ಆ್ಯಪ್ನಗರ

ಡಿಕೆಶಿ ಬಂಧನಕ್ಕೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ

ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಿರುವ ವಿಚಾರದಲ್ಲಿಕಾಂಗ್ರೆಸ್‌, ಜೆಡಿಎಸ್‌ ನಾಯಕರು ಕೇಂದ್ರ ಮತ್ತು ರಾಜ್ಯ ಸರಕಾರದ ಮೇಲೆ ಅವಿವೇಕಿತನದ ಹೇಳಿಕೆ ನೀಡುತ್ತಿದ್ದು, ರಾಜ್ಯದ ಜನರಿಗೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಪ್ರೊ.ಕೆ.ಆರ್‌.ಮಲ್ಲಿಕಾರ್ಜುನಪ್ಪ ಹೇಳಿದರು.

Vijaya Karnataka 7 Sep 2019, 5:00 am
ಚಾಮರಾಜನಗರ: ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಿರುವ ವಿಚಾರದಲ್ಲಿಕಾಂಗ್ರೆಸ್‌, ಜೆಡಿಎಸ್‌ ನಾಯಕರು ಕೇಂದ್ರ ಮತ್ತು ರಾಜ್ಯ ಸರಕಾರದ ಮೇಲೆ ಅವಿವೇಕಿತನದ ಹೇಳಿಕೆ ನೀಡುತ್ತಿದ್ದು, ರಾಜ್ಯದ ಜನರಿಗೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಪ್ರೊ.ಕೆ.ಆರ್‌.ಮಲ್ಲಿಕಾರ್ಜುನಪ್ಪ ಹೇಳಿದರು.
Vijaya Karnataka Web bjp has nothing to do with dikeshis arrest
ಡಿಕೆಶಿ ಬಂಧನಕ್ಕೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ


ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರ ದೆಹಲಿ ನಿವಾಸದಲ್ಲಿದೊರೆತ 8.5 ಕೋಟಿ ರೂ.ಹಣದ ಬಗ್ಗೆ 2017ರಿಂದಲೇ ತನಿಖೆ ಆರಂಭವಾಗಿದೆ, ಅದರ ಬಗ್ಗೆ ಸೂಕ್ತದಾಖಲೆ ಕೊಡಲು ಡಿ.ಕೆ.ಶಿವಕುಮಾರ್‌ ವಿಫಲರಾದ ಕಾರಣ ಸಿಬಿಐ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ, ತನಿಖಾ ಸಂಸ್ಥೆಗಳ ಮೇಲೆ ಕೇಂದ್ರ ಸರಕಾರ ಹಸ್ತಕ್ಷೇಪ ಮಾಡುತ್ತಿದೆ ಎಂಬ ಕಾಂಗ್ರೆಸ್‌, ಜೆಡಿಎಸ್‌ ನಾಯಕರ ಹೇಳಿಕೆ ಸರಿಯಾದುದಲ್ಲಸಿಬಿಐ, ಸಿಐಡಿ, ಇಡಿ ತನಿಖಾ ಸಂಸ್ಥೆಗಳು ಸ್ವಾಯತ್ತ ಸಂಸ್ಥೆಗಳಾಗಿದ್ದು, ಸರಕಾರ ಆ ಸಂಸ್ಥೆಗಳು ನಡೆಸುವ ತನಿಖೆಯಲ್ಲಿಹಸ್ತಕ್ಷೇಪ ಮಾಡುವುದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಡಿ.ಕೆ.ಶಿವಕುಮಾರ್‌ ಅವರ ಬಂಧನಕ್ಕೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲಎಂದು ನಗರದಲ್ಲಿಶುಕ್ರವಾರ ಸುದ್ದಿಗೋಷ್ಠಿಯಲ್ಲಿಸ್ಪಷ್ಟಪಡಿಸಿದರು.

ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಿರುವ ಕ್ರಮ ಖಂಡಿಸಿ ರಾಜ್ಯದ ಒಂದೆರೆಡು ಜಿಲ್ಲೆಗಳಲ್ಲಿಮಾತ್ರ ಪ್ರತಿಭಟನೆ ನಡೆಸಲಾಗುತ್ತಿದೆ, ಪ್ರತಿಭಟನೆಯ ಹೆಸರಿನಲ್ಲಿಸಾರ್ವಜನಿಕ ಆಸ್ತಿಪಾಸ್ತಿ ನಡೆಸುವ ಪ್ರಕರಣಗಳು ನಡೆಯುತ್ತಿರುವುದು ಖಂಡನೀಯ,

ಡಿ.ಕೆ.ಶಿವಕುಮಾರ್‌ ಅವರು ಕೊಡುವ ಉತ್ತರದ ಮೇಲೆ ನ್ಯಾಯಾಲಯ ಮುಂದಿನ ಕ್ರಮ ಕೈಗೊಳ್ಳಲಿದೆ, ಇದನ್ನು ಕಾಂಗ್ರೆಸ್‌ ನವರು ರಾಜಕೀಯಕ್ಕೆ ಬಳಕೆಮಾಡಿಕೊಳ್ಳುತ್ತಿರುವುದು ಸರಿಯಲ್ಲ.

ಪ್ರತಿಭಟನೆಯ ಹೆಸರಲ್ಲಿಸಾರ್ವಜನಿಕ ಆಸ್ತಿಪಾಸ್ತಿಯ ಮೇಲೆ ನಷ್ಟವುಂಟು ಮಾಡಿರುವವರನ್ನು ಬಂಧಿಸಬೇಕು, ಮುಂದಿನ ದಿನಗಳಲ್ಲಿಕಾಂಗ್ರೆಸ್‌ ಪಕ್ಷದವರು ಅಭಿವೃದ್ಧಿ ವಿಚಾರಗಳಲ್ಲಿಲೋಪವಾದರೆ ಹೋರಾಟ ನಡೆಸಲು ಮುಂದಾಗಬೇಕು ಎಂಬುದು ನಮ್ಮ ಒತ್ತಾಯ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರಘಟಕದ ಅಧ್ಯಕ್ಷ ಸುಂದರ್‌ರಾಜ್‌, ಗ್ರಾಮಾಂತರ ಮಂಡಲ ಅಧ್ಯಕ್ಷ ಎಚ್‌.ಎಂ.ಬಸವಣ್ಣ, ಜಿಲ್ಲಾಪ್ರಧಾನ ಕಾರ್ಯದರ್ಶಿ ಪಿ.ಬಿ.ಶಾಂತಮೂರ್ತಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ