ಆ್ಯಪ್ನಗರ

ಬಸವಾದಿ ಶರಣರ ಸಂದೇಶಗಳು ವಿಶ್ವಕ್ಕೆ ಮಾದರಿ: ಸ್ವಾಮೀಜಿ

12 ನೇ ಶತಮಾನದಲ್ಲಿ ಬಸವಾದಿ ಶರಣರು ಸಮಾಜದ ಅಭಿವೃದ್ಧಿಗೆ ನೀಡಿದ ಸಂದೇಶಗಳು ವಿಶ್ವಕ್ಕೆ ಮಾದರಿ ಎಂದು ಹರವೆ ವಿರಕ್ತ ಮಠದ ಶ್ರೀ ಸರ್ಪಭೂಷಣ ಸ್ವಾಮೀಜಿ ತಿಳಿಸಿದರು.

Vijaya Karnataka 8 May 2019, 5:00 am
ಚಾಮರಾಜನಗರ : 12 ನೇ ಶತಮಾನದಲ್ಲಿ ಬಸವಾದಿ ಶರಣರು ಸಮಾಜದ ಅಭಿವೃದ್ಧಿಗೆ ನೀಡಿದ ಸಂದೇಶಗಳು ವಿಶ್ವಕ್ಕೆ ಮಾದರಿ ಎಂದು ಹರವೆ ವಿರಕ್ತ ಮಠದ ಶ್ರೀ ಸರ್ಪಭೂಷಣ ಸ್ವಾಮೀಜಿ ತಿಳಿಸಿದರು.
Vijaya Karnataka Web basavati sharans messages model to the world swamiji
ಬಸವಾದಿ ಶರಣರ ಸಂದೇಶಗಳು ವಿಶ್ವಕ್ಕೆ ಮಾದರಿ: ಸ್ವಾಮೀಜಿ


ನಗರದ ಸತ್ತಿ ರಸ್ತೆಯಲ್ಲಿರುವ ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ನಡೆದ ಶ್ರೀ ಬಸವೇಶ್ವರ ಜಯಂತಿಯಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಪುಷ್ರ್ಪಾಚನೆ ನೆರವೇರಿಸಿ ಮಾತನಾಡಿದರು. ಸಮಾಜದಲ್ಲಿ ಹಾಸು ಹೊಕ್ಕಾಗಿದ್ದ ಜಾತಿಪದ್ದತಿ. ಸಾಮಾಜಿಕ ಅಸಮಾನತೆಯ ವಿರುದ್ಧ ಹೋರಾಟ ಮಾಡಿದ ಬಸವಣ್ಣ ಮಹಾನ್‌ ಮಾನವತಾವಾದಿ. ತಮ್ಮ ವಚನಗಳ ಮೂಲಕ ಸಮಾಜವನ್ನು ಪರಿವರ್ತನೆ ಮಾಡಲು ಮುಂದಾದ ಅವರ ವಿಚಾರಧಾರೆಗಳು 21ನೇ ಶತಮಾನದಲ್ಲಿಯೂ ಪ್ರಾಮುಖ್ಯತೆಯನ್ನು ಪಡೆದುಕೊಂಡಿವೆ ಎಂದರು.

ಸಾನ್ನಿಧ್ಯ ವಹಿಸಿದ್ದ ಚಾಮರಾಜನಗರ ಸಿದ್ದಮಲ್ಲೇಶ್ವರ ವಿರಕ್ತ ಮಠದ ಚನ್ನಬಸವಸ್ವಾಮೀಜಿ ಮಾತನಾಡಿ, ಬಸವಣ್ಣ ಕಟ್ಟಿದ ಅನುಭವ ಮಂಟಪ ಇಂದಿನ ಸಂಸತ್‌ ಎಂದರೆ ಅತಿಶಯೋಕ್ತಿಯಲ್ಲ. ಎಲ್ಲಾ ವರ್ಗದವರನ್ನು ಸಮಾನತೆಯಿಂದ ಕಂಡು ವಚನ ಸಾಹಿತ್ಯ ರಚಿಸಲು ಅನುವು ಮಾಡಿಕೊಟ್ಟರು.

ಬಸವಣ್ಣನವರ ಅನುಯಾಯಿಗಳಾದ ನಾವೆಲ್ಲರೂ ಅವರ ಆಶಯದಂತೆ ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಶ್ರಮಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಟಿ.ನರಸೀಪುರ ತಾಲೂಕಿನ ಮುಡುಕನಪುರ ಹಲವಾರು ಮಠದ ಷಡಕ್ಷ ರದೇಶಿಕೇಂದ್ರಸ್ವಾಮೀಜಿ, ಮರಿಯಾಲ ಮಠದ ಶ್ರೀ ಇಮ್ಮಡಿ ಮುರುಘರಾಜೇಂದ್ರಸ್ವಾಮಿ ಸಾನ್ನಿಧ್ಯ ವಹಿಸಿ ಮಾತನಾಡಿದರು.

ವೀರಶೈವ ಮಹಾಸಭೆ ಜಿಲ್ಲಾಧ್ಯಕ್ಷ ಕೋಡಸೋಗೆ ಶಿವಬಸಪ್ಪ, ಮಹಾಸಭೆ ರಾಜ್ಯ ಪರಿಷತ್‌ ಸದಸ್ಯ ಹೆಗ್ಗವಾಡಿಪುರ ಎನ್‌ರಿಎಚ್‌ ಮಹದೇವಸ್ವಾಮಿ, ತಾಲೂಕು ಅಧ್ಯಕ್ಷ ಹೊಸೂರು ನಟೇಶ್‌, ವೀರಶೈವ ನೌಕರರ ಸಂಘದ ಅಧ್ಯಕ್ಷ ಪರಮೇಶ್ವರಪ್ಪ, ಕಾರ್ಯದರ್ಶಿ ಐಟಿಐ ಮಹದೇವಸ್ವಾಮಿ, ಮಹಾಸಭೆ ಖಜಾಂಚಿ ಪಿ. ಮರಿಸ್ವಾಮಿ, ನಿರ್ದೇಶಕರಾದ ಜಿ. ಕುಮಾರಸ್ವಾಮಿ, ರಾಜೇಂದ್ರ, ಎಂ.ಪಿ.ತಮ್ಮಣ್ಣ, ನಾಗರಾಜು, ಶಿವಪಾದಪ್ಪ, ಬಸವರಾಜು, ಲತಾ ಜಯಣ್ಣ, ಪಾರ್ವತಮ್ಮ, ವಿಮಲಾ ಜಯಶಂಕರ್‌, ಮಂಜುಳಾ, ನಿರ್ಮಲ, ಗುರುಮಲ್ಲಮ್ಮ, ಮೂಡ್ಲುಪುರ ನಂದೀಶ್‌, ಮಹೇಶ್‌, ಪುಟ್ಟಸ್ವಾಮಿ, ಸ್ವಾಮಿ ಹಾಗೂ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ