ಆ್ಯಪ್ನಗರ

ಇಂದು ಜಿಲ್ಲೆಯಲ್ಲಿ ಬಿಎಸ್‌ವೈ ಪ್ರಚಾರ

ಚಾಮರಾಜನಗರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿ. ಶ್ರೀನಿವಾಸ್‌ ಪ್ರಸಾದ್‌ ಪರ ಪ್ರಚಾರ ನಡೆಸಲು ಮಾಜಿಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಚಾಮರಾಜನಗರ ಜಿಲ್ಲೆಗೆ ಏ.14ರಂದು ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಎಚ್‌.ಎಂ.ಬಸವಣ್ಣ ಹೇಳಿದರು.

Vijaya Karnataka 14 Apr 2019, 5:00 am
ಚಾಮರಾಜನಗರ : ಚಾಮರಾಜನಗರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿ. ಶ್ರೀನಿವಾಸ್‌ ಪ್ರಸಾದ್‌ ಪರ ಪ್ರಚಾರ ನಡೆಸಲು ಮಾಜಿಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಚಾಮರಾಜನಗರ ಜಿಲ್ಲೆಗೆ ಏ.14ರಂದು ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಎಚ್‌.ಎಂ.ಬಸವಣ್ಣ ಹೇಳಿದರು.
Vijaya Karnataka Web bsi campaign in district today
ಇಂದು ಜಿಲ್ಲೆಯಲ್ಲಿ ಬಿಎಸ್‌ವೈ ಪ್ರಚಾರ


ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ''ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಬೆಳಗ್ಗೆ 8.30ಕ್ಕೆ ಆಗಮಿಸುವರು. ನಂತರ ಅಲ್ಲಿಂದ ಹೊರಟು, ಬೆಳಗ್ಗೆ 10ಕ್ಕೆ ಕೊಳ್ಳೇಗಾಲದ ಎಂಜಿಎಸ್‌ವಿ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಚುನಾವಣಾ ಪ್ರಚಾರದ ಬಹಿರಂಗಸಭೆಯಲ್ಲಿ ಭಾಗವಹಿಸಿ, ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡುವರು. ಬೆಳಗ್ಗೆ 11ಕ್ಕೆ ಚಾಮರಾಜನಗರಕ್ಕೆ ಭೇಟಿ ನೀಡುವ ಅವರು, ನಗರದ ಹಳೇ ಖಾಸಗಿ ಬಸ್‌ ನಿಲ್ದಾಣದ ಮಾರಿಗುಡಿ ಆವರಣದಲ್ಲಿ ನಡೆಯುವ ಬಹಿರಂಗಸಭೆಯಲ್ಲಿ ಪಾಲ್ಗೊಳ್ಳುವರು,'' ಎಂದರು.

''ಸಭೆಯಲ್ಲಿ ಅಭ್ಯರ್ಥಿ ವಿ.ಶ್ರೀನಿವಾಸ್‌ ಪ್ರಸಾದ್‌, ಜಿಲ್ಲಾಧ್ಯಕ್ಷ ಪ್ರೊ.ಕೆ.ಆರ್‌.ಮಲ್ಲಿಕಾರ್ಜುನಪ್ಪ ಸೇರಿದಂತೆ ಜಿಲ್ಲಾ ಘಟಕದ ಪದಾಧಿಕಾರಿಗಳು, ರಾಜ್ಯಮಟ್ಟದ ಮುಖಂಡರು, ಜಿಪಂ, ತಾಪಂ, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು, ನಗರಸಭೆ ಸದಸ್ಯರು ಭಾಗವಹಿಸುವರು,'' ಎಂದು ಹೇಳಿದರು.

ಗೋಷ್ಠಿಯಲ್ಲಿ ನಗರ ಘಟಕದ ಅಧ್ಯಕ್ಷ ಸುಂದರ್‌ರಾಜ್‌, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್‌, ನಗರ ಘಟಕದ ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಬಾಬು, ಕುಮಾರಸ್ವಾಮಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ