ಆ್ಯಪ್ನಗರ

ಚಾಮರಾಜನಗರ: ಮಾಜಿ ಬಿಜೆಪಿ ಶಾಸಕ ಗುರುಸ್ವಾಮಿ ಕೊರೊನಾಗೆ ಬಲಿ!

ಕಳೆದ ಹದಿನೈದು ದಿನಗಳ ಹಿಂದೆ ಮಾಜಿ ಶಾಸಕ ಗುರುಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ಸಮಸ್ಯೆ ಉಲ್ಬಣಗೊಂಡಿದ್ದರಿಂದ ಅವರಿಗೆ ವೆಂಟಿಲೇಟರ್ ಅಳವಡಿಸಿದ್ದರು.ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನಪ್ಪಿದ್ದಾರೆ.

Vijaya Karnataka 19 Aug 2020, 9:25 am
ಚಾಮರಾಜನಗರ: ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ ಸಿ.ಗುರುಸ್ಚಾಮಿ(68) ಬುಧವಾರ ಬೆಳಗ್ಗೆ ನಿಧನರಾದರು. ಕಳೆದ ಹದಿನೈದು ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾಖಲಾಗಿದ್ದರು.
Vijaya Karnataka Web yUAUHhW5

ಉಸಿರಾಟದ ಸಮಸ್ಯೆ ಉಲ್ಬಣಗೊಂಡಿದ್ದರಿಂದ ಅವರಿಗೆ ವೆಂಟಿಲೇಟರ್ ಅಳವಡಿಸಿದ್ದರು.

ಇದೀಗ ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ 6.30ಕ್ಕೆ ಗುರುಸ್ವಾಮಿ ಕೊನೆಯಿಸಿರೆಳೆದಿದ್ದಾರೆ. ಗುರುಸ್ವಾಮಿ ಅವರು ಚಾಮರಾಜನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ 1999ರಲ್ಲಿ ಆಯ್ಕೆಯಾಗಿದ್ದರು. ನಂತರದಲ್ಲಿ ಕಾಂಗ್ರೆಸ್ ಸೇರಿ ಇಲ್ಲಿನ ಜಿಲ್ಲಾಧ್ಯಕ್ಷರಾಗಿದ್ದರು. ಮತ್ತೆ ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡು ಸಕ್ರಿಯರಾಗಿದ್ದರು.

ಇನ್ನು ಗುರುಸ್ವಾಮಿ ಅವರ ಅಂತ್ಯಕ್ರಿಯೆ ಚಾಮರಾಜನಗರನಗರ ತಾಲೂಕು ಸ್ವಗ್ರಾಮ ಯಾನಗಳ್ಳಿಯ ಅವರ ತೋಟದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಹಲವು ಸಚಿವರು, ಶಾಸಕರುಗಳಿಗೆ ಕೊರೊನಾ ಸೋಂಕು ದೃಢಪಡುತ್ತಿದೆ. ಹಲವರ ಗುಣಮುಖರಾಗಿದ್ದಾರೆ.
ರೈತರೇ.. ನಿಮ್ಮ ಮೊಬೈಲ್‌ನಲ್ಲೇ‌ ಬೆಳೆ ಸಮೀಕ್ಷೆ ನಡೆಸಿ: ಮಿಸ್ ಮಾಡಿದ್ರೆ ಬೆಳೆ ವಿಮೆ ಸಿಗಲ್ಲ..!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ