ಆ್ಯಪ್ನಗರ

ಬೆಳೆ ಮಧ್ಯೆ ಗಾಂಜಾ: ಆರೋಪಿ ಬಂಧನ

ಮುಸುಕಿನ ಜೋಳದ ಬೆಳೆ ಮಧ್ಯೆ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸಿ ಗಾಂಜಾ ಗಿಡವನ್ನು ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.

Vijaya Karnataka 12 Sep 2018, 5:00 am
ಕೊಳ್ಳೇಗಾಲ : ಮುಸುಕಿನ ಜೋಳದ ಬೆಳೆ ಮಧ್ಯೆ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸಿ ಗಾಂಜಾ ಗಿಡವನ್ನು ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
Vijaya Karnataka Web crop arrest ganja
ಬೆಳೆ ಮಧ್ಯೆ ಗಾಂಜಾ: ಆರೋಪಿ ಬಂಧನ


ತಾಲೂಕಿನ ಸತ್ತೇಗಾಲ ಜಾಗೇರಿಯ ಶಿಲುವೈಪುರ ಗ್ರಾಮದ ಆರೋಗ್ಯಸ್ವಾಮಿ ಬಂಧಿತ ಆರೋಪಿ. ಜಮೀನಿನಲ್ಲಿ ಆರೋಪಿ ಬೆಳೆದಿದ್ದ 1.600 ಕೆ.ಜಿ. ಗ್ರಾಂ ತೂಕದ ಗಾಂಜಾ ಗಿಡವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಆರೋಗ್ಯಸ್ವಾಮಿ ಮನೆಯ ಸಮೀಪವಿರುವ ಜಮೀನಿನಲ್ಲಿ ಮುಸುಕಿನ ಜೋಳದ ಮಧ್ಯೆ ಗಾಂಜಾ ಗಿಡ ಬೆಳೆದಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ ಪುಟ್ಟಮಾದಯ್ಯ ಹಾಗೂ ವೃತ್ತ ನಿರೀಕ್ಷ ಕ ರಾಜಣ್ಣ ಅವರ ನೇತೃತ್ವದಲ್ಲಿ ಗ್ರಾಮಾಂತರ ಎಸ್‌ಐ ವನರಾಜು ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಗಾಂಜಾ ಸೊಪ್ಪಿನ ಸಮೇತ ಬಂಧಿಸಿದರು. ಘಟನೆ ಸಂಬಂಧ ದೂರು ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ದಾಳಿಯಲ್ಲಿ ಎಎಸ್‌ಐ ಚಲವರಾಜು, ಮುಖ್ಯಪೇದೆಗಳಾದ ಗೋವಿಂದ, ಶಂಕರ್‌, ಮಧು, ಲಿಂಗರಾಜು, ಮಹೇಶ್‌, ರವಿ, ಪೇದೆ ರಘು ಇದ್ದಾದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ