ಚಾಮರಾಜನಗರ: ತಾಲೂಕಿನ ಮರಿಯಾಲ ಗ್ರಾಮದ ಬಸ್ ನಿಲ್ದಾಣದ ಬಳಿ ಮಂಗಳವಾರ ಸಂಜೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಧಿಟ್ಟರು.
ಯಳಂದೂರು ತಾಲೂಕಿನ ಅಗರ ಗ್ರಾಮದ ಲತಾ (24) ಮೃತರು. ಮರಿಯಾಲದ ಜೆಎಧಿಸ್ಎಸ್ ರುಡ್ಸೆಟ್ ಸಂಸ್ಥೆ ಉದ್ಯೋಗಿಯಾಗಿದ್ದು, ಕೆಲಸ ಮುಗಿಸಿ ಬಸ್ ಗೆ ತೆರಳಲು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ನಗರಕ್ಕೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಅಸುನೀಗಿದರು.
ಎಎಸ್ಪಿ ಗೀತಾ ಪ್ರಸನ್ನ, ಡಿವೈಎಸ್ಪಿ ಜಯಕುಮಾರ , ಸಂಚಾರ ಠಾಣೆ ಎಸ್ ಐ ದೀಪಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನನ್ನು ವಶಕ್ಕೆ ತಗೆದುಕೊಂಡಿದ್ದಾರೆ.
ಯಳಂದೂರು ತಾಲೂಕಿನ ಅಗರ ಗ್ರಾಮದ ಲತಾ (24) ಮೃತರು. ಮರಿಯಾಲದ ಜೆಎಧಿಸ್ಎಸ್ ರುಡ್ಸೆಟ್ ಸಂಸ್ಥೆ ಉದ್ಯೋಗಿಯಾಗಿದ್ದು, ಕೆಲಸ ಮುಗಿಸಿ ಬಸ್ ಗೆ ತೆರಳಲು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ನಗರಕ್ಕೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಅಸುನೀಗಿದರು.
ಎಎಸ್ಪಿ ಗೀತಾ ಪ್ರಸನ್ನ, ಡಿವೈಎಸ್ಪಿ ಜಯಕುಮಾರ , ಸಂಚಾರ ಠಾಣೆ ಎಸ್ ಐ ದೀಪಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನನ್ನು ವಶಕ್ಕೆ ತಗೆದುಕೊಂಡಿದ್ದಾರೆ.