ಆ್ಯಪ್ನಗರ

ಸಿಇಟಿ: ಸಮರ್ಪಕ ನಿರ್ವಹಣೆಗೆ ಡಿಸಿ ಸೂಚನೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ 2019) ಪ್ರಕ್ರಿಯೆಯನ್ನು ಯಾವುದೇ ಲೋಪವಿಲ್ಲದೆ ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದರು.

Vijaya Karnataka 23 Apr 2019, 5:00 am
ಚಾಮರಾಜನಗರ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ 2019) ಪ್ರಕ್ರಿಯೆಯನ್ನು ಯಾವುದೇ ಲೋಪವಿಲ್ಲದೆ ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದರು.
Vijaya Karnataka Web cet dc notice for adequate management
ಸಿಇಟಿ: ಸಮರ್ಪಕ ನಿರ್ವಹಣೆಗೆ ಡಿಸಿ ಸೂಚನೆ


ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಾಮಾನ್ಯ ಪ್ರವೇಶ ಪರೀಕ್ಷೆ ಸಿದ್ಧತಾ ಕುರಿತ ಪೂರ್ವಭಾವಿ ಸಭೆ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಇದೇ ಏ. 29 ಮತ್ತು 30ರಂದು ನಡೆಯುವ ಸಿಇಟಿ ಪರೀಕ್ಷಾ ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸಬೇಕು. ಈಗಾಗಲೇ ನೇಮಕವಾಗಿರುವ ಅಧಿಕಾರಿಗಳು, ಪರೀಕ್ಷಾ ವೀಕ್ಷ ಕರು, ಮೂವರು ಸದಸ್ಯ ಸಮಿತಿ ಪರೀಕ್ಷಾ ಕೇಂದ್ರ ಮುಖ್ಯಸ್ಥರು, ವಿಶೇಷ ಜಾಗೃತ ದಳದ ಸದಸ್ಯರು ಇತರರು ನಿಯಮಾನುಸಾರವಾಗಿ ಪಾಲಿಸಬೇಕಿರುವ ಸೂಚನೆಗಳನ್ನು ತಿಳಿದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪರೀಕ್ಷಾ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದಿನಂತೆ ಸಿಇಟಿ ಪರೀಕ್ಷೆಯು ಯಶಸ್ವಿಯಾಗಿ, ದೋಷ ರಹಿತವಾಗಿ ನಡೆಯಬೇಕು. ಪರೀಕ್ಷಾ ಸಮಯದಲ್ಲಿ ಅಳವಡಿಸಿರುವ ಎಲ್ಲಾ ನಿಯಮಗಳು ಉಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಪದವಿ ಪೂರ್ವ ಶಿಕ್ಷ ಣ ಇಲಾಖೆಯ ಉಪನಿರ್ದೇಶಕಿ ವಿ.ಆರ್‌. ಶ್ಯಾಮಲಾ ಮಾತನಾಡಿ, ಚಾಮರಾಜನಗರದ ಜೆಎಸ್‌ಎಸ್‌ ಮಹಿಳಾ ಕಾಲೇಜಿನಿಂದ 391 ವಿದ್ಯಾರ್ಥಿಗಳು, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಿಂದ 260 ವಿದ್ಯಾರ್ಥಿಗಳು, ಕೊಳ್ಳೇಗಾಲ ಪಟ್ಟಣದ ಸರಕಾರಿ ಎಸ್‌ವಿಕೆ ಬಾಲಕಿಯರ ಪದವಿ ಪೂರ್ವ ಕಾಲೇಜಿನಿಂದ 344 ವಿದ್ಯಾರ್ಥಿಗಳು ಹಾಗೂ ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನಿಂದ 320 ವಿದ್ಯಾರ್ಥಿಗಳು ಸೇರಿ ಒಟ್ಟು 1315 ವಿದ್ಯಾರ್ಥಿಗಳು ಈ ಬಾರಿ ಸಾಮಾನ್ಯ ಸಿಇಟಿ ಪರೀಕ್ಷೆಯನ್ನು ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಂತಾಪ: ಸಭೆ ಆರಂಭದಲ್ಲೇ ಮತದಾನದಂದು ಕರ್ತವ್ಯ ನಿರ್ವಹಣೆ ವೇಳೆ ಮೃತಪಟ್ಟ ಹನೂರು ಕಾಲೇಜಿನ ಉಪನ್ಯಾಸಕರಾದ ಶಾಂತಮೂರ್ತಿ ಅವರ ನಿಧನದ ಗೌರವಾರ್ಥ ಎರಡು ನಿಮಿಷಗಳ ಕಾಲ ಮೌನ ಆಚರಿಸುವ ಮೂಲಕ ಸಂತಾಪ ಸೂಚಿಸಲಾಯಿತು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌, ಸಾರ್ವಜನಿಕ ಶಿಕ್ಷ ಣ ಇಲಾಖೆ ಉಪನಿರ್ದೇಶಕಿ ಮಂಜುಳಾ, ಕೊಳ್ಳೇಗಾಲ ತಾಲೂಕಿನ ತಹಸೀಲ್ದಾರ್‌ ಆನಂದಯ್ಯ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್‌, ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ