ಆ್ಯಪ್ನಗರ

ಅಪಘಾತದಲ್ಲಿ ದಂಪತಿ ಸಾವು

ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ತೀವ್ರಗಾಯಗೊಂಡಿದ್ದ ದಂಪತಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟರು.

Vijaya Karnataka 10 Nov 2019, 12:18 am
ಯಳಂದೂರು: ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ತೀವ್ರಗಾಯಗೊಂಡಿದ್ದ ದಂಪತಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟರು.
Vijaya Karnataka Web couple deaths in an accident
ಅಪಘಾತದಲ್ಲಿ ದಂಪತಿ ಸಾವು


ಯಳಂದೂರು ಸಮೀಪದ ಕೆಂಪನಪುರ ಗ್ರಾಮದ ನಿವಾಸಿ ಮೂರ್ತಿ (32), ಅವರ ಪತ್ನಿ ಶಾಂತಿ(30) ಮೃತರು. ತಮ್ಮ ಇಬ್ಬರು ಮಕ್ಕಳನ್ನು ಶಾಲೆಗಳಿಗೆ ಬಿಟ್ಟು ದೇವರ ದರ್ಶನ ಪಡೆಯಲು ತೆರಳುತ್ತಿದ್ದ ವೇಳೆ ರ್ದುಘಟನೆ ನಡೆದಿದೆ.

ಕುರುಬನಕಟ್ಟೆ ದೇವಸ್ಥಾನಕ್ಕೆ ಕಾರ್ತಿಕ ಮಾಸದ ಪೂಜೆಗೆ ಹೋಗುತ್ತಿದ್ದ ದಂಪತಿಯಿದ್ದ ಬೈಕ್‌ಗೆ ಕೊಳ್ಳೇಗಾಲ ತಾಲೂಕಿನ ಉತ್ತಂಬಳ್ಳಿ ಸರ್ಕಲ್ ಬಳಿ ಮೈಸೂರು ಕಡೆಗೆ ಹೋಗುತ್ತಿದ್ದ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ತೀವ್ರಗಾಯಗೊಂಡಿದ್ದ ಅವರನ್ನು ಕೊಳ್ಳೇಗಾಲ ಉಪವಿಭಾಗ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಕೆ.ಆರ್.ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಇಬ್ಬರೂ ಮೃತಪಟ್ಟರು.

ಮಕ್ಕಳ ಅಕ್ರಂದನ: ದಂಪತಿಗೆ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಪುತ್ರಿಘಿ, 3ನೇ ತರಗತಿ ವ್ಯಾಸಂಗ ಮಾಡುತ್ತಿರುವ ಪುತ್ರ ಇದ್ದುಘಿ, ಅಪ್ಪ- ಅಮ್ಮನ ಶವದ ಮುಂದೆ ಮಕ್ಕಳ ಅಕ್ರಂದನ ಕರುಳುಹಿಂಡುವಂತಿತ್ತುಘಿ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ