ಆ್ಯಪ್ನಗರ

ಬೈಕ್‌ನಿಂದ ಬಿದ್ದು ಮಹಿಳೆ ಸಾವು

ಚಾಮರಾಜನಗರ ತಾಲೂಕಿನ ಮಾದಾಪುರ ಗ್ರಾಮದಲ್ಲಿಬೈಕ್‌ನಿಂದ ಬಿದ್ದು ಪತ್ನಿ ಮೃತಪಟ್ಟು, ಪತಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

Vijaya Karnataka 8 Dec 2019, 5:00 am
ಸಂತೇಮರಹಳ್ಳಿ: ಚಾಮರಾಜನಗರ ತಾಲೂಕಿನ ಮಾದಾಪುರ ಗ್ರಾಮದಲ್ಲಿಬೈಕ್‌ನಿಂದ ಬಿದ್ದು ಪತ್ನಿ ಮೃತಪಟ್ಟು, ಪತಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
Vijaya Karnataka Web baikninda biddu mahile savu
ಬೈಕ್‌ನಿಂದ ಬಿದ್ದು ಮಹಿಳೆ ಸಾವು


ಚಾಮರಾಜನಗರ ತಾಲೂಕಿನ ಉತ್ತವಳ್ಳಿ ಗ್ರಾಮದ ರೇಣುಕಾ (42) ಮೃತಪಟ್ಟವರು. ಇವರ ಪತಿ ಮಲ್ಲಣ್ಣ ಗಾಯಗೊಂಡಿದ್ದು, ನಗರದ ಜಿಲ್ಲಾಆಸ್ಪತ್ರೆಯಲ್ಲಿಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಮಲ್ಲಣ್ಣ ಮತ್ತು ರೇಣುಕಾ ಬೈಕ್‌ನಲ್ಲಿಸಂತೇಮರಹಳ್ಳಿ ಕಡೆಯಿಂದ ಚಾಮರಾಜನಗರಕ್ಕೆ ಬರುತ್ತಿದ್ದರು. ಈ ವೇಳೆ ಮಾದಾಪುರ ಹಾಗೂ ಭೋಗಾಪುರ ಕ್ರಾಸ್‌ ನಡುವೆ ಆಯತಪ್ಪಿ ಬಿದ್ದಿದ್ದಾರೆ. ಈ ವೇಳೆ ಬೈಕ್‌ ಹಿಂಬದಿ ಕುಳಿತಿದ್ದ ರೇಣುಕಾ ಅವರ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟರು. ಸಣ್ಣ ಪುಟ್ಟ ಗಾಯಗೊಂಡಿರುವ ಮಲ್ಲಣ್ಣ ಜಿಲ್ಲಾಸ್ಪತ್ರೆಯಲ್ಲಿದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಲ್ಲಣ ಮತ್ತು ರೇಣುಕಾ ಅವರ ಪುತ್ರಿಗೆ ವಿವಾಹ ನಿಶ್ಚಯವಾಗಿತ್ತು. ಈ ಹಿನ್ನೆಲೆಯಲ್ಲಿಇರುವ ನಿಶ್ಚಿತಾರ್ಥ ಕಾರ್ಯಕ್ಕೆ ಸಂಬಂಧಿಕರನ್ನು ಕರೆಯಲು ದಂಪತಿ ತೆರೆಳಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ.

ಈ ಸಂಬಂಧ ಸಂಚಾರಿ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ