಸ್‌


ಕೆ.ಆರ್‌.ನಗರ ಠಾಣೆ ಪೊಲೀಸ್‌ ಪೇದೆಗಳಾದ ಕೃಷ್ಣ, ಕೆಂಪರಾಜು ಅವರ ಮೇಲೆ ಹಲ್ಲೆ ನಡೆದಿದ್ದು, ಈ ಸಂಬಂಧ ರಾಮಾಪುರ ಪೊಲೀಸರು ನಾಲ್ವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ಯುವತಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲೆಯ ರಾಮಾಪುರ ಪೊಲೀಸ್‌ ಠಾಣೆ ಸರಹದ್ದಿನ ಗೆಜ್ಜಗುಡ್ಡೆ ಗ್ರಾಮದ ಕಾಡಂಚಿನ ಮನೆಯೊಂದರಲ್ಲಿ ಯುವತಿ ಇರುವ ಬಗ್ಗೆ ಮಾಹಿತಿ ಇತ್ತು. ಹೀಗಾಗಿ ಕೆ.ಆರ್‌ ನಗರ ಠಾಣೆಯ ಪೊಲೀಸ್‌ ಪೇದೆಗಳಾದ ಕೃಷ್ಣ, ಕೆಂಪರಾಜು ಗೆಜ್ಜಗುಡ್ಡೆ ಗ್ರಾಮಕ್ಕೆ ಬಂದಿದ್ದರು. ಅಲ್ಲದೇ ಪ್ರಕರಣ ಕುರಿತು ವಿವರಿಸಿದ್ದರು. ಯುವತಿ ನಾಪತ್ತೆ ಹಾಗೂ ಯುವಕನ ಸುಳಿವು ನೀಡುವಂತೆ ಆತನ ಮನೆಯವರನ್ನು ಕೇಳಿದ್ದಾರೆ. ಇದರಿಂದ ಕೆರಳಿದ ಯುವಕನ ಸಂಬಂಧಿಗಳಾದ ಗೆಜ್ಜಲನಾಥ ಗ್ರಾಮದ ಕುಮಾರ್‌, ಆರ್ಮುಗಂ, ಮುತ್ತು, ಕುಮಾರ್‌ಸ್ವಾಮಿ ಎಂಬುವವರು ಗುಂಪು ಸೇರಿಸಿಕೊಂಡು, ಪೇದೆಗಳ ಮೇಲೆ ಹಲ್ಲೆ ನಡೆಸಿದ್ದಾರೆ.

''ತನಿಖೆಗೆಂದು ಬಂದ ನಮ್ಮ ಮೇಲೆ ನಾಲ್ವರು ಹಾಗೂ ಅದಕ್ಕಿಂತ ಹೆಚ್ಚಿನ ವ್ಯಕ್ತಿಗಳು ಹಲ್ಲೆ ನಡೆಸಿದರು,'' ಎಂದು ಪೇದೆ ಕೃಷ್ಣ ರಾಮಾಪುರ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಇನ್ಸ್‌ಪೆಕ್ಟರ್‌ ಮನೋಜ್‌ಕುಮಾರ್‌, ನಾಲ್ವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪ್ರೇಮ ಪ್ರಕರಣದಲ್ಲಿ ಯುವತಿ, ಯುವಕನೊಂದಿಗೆ ತೆರಳಿದ್ದು, ನಾಪತ್ತೆಯಾಗಿರುವ ಬಗ್ಗೆ ಕೆ.ಆರ್‌.ನಗರದಲ್ಲಿನ ಯುವತಿ ಪೋಷಕರು ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಯುವತಿ ಪತ್ತೆಗಾಗಿ ಅಲ್ಲಿನ ಪೊಲೀಸರು ಮಫ್ತಿಯಲ್ಲಿ ತೆರಳಿದ್ದರು. ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ ಎನ್ನಲಾಗಿದೆ. ಮಫ್ತಿಯಲ್ಲಿದ್ದ ಪೊಲೀಸರ ಮೇಲೆ ಯುವಕನ ಸಂಬಂಧಿಗಳು ಹಲ್ಲೆ ಮಾಡಿದ್ದು, ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ