ಆ್ಯಪ್ನಗರ

ಕೆಂಪನಪುರದಲ್ಲಿ ಅಪರಾಧ ತಡೆ ಮಾಸಾಚರಣೆ ಜಾಗೃತಿ ಜಾಥಾ

ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಸಂತೇಮರಹಳ್ಳಿ ಕೆಂಪನಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು.

Vijaya Karnataka 16 Dec 2018, 5:00 am
ಸಂತೇಮರಹಳ್ಳಿ : ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಸಂತೇಮರಹಳ್ಳಿ ಕೆಂಪನಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು.
Vijaya Karnataka Web crime prevention awareness jatha in kempampur
ಕೆಂಪನಪುರದಲ್ಲಿ ಅಪರಾಧ ತಡೆ ಮಾಸಾಚರಣೆ ಜಾಗೃತಿ ಜಾಥಾ


ಸಂತೇಮಹಳ್ಳಿ ಪೋಲೀಸ್‌ ಠಾಣೆ ವತಿಯಿಂದ ಆಯೋಜಿಸಿದ್ದ ಜಾಥಾದಲ್ಲಿ ಮುಖ್ಯ ಶಿಕ್ಷಕ ರೇವಣ್ಣ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ಮೊಬೈಲ್‌ ಬಳಕೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇದರಿಂದ ಎಷ್ಟೋ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಹಾಳು ಮಾಡುಕೊಳ್ಳುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಗತಿ, ಗುರಿ ಸಾಧನೆಯತ್ತ ಗಮನಹರಿಸಬೇಕು ಎಂದರು.

ಚಿಕ್ಕ ವಯಸ್ಸಿನಲ್ಲಿ ಹಾಗೂ ಪರವಾನಗಿ ಇಲ್ಲದೆ ವಾಹನ ಚಾಲನೆ ಕಾನೂನಿನ ಪ್ರಕಾರ ಅಪರಾಧ ಎಂದು ಅರಿವು ಮೂಡಿಸಿದರು.

ಎಎಸ್‌ಐ ಮಹದೇವಚಾರ್‌, ಪೇದೆ ನಂಜುಂಡಸ್ವಾಮಿ, ಶಿಕ್ಷಕರಾದ ಪಮೀಳಾಬಾಯಿ, ದಾಸೇಗೌಡ, ಮಲ್ಲಪ್ಪ, ಸಿ.ಎಂ.ಮಹೇಶ್‌, ಅಶ್ವಿನಿ, ರೇವಣ್ಣ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ