ಆ್ಯಪ್ನಗರ

ಆರೋಗ್ಯ ಸ್ವಚ್ಛತೆಗೆ ಜಾಗೃತಿ ವಹಿಸಿ

ಜನ ಸಾಮಾನ್ಯರು ಆರೋಗ್ಯದ ಕಾಳಜಿ ಕುರಿತು ಜಾಗತರಾದರೆ ಸಮಸ್ಯೆಗಳನ್ನು ತಪ್ಪಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ತಿಳಿಸಿದರು.

Vijaya Karnataka 7 Aug 2019, 9:54 pm
ಚಾಮರಾಜನಗರ: ಜನ ಸಾಮಾನ್ಯರು ಆರೋಗ್ಯದ ಕಾಳಜಿ ಕುರಿತು ಜಾಗತರಾದರೆ ಸಮಸ್ಯೆಗಳನ್ನು ತಪ್ಪಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ತಿಳಿಸಿದರು.
Vijaya Karnataka Web CHN-CHN7HM5


ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆರೋಗ್ಯ, ಕುಡಿಯುವ ನೀರು, ನೈರ್ಮಲ್ಯ ಸೇರಿದಂತೆ ಮಹತ್ವದ ವಿಷಯಗಳ ಕುರಿತು ಹಮ್ಮಿಕೊಂಡಿದ್ದ ಎರಡು ದಿನಗಳ ಜನಜಾಗತಿ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.

‘‘ಆರೋಗ್ಯ ಮತ್ತು ಸ್ವಚ್ಛತೆಯ ವಿಷಯಗಳ ಬಗ್ಗೆ ಆಕರ್ಷಕವಾಗಿ ವಸ್ತು ಪ್ರದರ್ಶನದಲ್ಲಿ ಲಕಗಳು ಮೂಡಿಬಂದಿವೆ. ಜನಸಾಮಾನ್ಯರು ಅದರಲ್ಲೂ ಮಹಿಳೆಯರಿಗೆ ಆರೋಗ್ಯ ಸಂಬಂಧಿ ನೀಡಲಾಗಿರುವ ಮಾಹಿತಿಗಳು ಅತ್ಯಂತ ಉಪಯುಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭೇಟಿ ನೀಡಿ ವಸ್ತು ಪ್ರದರ್ಶನದ ಪ್ರಯೋಜನ ಪಡೆಯಬೇಕು,’’ಎಂದರು.

ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಸಹಾಯಕ ನಿರ್ದೇಶಕ ಎ. ರಮೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಎಂ.ಸಿ. ರವಿ, ಇತರರು ಕಾರ‌್ಯಕ್ರಮದಲ್ಲಿ ಹಾಜರಿದ್ದರು.

ಜಾಗತಿ ವಸ್ತುಪ್ರದರ್ಶನ
ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿರುವ ಜನಜಾಗತಿ ವಸ್ತುಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯುತ್ತಿದೆ.

ಆಸ್ಪತ್ರೆಯಲ್ಲಿ ಸುರಕ್ಷಿತ ಹೆರಿಗೆ, ನವಜಾಥಾ ಶಿಶು ಆರೈಕೆ, ತಾಯಂದಿರ ಸಂಪೂರ್ಣ ವಾತ್ಸಲ್ಯ ಕಾರ‌್ಯಕ್ರಮ, ಜನನಿ ಶಿಶು ಸುರಕ್ಷಾ ಕಾರ‌್ಯಕ್ರಮ, ಸಾರ್ವತ್ರಿಕ ಲಸಿಕಾ ಕಾರ‌್ಯಕ್ರಮ, ತಾಯಿ ಕಾರ್ಡ್, ಶೌಚಾಲಯ ಬಳಕೆ, ನೀರು ಸಂರಕ್ಷೆಯಂತಹ ಮಾಹಿತಿ ನೀಡುವ ಲಕಗಳು, ಕ್ಷಯರೋಗ ನಿಯಂತ್ರಣ, ಡೆಂಗೆ ಹರಡದಂತೆ ಕ್ರಮಕೈಗೊಳ್ಳಬೇಕು. ಹಸಿ ಮತ್ತು ಒಣ ಕಸದ ತ್ಯಾಜ್ಯ ವಿಲೇವಾರಿ ನಿರ್ವಹಣೆ ಮಾಹಿತಿ, ್ಲೋರೋಸಿಸ್ ತಡೆಗಟ್ಟುವಿಕೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಇಲಾಖೆಯ ಅನುಷ್ಠಾನ ಮಾಡುತ್ತಿರುವ ಆರೋಗ್ಯ, ನೈರ್ಮಲ್ಯ ಕಾರ‌್ಯಕ್ರಮಗಳ ಕುರಿತು ಚಿತ್ರ ಲಕಗಳ ವಸ್ತುಪ್ರದರ್ಶನದಲ್ಲಿ ಅನಾವರಣಗೊಂಡಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ