ಆ್ಯಪ್ನಗರ

ಯುವತಿ ಅನುಮಾನಾಸ್ಪದ ಸಾವು

ವಿವಾಹ ನಿಶ್ಚಯವಾಗಿದ್ದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ನಗರ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.

Vijaya Karnataka 29 May 2019, 5:00 am
ಚಾಮರಾಜನಗರ: ವಿವಾಹ ನಿಶ್ಚಯವಾಗಿದ್ದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ನಗರ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.
Vijaya Karnataka Web a suspicious death of a young woman
ಯುವತಿ ಅನುಮಾನಾಸ್ಪದ ಸಾವು


ಚಾಮರಾಜನಗರ ತಾಲೂಕಿನ ಮಸಣಾಪುರ ಗ್ರಾಮದ ಮಮತಾ (23)ಮೃತರು.

ನಗರದ ರಾಮಸಮುದ್ರ ಬಳಿ ಇರುವ ಬೂದಿತಿಟ್ಟು ಕ್ರಾಸ್‌ ಬಳಿ ಯುವತಿ ಅಪಘಾತದಲ್ಲಿ ಗಾಯಗೊಂಡಿದ್ದಾಳೆ ಎಂದು ಹೇಳಿ ಚಾಲಕ ಸಿದ್ದರಾಜು ಎಂಬಾತ ಆಕೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ತೆರಳಿದ್ದಾನೆ. ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಆಕೆ ಮೃತಪಟ್ಟಿದ್ದಾಳೆ. ಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ತನಿಖೆ ವೇಳೆ ಮಮತಾಳಿಗೆ 5 ತಿಂಗಳ ಹಿಂದೆ ವಿವಾಹ ನಿಶ್ಚಯವಾಗಿತ್ತು. ನಂತರ ಮಮತಾ ಮದುವೆಗೆ ನಿರಾಕರಿಸಿ ಮನೆ ಬಿಟ್ಟು ಪರಾರಿಯಾಗಿದ್ದಳು. ಇದರಿಂದ ಬೇಸರಗೊಂಡ ಪೋಷಕರು ಯಾವುದೇ ಕ್ರಮಗಳನ್ನು ಕೈಗೊಳ್ಳದೇ ಸುಮ್ಮನಿದ್ದರು. ಈಗ ಮಮತಾ ಮೃತಪಟ್ಟಿರುವುದು ನಾನಾ ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ.

ಮಮತಾಳನ್ನು ಪ್ರೀತಿಸುತ್ತಿದ್ದ ಸಿದ್ದರಾಜು ಎಂಬಾತನೇ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು ಎಂದು ಪೊಲೀಸರಿಗೆ ಗೊತ್ತಾಗಿದೆ. ಸಿದ್ದರಾಜು ಮೊಬೈಲ್‌ ಫೋನ್‌ ಸ್ವಿಚ್‌ ಆಫ್‌ ಬರುತ್ತಿರುವುದರಿಂದ ಆತನ ಮೇಲೆ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ. ಸದ್ಯಕ್ಕೆ ಅಪಘಾತ ಪ್ರಕರಣ ದಾಖಲಾಗಿದೆ. ಸಿದ್ದರಾಜುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ನಂತರ ಅಥವಾ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಮಮತಾ ಸಾವಿಗೆ ಸ್ಪಷ್ಟ ಕಾರಣ ತಿಳಿಯಲಿದೆ ಎಂದು ಪಟ್ಟಣ ಪೊಲೀಸ್‌ ಠಾಣೆ ಪಿಎಸ್‌ಐ ಎನ್‌. ಕೃಷ್ಣಪ್ಪ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ