ಆ್ಯಪ್ನಗರ

25 ಅಂಗಡಿಗಳ ಮೇಲೆ ದಾಳಿ: 270 ಕೆಜಿ ಪ್ಲಾಸ್ಟಿಕ್‌ ವಶ

ಪಟ್ಟಣದ ವಿವಿಧ ಅಂಗಡಿ ಮುಂಗಟ್ಟುಗಳ ಮೇಲೆ ಪ.ಪಂ. ಮುಖ್ಯಾಧಿಕಾರಿ ಮೋಹನ್‌ ಕೃಷ್ಣ ನೇತೃತ್ವದಲ್ಲಿ ಆರೋಗ್ಯಾಧಿಕಾರಿ, ಪ.ಪಂ. ಅಧಿಕಾರಿಗಳು, ಸಿಬ್ಬಂದಿ ದಾಳಿ ನಡೆಸಿ ಪ್ಲಾಸ್ಟಿಕ್‌ ಕವರ್‌, ಲೋಟ, ತಟ್ಟೆ ಇನ್ನಿತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Vijaya Karnataka 2 Jun 2019, 5:00 am
ಹನೂರು: ಪಟ್ಟಣದ ವಿವಿಧ ಅಂಗಡಿ ಮುಂಗಟ್ಟುಗಳ ಮೇಲೆ ಪ.ಪಂ. ಮುಖ್ಯಾಧಿಕಾರಿ ಮೋಹನ್‌ ಕೃಷ್ಣ ನೇತೃತ್ವದಲ್ಲಿ ಆರೋಗ್ಯಾಧಿಕಾರಿ, ಪ.ಪಂ. ಅಧಿಕಾರಿಗಳು, ಸಿಬ್ಬಂದಿ ದಾಳಿ ನಡೆಸಿ ಪ್ಲಾಸ್ಟಿಕ್‌ ಕವರ್‌, ಲೋಟ, ತಟ್ಟೆ ಇನ್ನಿತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
Vijaya Karnataka Web CHN-CHN1HNR3


ಈ ವೇಳೆ ಸಾರ್ವಜನಿಕರು ಹಾಗೂ ಅಂಗಡಿ ಮಾಲೀಕರು ನೋಟಿಸ್‌ ನೀಡದೆ ದಾಳಿ ನಡೆಸಿರುವುದು ಸರಿಯಲ್ಲ ಎಂದು ವಿರೋಧಿಸಿದರು. ಸಾರ್ವಜನಿಕರ ವಿರೋಧವನ್ನು ಲೆಕ್ಕಿಸದ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಟ್ಟಣದ ಸುಮಾರು 25 ಅಂಗಡಿ ಮುಂಗಟ್ಟುಗಳ ಒಳಹೊಕ್ಕಿ 270 ಕೆಜೆ ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿಕೊಂಡರು. ಇದೇ ವೇಳೆ ಪ್ರಭಾವಿ ರಾಜಕೀಯ ಮುಖಂಡರೊಬ್ಬರ ಅಂಗಡಿಯನ್ನು ಪರಿಶೀಲಿಸಿಲ್ಲ ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತೀವ್ರವಾಗಿ ತರಾಟೆ ತೆಗೆದುಕೊಂಡರು.

ಪ್ಲಾಸ್ಟಿಕ್‌ ವಶ: ಪಟ್ಟಣದ ಮುಖ್ಯರಸ್ತೆಯಲ್ಲಿ ಬರುವ ವಾಸವಿ ಸ್ಟೋರ್‌, ಬಸವೇಶ್ವರ ಸ್ಟೊರ್‌, ವಿಜಯಲಕ್ಷ್ಮೀ ಸ್ಟೋರ್‌ ಹಾಗೂ ಇನ್ನಿತರ ಅಂಗಡಿಗಳಲ್ಲಿ ನಿಷೇಧಿತ ಪ್ಲಾಸ್ಟಿಕ್‌ ವಶಕ್ಕೆ ಪಡೆದ ನಂತರ ಪ್ರಭಾವಿ ರಾಜಕೀಯ ಮುಖಂಡರ ಅಂಗಡಿಯನ್ನು ಬಿಟ್ಟು ಬೇರೆ ಅಂಗಡಿಗಳಲ್ಲಿ ದಾಳಿ ನಡೆಸುತ್ತಿರುವ ಬಗ್ಗೆ ಅಧಿಕಾರಿಗಳನ್ನು ಸಾರ್ವಜನಿಕರು ತೀವ್ರ ತರಾಟೆಗೆ ತೆಗೆದುಕೊಂಡು. ಎಲ್ಲರಿಗೂ ಒಂದೇ ಕಾನೂನು ಆದ್ದರಿಂದ ಅಂಗಡಿಯನ್ನು ಶೋಧನೆ ಮಾಡುವಂತೆ ಪಟ್ಟು ಹಿಡಿದರು. ನಂತರ ಸ್ಥಳಕ್ಕೆ ಆಗಮಿಸಿದ ಮುಖ್ಯಾಧಿಕಾರಿ ಮೋಹನ್‌ ಕೃಷ್ಣ ಸರಕಾರ ಪ್ಲಾಸ್ಟಿಕ್‌ ನಿಷೇಧಿಸಿದೆ. ಹಲವಾರು ತಿಂಗಳಿನಿಂದಲೂ ಸಹ ಸಾರ್ವಜನಿಕರಿಗೆ ನಿಷೇಧಿತ ಪ್ಲಾಸ್ಟಿಕ್‌ ಮಾರಾಟ ಮಾಡಬಾರದು ಎಂದು ಸೂಚನೆ ನೀಡಿದ್ದರೂ ಸಹ ಪ್ಲಾಸ್ಟಿಕ್‌ ಬಳಸಲಾಗುತ್ತಿದ್ದು, ಇಂದು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ಲಾಸ್ಟಿಕ್‌ ವಶಕ್ಕೆ ಪಡೆಯಲಾಗಿದೆ. ಮುಂದೆ ವರ್ತಕರು ನಿಷೇಧಿತ ಪ್ಲಾಸ್ಟಿಕ್‌ ವಸ್ತುಗಳನ್ನು ಮಾರಾಟ ಮಾಡಬಾರದು ಎಂದು ಸೂಚನೆ ನೀಡಿದರು.

ವರ್ತಕರಿಂದ ತರಾಟೆ: ಏಕಾಏಕಿ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿಕೊಳ್ಳುತ್ತಿದ್ದ ಆರೋಗ್ಯಾಧಿಕಾರಿಯನ್ನು ಅಂಗಡಿ ಮಾಲೀಕರು ತರಾಟೆಗೆ ತೆಗೆದುಕೊಂಡರು. ನೀವು ನಮಗೆ ತಿಳಿವಳಿಕೆ ಪತ್ರ ನೀಡದೆ ದಾಳಿ ನಡೆಸಿರುವುದು ಸರಿಯಾದ ಕ್ರಮವಲ್ಲ. 15 ದಿನ ಅವಕಾಶ ನೀಡಿ ನಂತರ ಪ್ಲಾಸ್ಟಿಕ್‌ ಬಳಕೆ ಮಾಡಿದರೆ ಕ್ರಮ ಕೈಗೊಳ್ಳಿ. ಈಗ ವಶಪಡಿಸಿಕೊಂಡಿರುವ ವಸ್ತುಗಳನ್ನು ವಾಪಸ್‌ ನೀಡಿ ಎಂದು ಒತ್ತಾಯಿಸಿದರು, ಆದರೆ ಆರೋಗ್ಯಾಧಿಕಾರಿ ಅದನ್ನು ವಶಕ್ಕೆ ಪಡೆದು ಕ್ರಮ ಕೈಗೊಂಡಿದ್ದಾರೆ.

ದಾಳಿ ಸಂದರ್ಭದಲ್ಲಿ ಸಮುದಾಯ ಸಂಘಟನಾಧಿಕಾರಿ ಯೋಗನಾಥ್‌ ಸಿಂಗ್‌, ಪ.ಪಂ. ಎಂಜಿನಿಯರ್‌ ಶಿವಶಂಕರ ಆರಾಧ್ಯ ಪ.ಪಂ.ಸಿಬ್ಬಂದಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ