ಆ್ಯಪ್ನಗರ

ಸಾಂಕ್ರಾಮಿಕ ರೋಗ ತಡೆಗೆ ಸ್ವಚ್ಛತಾ ಕಾರ್ಯ

ಸಮೀಪದ ದೇಶವಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಸ್ವಚ್ಛತಾ ಕಾರ್ಯ ನಡೆಸಿ ಜನರಲ್ಲಿ ಅರಿವು ಮೂಡಿಸಲಾಯಿತು.

ವಿಕ ಸುದ್ದಿಲೋಕ 18 Jun 2016, 5:15 am
ಸಂತೇಮರಹಳ್ಳಿ: ಸಮೀಪದ ದೇಶವಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಸ್ವಚ್ಛತಾ ಕಾರ್ಯ ನಡೆಸಿ ಜನರಲ್ಲಿ ಅರಿವು ಮೂಡಿಸಲಾಯಿತು.
Vijaya Karnataka Web clean up work to prevent infectious disease
ಸಾಂಕ್ರಾಮಿಕ ರೋಗ ತಡೆಗೆ ಸ್ವಚ್ಛತಾ ಕಾರ್ಯ


ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಹೇಮಾ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಎಚ್ಚರ ವಹಿಸಬೇಕು. ಮಲೇರಿಯಾ, ಡೆಂಗೆ ಚಿಕೂನ್ ಗುನ್ಯ ರೋಗಗಳು ಅನೈರ್ಮಲ್ಯದಿಂದ ಹರಡುತ್ತದೆ ಇದರ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.

ವಾರದ ಎರಡು ಬಾರಿ ಮನೆಯಲ್ಲಿನ ನೀರಿನ ತೊಟ್ಟಿ ತೊಳೆದು ಒಣಗಿಸಬೇಕು. ಮನೆ ಮುಂಭಾಗ ಕೊಳಚೆ ನೀರು ಸಂಗ್ರಹವಾಗದಂತೆ ಹಾಗೂ ಕಸದ ರಾಶಿ ಬೀಳದಂತೆ ಮುನ್ನೆಚ್ಚರಿಕೆ ವಹಿಸಬೇಕು. ಘನತ್ಯಾಜ್ಯ ವಿಲೇವಾರಿ ಮಾಡಬೇಕು. ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಗ್ರಾಮ ಪಂಚಾಯಿತಿ ವತಿಯಿಂದ ದೊರೆಯುವ ಅನುದಾನ ಬಳಸಿಕೊಂಡು ಶೌಚಾಲಯ ನಿರ್ಮಿಸಿಕೊಳ್ಳಬೇಕು ಎಂದು ಹೇಳಿದರು.

ಗ್ರಾಪಂ ಅಭಿವದ್ದಿ ಅಧಿಕಾರಿ ರಾಮೇಗೌಡ ಮಾತನಾಡಿ, ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತರು ಜನರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು. ಗ್ರಾ.ಪಂ.ಸದಸ್ಯ ಡಿ.ಪಿ.ರಾಜು, ಆರೋಗ್ಯ ಇಲಾಖೆ ಆರೀಫ್, ಸಂಪಿಗಯ್ಯ ಆಶಾ ಕಾರ್ಯಕರ್ತರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ