ಆ್ಯಪ್ನಗರ

ಬಂದೂಕು ತಯಾರಿಸುತ್ತಿದ್ದ ವ್ಯಕ್ತಿ ಸೆರೆ

ತಾಲೂಕಿನ ಬನ್ನಿತಾಳಪುರ ಗ್ರಾಮದ ಹೊರ ವಲಯದ ತೋಟದ ಮನೆಯಲ್ಲಿಅಕ್ರಮವಾಗಿ ನಾಡ ಬಂದೂಕು ತಯಾರಿಸಿ ಮಾರಾಟ ಮಾಡಲು ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಡಿಸಿಐಬಿ ಮತ್ತು ಗುಂಡ್ಲುಪೇಟೆ ಠಾಣೆ ಪೊಲೀಸರು ಜಂಟಿ ಕಾರ್ಯಚರಣೆ ಮೂಲಕ ಗುರುವಾರ ತಡರಾತ್ರಿ ಬಂಧಿಸಿದ್ದಾರೆ.

Vijaya Karnataka 23 Nov 2019, 5:00 am
ಗುಂಡ್ಲುಪೇಟೆ : ತಾಲೂಕಿನ ಬನ್ನಿತಾಳಪುರ ಗ್ರಾಮದ ಹೊರ ವಲಯದ ತೋಟದ ಮನೆಯಲ್ಲಿಅಕ್ರಮವಾಗಿ ನಾಡ ಬಂದೂಕು ತಯಾರಿಸಿ ಮಾರಾಟ ಮಾಡಲು ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಡಿಸಿಐಬಿ ಮತ್ತು ಗುಂಡ್ಲುಪೇಟೆ ಠಾಣೆ ಪೊಲೀಸರು ಜಂಟಿ ಕಾರ್ಯಚರಣೆ ಮೂಲಕ ಗುರುವಾರ ತಡರಾತ್ರಿ ಬಂಧಿಸಿದ್ದಾರೆ.
Vijaya Karnataka Web ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರದಲ್ಲಿಅಕ್ರಮವಾಗಿ ನಾಡ ಬಂದೂಕು ತಯಾರಿಸಿ ಮಾರಾಟದ ಸಲುವಾಗಿ ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.


ಗ್ರಾಮದ ಪುಟ್ಟಮಾದಶೆಟ್ಟಿ ರ ಪುತ್ರ ಗೋಪಶೆಟ್ಟಿ(38) ಬಂಧಿತ ಆರೋಪಿ. ಈತ ತೋಟದ ಮನೆಯಲ್ಲಿಅಕ್ರಮವಾಗಿ ನಾಡ ಬಂದೂಕು ತಯಾರಿಸಿ ಜಿಲ್ಲೆಯ ವಿವಿಧ ಕಡೆಗಳಿಗೆ ಮಾರಾಟ ಮಾಡುತ್ತಿದ್ದ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿದಾಳಿ ನಡೆಸಿ ಎರಡು ಒಂಟಿ ನಳಿಕೆ ನಾಡ ಬಂದೂಕು ಮತ್ತು ತಯಾರಿಕೆಗೆ ಬಳಸುತ್ತಿದ್ದ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಸ್ಥಳೀಯ ಜೆಎಂಎಫ್‌ಸಿ ಮತ್ತು ಹಿರಿಯ ಶ್ರೇಣಿ ನ್ಯಾಯಾಧೀಶರಾದ ಮೋಹನ್‌ಕುಮಾರ್‌ರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿಡಿಸಿಐಬಿ ಇನ್ಸ್‌ಪೆಕ್ಟರ್‌ ಮಹದೇವಶೆಟ್ಟಿ, ಸಿಪಿಐ ಮಹದೇವಸ್ವಾಮಿ, ಎಎಸ್‌ಐ ಚಂದ್ರಶೇಖರ್‌, ಮುಖ್ಯ ಪೇದೆಗಳಾದ ಎಚ್‌.ಡಿ.ಸ್ವಾಮಿ, ಮಾದೇಶ್‌, ಸಿದ್ದಮಲ್ಲಶೆಟ್ಟಿ, ಜಗದೀಶ್‌, ಮಹೇಶ್‌ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ