ಆ್ಯಪ್ನಗರ

'22 'ಕೈ' ಶಾಸಕರು ಸಂಪರ್ಕದಲ್ಲಿ; ಐವರು ತಕ್ಷಣ ರಾಜೀನಾಮೆಗೆ ಸಿದ್ಧʼ: ರಮೇಶ್‌ ಜಾರಕಿಹೊಳಿ

ಕೊರೊನಾ ಬಿಕ್ಕಟ್ಟಿನ ನಡುವೆಯೂ ಕರ್ನಾಟಕದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಬಿಜೆಪಿಯಲ್ಲಿ ಅಸಮಧಾನ ಬುಗಿಲೆದ್ದಿದ್ದು, ಸರಕಾರ ಅಪಾಯದ ಅಂಚಿನಲ್ಲಿದೆ ಎಂದು ಕಾಂಗ್ರೆಸ್‌ ಮುಖಂಡರು ವಾದಿಸುತ್ತಿದ್ದಾರೆ. ಆದರೆ, ಈ ಎಲ್ಲ ಅಂಸಗಳನ್ನು ಅಲ್ಲಗಳೆದಿರುವ ಸಚಿವ ರಮೇಶ್‌ ಜಾರಕಿಹೊಳಿ ಸರಕಾರ ಸುರಕ್ಷಿತವಾಗಿದೆ ಎಂದಿದ್ದಾರೆ.

Vijaya Karnataka Web 29 May 2020, 4:06 pm
ಚಾಮರಾಜನಗರ: ಕಾಂಗ್ರೆಸ್‌ನ ಐವರು ಶಾಸಕರು ನನ್ನ ನೇರ ಸಂಪರ್ಕದಲ್ಲಿದ್ದಾರೆ. ನಮ್ಮ ಹೈಕಮಾಂಡ್‌ ಒಪ್ಪಿದರೇ ತಕ್ಷಣ ರಾಜೀನಾಮೆ ಕೊಡಿಸುವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಮೂಲಕ ಆಡಳಿತಾರೂಢ ಸರಕಾರಕ್ಕೆ ಯಾವುದೇ ಅಪಾಯವಿಲ್ಲ ಎಂಬ ಸೂಚನೆಯನ್ನು ನೀಡಿದ್ದಾರೆ.
Vijaya Karnataka Web ರಮೇಶ್‌ ಜಾರಕಿಹೊಳಿ
ಸಚಿವ ರಮೇಶ್‌ ಜಾರಕಿಹೊಳಿ (ಫೈಲ್‌ ಫೋಟೋ)


ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗುಂಡಾಲ್ ಜಲಾಶಯ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಸೇಫಾಗಿದೆ. ಯಾರೂ ಏನೂ ಮಾಡಲಾಗಲ್ಲ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದರು.

ಒಟ್ಟು 22 ಮಂದಿ ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಅದರಲ್ಲಿ ಐದು ಜನ ತಕ್ಷಣ ರಾಜೀನಾಮೆ ಸಲ್ಲಿಸಲು ಸಿದ್ಧವಾಗಿದ್ದಾರೆ. ಹೀಗಿರುವಾಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಯಾವ ಆಪರೇಷನ್ ಮಾಡಲು ಸಾಧ್ಯ ಎಂದು ವ್ಯಂಗ್ಯವಾಡಿದರು.

ವಲಸಿಗರಿಗೆ ಮಣೆ, ಮೂಲ ಬಿಜೆಪಿಗರ ಕಡೆಗಣನೆ ! ‘ಕತ್ತಿ’ ವರಸೆಗೆ ಕಾರಣವಿದು!

ಇನ್ನು, ರಾಜ್ಯದಲ್ಲಿ ಕೊರೊನಾ ಬಿಕ್ಕಟ್ಟಿನ ನಡುವೆಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಬಿಜೆಪಿಯಲ್ಲಿ ಅಸಮಾಧಾನದ ಹೊಗೆಯಾಡುತ್ತಿರುವ ಬಗ್ಗೆ ಅನುಮಾನ ಹುಟ್ಟಿಕೊಂಡಿವೆ. ಗುರುವಾರ ಒಂದಿಷ್ಟು ಬಿಜೆಪಿ ಶಾಸಕರು ಸಭೆ ಸೇರಿ ಅತೃಪ್ತಿಯನ್ನು ಹೊರಹಾಕಿದ್ದಾರೆ ಎನ್ನಲಾಗಿದೆ.

ಕಮಲದಲ್ಲಿ ಬಂಡಾಯದ ಬಿಸಿ! ಅಸಮಾಧಾನದ ಕಿಡಿಯ ಹಿಂದೆ ಯಾರ ಕೈವಾಡ?

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ