ಆ್ಯಪ್ನಗರ

ಚಾಮರಾಜನಗರದಲ್ಲಿ ಬೃಹತ್‌ ಉದ್ಯೋಗ ಮೇಳ

ಸಂಸದ ಆರ್‌.ಧ್ರುವನಾರಾಯಣ ಅಭಿಮಾನಿಗಳ ಬಳಗದ ವತಿಯಿಂದ ಅವರ 57ನೇ ಹುಟ್ಟುಹಬ್ಬದ ಅಂಗವಾಗಿ ಮಂಗಳವಾರ ನಗರದಲ್ಲಿ ನಡೆದ ಬೃಹತ್‌ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ 3900 ಮಂದಿ ಉದ್ಯೋಗಾಕಾಂಕ್ಷಿಗಳು ನೋಂದಾಯಿಸಿಕೊಂಡಿದ್ದರು. 2170 ಮಂದಿಗೆ ಸ್ಥಳದಲ್ಲೇ ಸಂದರ್ಶನ ನಡೆಸಿ ಉದ್ಯೋಗದ ಭರವಸೆ ಪತ್ರ ನೀಡಲಾಯಿತು.

Vijaya Karnataka 1 Aug 2018, 5:00 am
ಚಾಮರಾಜನಗರ: ಸಂಸದ ಆರ್‌.ಧ್ರುವನಾರಾಯಣ ಅಭಿಮಾನಿಗಳ ಬಳಗದ ವತಿಯಿಂದ ಅವರ 57ನೇ ಹುಟ್ಟುಹಬ್ಬದ ಅಂಗವಾಗಿ ಮಂಗಳವಾರ ನಗರದಲ್ಲಿ ನಡೆದ ಬೃಹತ್‌ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ 3900 ಮಂದಿ ಉದ್ಯೋಗಾಕಾಂಕ್ಷಿಗಳು ನೋಂದಾಯಿಸಿಕೊಂಡಿದ್ದರು. 2170 ಮಂದಿಗೆ ಸ್ಥಳದಲ್ಲೇ ಸಂದರ್ಶನ ನಡೆಸಿ ಉದ್ಯೋಗದ ಭರವಸೆ ಪತ್ರ ನೀಡಲಾಯಿತು.
Vijaya Karnataka Web chamarajanagar employment fair
ಚಾಮರಾಜನಗರದಲ್ಲಿ ಬೃಹತ್‌ ಉದ್ಯೋಗ ಮೇಳ


7ನೇ ತರಗತಿಯಿಂದ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಡಿಪೊ್ಲೕಮಾ, ಐಟಿಐ ವಿದ್ಯಾರ್ಹತೆ ಹೊಂದಿದ್ದವರು ಪಾಲ್ಗೊಂಡಿದ್ದು, ವಿದ್ಯಾರ್ಥಿನಿಯರಿಗೆ 2 ಕೌಂಟರ್‌, ವಿದ್ಯಾರ್ಥಿಗಳಿಗೆ 3 ಕೌಂಟರ್‌ ವ್ಯವಸ್ಥೆ ಮಾಡಲಾಗಿತ್ತು.

ಕೋಟಕ್‌ ಮಹೇಂದ್ರ, ಇಂಡಸ್‌ ವ್ಯಾಲಿ, ಸುರಭಿ ಪ್ಲಾಂಟ್‌, ಹೊಂಡಾ, ಎಲ್‌ಐಸಿ, ನಮ್ಮೂರು ಡಾಟ್‌ಕಾಂ ಸೇರಿದಂತೆ 91 ಕಂಪನಿಗಳು ಪಾಲ್ಗೊಂಡಿದ್ದವು.

ಕಾರ್ಯಕ್ರಮದಲ್ಲಿ ಸಾಹಿತಿ, ನಿವೃತ್ತ ಪ್ರಾಧ್ಯಾಪಕ ಪ್ರೊ.ಮಲೆಯೂರು ಗುರುಸ್ವಾಮಿ ಮಾತನಾಡಿ, ಸರಳ ಸಜ್ಜನಿಕೆ ವ್ಯಕ್ತಿತ್ವ ಹೊಂದಿರುವ ಸಂಸದ ಆರ್‌.ಧ್ರುವನಾರಾಯಣ ಅವರು ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಕೇಂದ್ರಕ್ಕೆ ಒತ್ತಾಯ ಹೇರಬೇಕು ಎಂದು ಸಲಹೆ ನೀಡಿದರು.

ಒಬ್ಬ ವ್ಯಕ್ತಿಯನ್ನು ಆತನ ವ್ಯಕ್ತಿತ್ವ ಹಾಗೂ ಆತ ಮಾಡಿರುವ ಸಾಧನೆಗಳಿಂದ ಅಳೆಯಲಾಗುತ್ತದೆ, ಆ ದಿಸೆಯಲ್ಲಿ ಸಂಸದ ಧ್ರುವನಾರಾಯಣ ಇಷ್ಟು ವರ್ಷದ ರಾಜಕಾರಣದಲ್ಲಿ ವಿರೋಧ ಪಕ್ಷ ದವರ ಕುರಿತು ಒಂದು ತೆಗಳಿಕೆಯ ಮಾತನಾಡಲಿಲ್ಲ. ಅವರ ಒಳ್ಳೆಯ ನಡವಳಿಕೆಯು 1 ಮತದಿಂದ 1 ಲಕ್ಷ ದವರೆಗೆ ಹೆಚ್ಚು ಮತ ತಲುಪುವಂತೆ ಮಾಡಿತು. ರಾಜಕಾರಣ ಇಂದು ಇರುತ್ತದೆ, ನಾಳೆ ಹೋಗುತ್ತದೆ, ವ್ಯಕ್ತಿಯು ಶಾಶ್ವತವಾಗಿ ಉಳಿಯುವುದು, ಅಧಿಕಾರ ಬಲದಿಂದಲ್ಲ. ವ್ಯಕ್ತಿತ್ವದ ಬಲದಿಂದ ಎಂದರು.

ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ನಿರುದ್ಯೋಗ ಸಮಸ್ಯೆಯಿಂದ ತತ್ತರಿಸುತ್ತಿದ್ದು, ಅವರಿಗೆ ನೆಮ್ಮದಿಯುತ ಬದುಕು ಕಟ್ಟಿಕೊಳ್ಳುವ ಉದ್ಯೋಗ ಕೊಡಿಸುವ ಶಾಶ್ವತ ಕೆಲಸ ನಡೆಯಬೇಕು, ಸಂಸದರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಶಾಸಕ ಎಸ್‌.ಜಯಣ್ಣ ಮಾತನಾಡಿ, ಸಂಸದ ಧ್ರುವನಾರಾಯಣ ಅವರೊಬ್ಬ ವಿಶಿಷ್ಟ ರಾಜಕಾರಣಿಯಾಗಿದ್ದು, ಅವರ ಸೇವಾ ಮನೋಭಾವ ಎಲ್ಲ ರಾಜಕಾರಣಿಗಳಲ್ಲೂ ಬರಬೇಕು ಎಂದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಗೌರವ ಡಾಕ್ಟರೇಟ್‌ ಭಾಜನರಾದ ವಾಟಾಳ್‌ ಸೂರ್ಯಸಿಂಹಾಸನಾ ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅವರನ್ನು ಸನ್ಮಾನಿಸಲಾಯಿತು. ಕಣ್ಣಿನ ತಪಾಸಣೆಗೊಳಗಾಗಿದ್ದ 1035 ಶಾಲಾ ಮಕ್ಕಳ ಪೈಕಿ 166 ಮಂದಿಗೆ ಉಚಿತ ಕನ್ನಡಕ ವಿತರಿಸಲಾಯಿತು.

ನಳಂದ ಬೌದ್ಧ ವಿಹಾರದ ಬೋಧಿದತ್ತ ಬಂತೇಜಿ, ಮಂಗಳೂರು ಕ್ರೈಸ್ತ ಗುರು ಮೋಹನ್‌ ಮನೋರಾಜ್‌, ಮುಸ್ಲಿಂ ಧರ್ಮಗುರು ಸೈಯ್ಯದ್‌ ಮುಕ್ತಾರ್‌, ಜಿಪಂ ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷ ಜೆ.ಯೋಗೇಶ್‌, ಉದ್ಯಮಿ ಶ್ರೀಕಂಠು, ವಿಧಾನ ಪರಿಷತ್‌ ಸದಸ್ಯ ಧರ್ಮಸೇನಾ, ಕಾಡಾ ಮಾಜಿ ಅಧ್ಯಕ್ಷ ಎಚ್‌.ಎಸ್‌.ನಂಜಪ್ಪ ಆರ್‌.ಧ್ರುವ ನಾರಾಯಣ ಅಭಿಮಾನಿಗಳ ಬಳಗದ ಅಧ್ಯಕ್ಷ ಕಾಗಲವಾಡಿ ಚಂದ್ರು, ಜಿಲ್ಲಾ ಉದ್ಯೋಗಾಧಿಕಾರಿ ಸಿ.ಎಂ.ಉಮಾ ಸೇರಿದಂತೆ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ