ಆ್ಯಪ್ನಗರ

ಕೊಳ್ಳೇಗಾಲ: ಯುಗಾದಿಗೆ ಹೊಸ ಬಟ್ಟೆ ಕೊಡಿಸಿಲ್ಲವೆಂದು 12 ವರ್ಷದ ಬಾಲಕಿ ಆತ್ಮಹತ್ಯೆ!

ಮೃತ ಬಾಲಕಿ ಹಬ್ಬಕ್ಕೆ ಹೊಸ ಬಟ್ಟೆ ತೆಗೆದುಕೊಡಿ ಎಂದು ಕೇಳಿದಾಗ ಆಕೆಯ ಪೋಷಕರ ಸಂಬಳವಾದ ಬಳಿಕ ಎಲ್ಲರೂ ಸೇರಿ ಬಟ್ಟೆ ತೆಗೆದುಕೊಳ್ಳೋಣ ಎಂದು ಹೇಳಿದ್ದಾರೆ. ಅಷ್ಟಕ್ಕೇ ಬೇಸರದಿಂದ ಯಾರು ಇಲ್ಲದ ಸಮಯದಲ್ಲಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Vijaya Karnataka Web 9 Apr 2021, 12:42 pm
ಚಾಮರಾಜನಗರ: ಯುಗಾದಿ ಹಬ್ಬಕ್ಕೆ ಹೊಸ ಬಟ್ಟೆ ತೆಗೆದುಕೊಟ್ಟಿಲ್ಲವೆಂದು ಬಾಲಕಿಯೋರ್ವಳು ನೇಣು ಬಿಗಿದು ಸಾವನ್ನಪ್ಪಿರುವ ಘಟನೆ‌ ಕೊಳ್ಳೇಗಾಲ ಪಟ್ಟಣದಲ್ಲಿ ಶುಕ್ರವಾರ ಜರುಗಿದೆ.
Vijaya Karnataka Web suicide.


ಪಟ್ಟಣದ ಬಸ್ತೀಪುರ ಬಡಾವಣೆಯ ರಸ್ತೆ ನಾಯ್ಡು ತೋಟದ ಸಮೀಪ ವಾಸಿ ಬಸವರಾಜು ಎಂಬುವವರ ಮಗಳಾದ ಹರ್ಷಿತಾ(12) ಎಂಬಾಕೆ ಮೃತ ದುರ್ದೈವಿ. ಈಕೆಯು ಹಬ್ಬಕ್ಕೆ ಹೊಸ ಬಟ್ಟೆ ತೆಗೆದುಕೊಡಿ ಎಂದು ಕೇಳಿದಾಗ ಆಕೆಯ ಪೋಷಕರ ಸಂಬಳವಾದ ಬಳಿಕ ಎಲ್ಲರೂ ಸೇರಿ ಬಟ್ಟೆ ತೆಗೆದುಕೊಳ್ಳೋಣ ಎಂದು ಹೇಳಿದ್ದಾರೆ. ಅಷ್ಟಕ್ಕೇ ಬೇಸರದಿಂದ ಯಾರು ಇಲ್ಲದ ಸಮಯದಲ್ಲಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹಬ್ಬಕ್ಕೆ ಊರಿಗ್ ಹೋಗ್ತೀರಾ? ಹಂಗಿದ್ರೆ ನಿಮಗಂತಾನೇ ಬೆಂಗಳೂರಿನಿಂದ ಹೊರಡಲಿದೆ 9 ವಿಶೇಷ ರೈಲು
ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಸ್ಥಳಕ್ಕೆ ಪರೀಶಿಲಿಸಿ ಬಳಿಕ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ತಂದಿರಿಸಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ವಾರಸುದಾರರಿಗೆ ಒಪ್ಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ