ಆ್ಯಪ್ನಗರ

ಚಾಮರಾಜನಗರ ಆರ್‌ಟಿಒ ಕಚೇರಿಗೆ ಎಸಿಬಿ ದಾಳಿ: 1.12 ಲಕ್ಷ ರೂ. ವಶ

ನಗರದ ಪ್ರಾದೇಶಿಕ ಸಾರಿಗೆ ಕಚೇರಿಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದು, ಹೆಚ್ಚುವರಿ 1.12 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.

Vijaya Karnataka 19 Feb 2019, 5:00 am
ಚಾಮರಾಜನಗರ: ನಗರದ ಪ್ರಾದೇಶಿಕ ಸಾರಿಗೆ ಕಚೇರಿಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದು, ಹೆಚ್ಚುವರಿ 1.12 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.
Vijaya Karnataka Web acb attack to chamarajanagar rto office rs 1 12 lakh capture
ಚಾಮರಾಜನಗರ ಆರ್‌ಟಿಒ ಕಚೇರಿಗೆ ಎಸಿಬಿ ದಾಳಿ: 1.12 ಲಕ್ಷ ರೂ. ವಶ


ಸೋಮವಾರ ಸಂಜೆ ನಗರದ ಗುಂಡ್ಲುಪೇಟೆ ರಸ್ತೆಯಲ್ಲಿರುವ ಆರ್‌ಟಿಒ ಕಚೇರಿಗೆ ಎರಡು ವಾಹನಗಳಲ್ಲಿ ದಾಳಿ ಮಾಡಿದ ಅಧಿಕಾರಿಗಳು, ರಶೀದಿಗಳು ಹಾಗೂ ಹಣವನ್ನು ಪರಿಶೀಲಿಸಿದರು. ಈ ಸಂದರ್ಭ ಸೋಮವಾರ ಹಾಕಿರುವ ರಶೀದಿ ಲೆಕ್ಕ ಪರಿಶೀಲಿಸಿದಾಗ ಹೆಚ್ಚುವರಿಯಾಗಿ 1.12 ಲಕ್ಷ ರೂ. ಪತ್ತೆಯಾಯಿತು. ಈ ಹಣಕ್ಕೆ ಲೆಕ್ಕ ಇಲ್ಲ. ಹೀಗಾಗಿ ಆ ಹಣ ವಶಪಡಿಸಿಕೊಂಡಿರುವ ಅಧಿಕಾರಿಗಳು, ಕಡತಗಳ ಪರಿಶೀಲನೆ ಮುಂದುವರಿಸಿದ್ದಾರೆ.

ಈ ದಾಳಿಯಲ್ಲಿ ಎಸಿಬಿ ಡಿವೈಎಸ್ಬಿ ಮೋಹನ್‌, ಇನ್ಸ್‌ಪೆಕ್ಟರ್‌ಗಳಾದ ಶ್ರೀಕಾಂತ್‌, ಜಗದೀಶ್‌ ಹಾಗೂ ಸಿಬ್ಬಂದಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ