ಚಾಮರಾಜನಗರ: ದೇಶದಲ್ಲಿ ಕಾಂಗ್ರೆಸ್ ಎಂಬುದನ್ನು ಮುಂದಿನ ವಿಧಾನಸಭೆ ಚುನಾವಣೆಯ ಬಳಿಕ ಹುಡುಕುವ ಸ್ಥಿತಿ ಎದುರಾಗಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ ವ್ಯಂಗ್ಯವಾಡಿದರು. ಚಾಮರಾಜ ನಗರದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ನಡೆದ ಹಿಂದುಳಿದ ವರ್ಗಗಳ ಜಾಗೃತಿ ವಿರಾಟ ಸಮಾವೇಶದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
'ಅಂದು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಸರ್ದಾರ್ ವಲ್ಲಭಬಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಇವರದ್ದು ಕಾಂಗ್ರೆಸ್. ಈಗಿನ ಕಾಂಗ್ರೆಸ್ನ ಡಿ. ಕೆ. ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿದ್ದು, ನಲಪಾಡ್ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದು, ಕಂತೆ ಕಂತೆ ಹಣ ಗಳಿಸಿದ್ದರಿಂದ. ಭಾರತಕ್ಕೆ ಸ್ವಾತಂತ್ರ್ಯ ಬಂದಾಗ ಪಾಕಿಸ್ತಾನ ಹಿಂದೂಸ್ಥಾನ ಎರಡು ಆಗಿ ಹೋಯಿತು. ಇದನ್ನು ಮಾಡಿದವರು ಈಗಿನ ಕಾಂಗ್ರೆಸ್ನವರೇ. ಅರ್ಧ ಭಾಗವನ್ನು ಮುಸ್ಲಿಮರಿಗೆ ಬಿಟ್ಟು ಕೊಟ್ಟರು. ಅದರ ಫಲವಾಗಿ ಇಂದು ಇಡೀ ಕರ್ನಾಟಕದಲ್ಲಿ ರಾಷ್ಟ್ರ ಭಕ್ತರು, ರಾಷ್ಟ್ರ ದ್ರೋಹಿಗಳ ಮಧ್ಯೆ ಒಂದು ರೀತಿ ಸಂಘರ್ಷ ನಡೆಯುತ್ತಿದೆ. ದೇಶ ಒಡೆದವರು ಯಾರಪ್ಪ ಎಂದು ಕಾಂಗ್ರೆಸ್ನವರು ಒಪ್ಪಿಕೊಳ್ಳಬೇಕು' ಎಂದರು.
'ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದು, ಅನೇಕ ಬಾರಿ ಬಜೆಟ್ ಮಂಡಿಸಿದ್ದಾರೆ. ಹಿಂದುಳಿದ ವರ್ಗಗಳಿಗೆ ಎಷ್ಟು ಅನುದಾನ ನೀಡಿದ್ದಾರೆ ಎಂದು ಹೇಳಲಿಲ್ಲ. ಸುಮ್ಮನೆ ಖಾಲಿ ಡಬ್ಬದಂತೆ ಹಿಂದುಳಿದ ವರ್ಗದ ಪರವಾಗಿ ಎಂದು ಬೊಬ್ಬೆಯಿಡುತ್ತಿದ್ದಾರೆ. ಹಿಂದುಳಿದ ವರ್ಗದವರು ಒಗ್ಗಟ್ಟಾಗಿ ಮುಂದಿನ ದಿನಗಳಲ್ಲಿ ಅವರಿಗೆ ತಕ್ಕ ಪಾಠ ಕಲಿಸುವ ಕೆಲಸ ಮಾಡಬೇಕಿದೆ' ಎಂದರು.
'ಅಕ್ಟೋಬರ್ 10 ರಂದು ಹುಬ್ಬಳಿಯಲ್ಲಿ ಹಿಂದುಳಿದ ವರ್ಗಗಳ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿ ಸಮಾವೇಶ ನಡೆಯಲಿದ್ದು, ಅದರಲ್ಲಿ ಜಿಲ್ಲೆಯ ಎಲ್ಲ ಮಂಡಲಗಳಿಂದ ತಲಾ 10 ಮಂದಿ ಪ್ರಮುಖರು ಭಾಗವಹಿಸಬೇಕು. ಅಕ್ಟೋಬರ್ 30 ರಂದು ಕಲುಬುರಗಿಯಲ್ಲಿ ನಡೆಯುವ ಹಿಂದುಳಿದ ವರ್ಗಗಳ ರಾಜ್ಯ ಮಟ್ಟದ ಬೃಹತ್ ಸಮಾವೇಶಕ್ಕೆ ಜಿಲ್ಲೆಯಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಅಂದು ನಡೆಯುವ ಸಮಾವೇಶದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಕಾಂಗ್ರೆಸ್ ಹಾಗೂ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಸೆಡ್ಡು ಹೊಡೆಯಲಾಗುವುದು' ಎಂದು ಹೇಳಿದರು.
ಸಭೆಯಲ್ಲಿ ಶಾಸಕ ಎನ್. ಮಹೇಶ್, ಮಾಜಿ ಸಚಿವ ವಿಜಯ ಶಂಕರ್, ರಾಜ್ಯ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ಉಪಾಧ್ಯಕ್ಷ ಅಶೋಕ್ ಮೂರ್ತಿ ಮಾತನಾಡಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್. ಸುಂದರ್, ಕಾಡಾ ಅಧ್ಯಕ್ಷ ಜಿ. ನಿಜ ಗುಣರಾಜು, ಡಾ. ಎ. ಆರ್. ಬಾಬು, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ, ಮೈಸೂರು ವಿಭಾಗದ ಪ್ರಭಾರಿ ಮೈ. ವಿ. ರವಿಶಂಕರ್, ಒಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದು ಶೆಟ್ಟಿ, ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಒಬಿಸಿ ಮೋರ್ಚಾದ ಜಿಲ್ಲಾಧ್ಯಕ್ಷ ನಟರಾಜೇಗೌಡ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ, ಮಹದೇವಸ್ವಾಮಿ, ಉಪ್ಪಾರ ನಿಗಮದ ಅಧ್ಯಕ್ಷ ಗಿರೀಶ್ ಉಪ್ಪಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಂಗಲ ಶಿವಕುಮಾರ್, ನಾಗಶ್ರೀ ಪ್ರತಾಪ್, ನಗರ ಮಂಡಲ ಅಧ್ಯಕ್ಷ ನಾಗರಾಜು, ಗ್ರಾಮಾಂತರ ಮಂಡಲ ಅಧ್ಯಕ್ಷ ಬಸವಣ್ಣ, ಒಬಿಸಿ ನಗರ ಮಂಡಲ ಅಧ್ಯಕ್ಷ ನಂದೀಶ್ ಹಾಜರಿದ್ದರು.
'ಅಂದು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಸರ್ದಾರ್ ವಲ್ಲಭಬಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಇವರದ್ದು ಕಾಂಗ್ರೆಸ್. ಈಗಿನ ಕಾಂಗ್ರೆಸ್ನ ಡಿ. ಕೆ. ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿದ್ದು, ನಲಪಾಡ್ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದು, ಕಂತೆ ಕಂತೆ ಹಣ ಗಳಿಸಿದ್ದರಿಂದ. ಭಾರತಕ್ಕೆ ಸ್ವಾತಂತ್ರ್ಯ ಬಂದಾಗ ಪಾಕಿಸ್ತಾನ ಹಿಂದೂಸ್ಥಾನ ಎರಡು ಆಗಿ ಹೋಯಿತು. ಇದನ್ನು ಮಾಡಿದವರು ಈಗಿನ ಕಾಂಗ್ರೆಸ್ನವರೇ. ಅರ್ಧ ಭಾಗವನ್ನು ಮುಸ್ಲಿಮರಿಗೆ ಬಿಟ್ಟು ಕೊಟ್ಟರು. ಅದರ ಫಲವಾಗಿ ಇಂದು ಇಡೀ ಕರ್ನಾಟಕದಲ್ಲಿ ರಾಷ್ಟ್ರ ಭಕ್ತರು, ರಾಷ್ಟ್ರ ದ್ರೋಹಿಗಳ ಮಧ್ಯೆ ಒಂದು ರೀತಿ ಸಂಘರ್ಷ ನಡೆಯುತ್ತಿದೆ. ದೇಶ ಒಡೆದವರು ಯಾರಪ್ಪ ಎಂದು ಕಾಂಗ್ರೆಸ್ನವರು ಒಪ್ಪಿಕೊಳ್ಳಬೇಕು' ಎಂದರು.
'ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದು, ಅನೇಕ ಬಾರಿ ಬಜೆಟ್ ಮಂಡಿಸಿದ್ದಾರೆ. ಹಿಂದುಳಿದ ವರ್ಗಗಳಿಗೆ ಎಷ್ಟು ಅನುದಾನ ನೀಡಿದ್ದಾರೆ ಎಂದು ಹೇಳಲಿಲ್ಲ. ಸುಮ್ಮನೆ ಖಾಲಿ ಡಬ್ಬದಂತೆ ಹಿಂದುಳಿದ ವರ್ಗದ ಪರವಾಗಿ ಎಂದು ಬೊಬ್ಬೆಯಿಡುತ್ತಿದ್ದಾರೆ. ಹಿಂದುಳಿದ ವರ್ಗದವರು ಒಗ್ಗಟ್ಟಾಗಿ ಮುಂದಿನ ದಿನಗಳಲ್ಲಿ ಅವರಿಗೆ ತಕ್ಕ ಪಾಠ ಕಲಿಸುವ ಕೆಲಸ ಮಾಡಬೇಕಿದೆ' ಎಂದರು.
'ಅಕ್ಟೋಬರ್ 10 ರಂದು ಹುಬ್ಬಳಿಯಲ್ಲಿ ಹಿಂದುಳಿದ ವರ್ಗಗಳ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿ ಸಮಾವೇಶ ನಡೆಯಲಿದ್ದು, ಅದರಲ್ಲಿ ಜಿಲ್ಲೆಯ ಎಲ್ಲ ಮಂಡಲಗಳಿಂದ ತಲಾ 10 ಮಂದಿ ಪ್ರಮುಖರು ಭಾಗವಹಿಸಬೇಕು. ಅಕ್ಟೋಬರ್ 30 ರಂದು ಕಲುಬುರಗಿಯಲ್ಲಿ ನಡೆಯುವ ಹಿಂದುಳಿದ ವರ್ಗಗಳ ರಾಜ್ಯ ಮಟ್ಟದ ಬೃಹತ್ ಸಮಾವೇಶಕ್ಕೆ ಜಿಲ್ಲೆಯಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಅಂದು ನಡೆಯುವ ಸಮಾವೇಶದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಕಾಂಗ್ರೆಸ್ ಹಾಗೂ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಸೆಡ್ಡು ಹೊಡೆಯಲಾಗುವುದು' ಎಂದು ಹೇಳಿದರು.
ಸಭೆಯಲ್ಲಿ ಶಾಸಕ ಎನ್. ಮಹೇಶ್, ಮಾಜಿ ಸಚಿವ ವಿಜಯ ಶಂಕರ್, ರಾಜ್ಯ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ಉಪಾಧ್ಯಕ್ಷ ಅಶೋಕ್ ಮೂರ್ತಿ ಮಾತನಾಡಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್. ಸುಂದರ್, ಕಾಡಾ ಅಧ್ಯಕ್ಷ ಜಿ. ನಿಜ ಗುಣರಾಜು, ಡಾ. ಎ. ಆರ್. ಬಾಬು, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ, ಮೈಸೂರು ವಿಭಾಗದ ಪ್ರಭಾರಿ ಮೈ. ವಿ. ರವಿಶಂಕರ್, ಒಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದು ಶೆಟ್ಟಿ, ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಒಬಿಸಿ ಮೋರ್ಚಾದ ಜಿಲ್ಲಾಧ್ಯಕ್ಷ ನಟರಾಜೇಗೌಡ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ, ಮಹದೇವಸ್ವಾಮಿ, ಉಪ್ಪಾರ ನಿಗಮದ ಅಧ್ಯಕ್ಷ ಗಿರೀಶ್ ಉಪ್ಪಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಂಗಲ ಶಿವಕುಮಾರ್, ನಾಗಶ್ರೀ ಪ್ರತಾಪ್, ನಗರ ಮಂಡಲ ಅಧ್ಯಕ್ಷ ನಾಗರಾಜು, ಗ್ರಾಮಾಂತರ ಮಂಡಲ ಅಧ್ಯಕ್ಷ ಬಸವಣ್ಣ, ಒಬಿಸಿ ನಗರ ಮಂಡಲ ಅಧ್ಯಕ್ಷ ನಂದೀಶ್ ಹಾಜರಿದ್ದರು.