ಆ್ಯಪ್ನಗರ

ಬೆಳೆಸಾಲಮನ್ನಾ ಸೌಲಭ್ಯ; ಹೆಸರು ನೋಂದಾಯಿಸಲು ಡಿಸಿ ಸೂಚನೆ

ವಾಣಿಜ್ಯ ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಮಾಡಿರುವ ರೈತರಿಗೆ ಸಾಲ ಮನ್ನಾ ಮಾಡುವ ಸಲುವಾಗಿ ತಂತ್ರಾಂಶವೊಂದನ್ನು ಜಾರಿಗೆ ತಂದಿದ್ದು, ಬೆಳೆ ಸಾಲ ಪಡೆದ ಪ್ರತಿಯೊಬ್ಬ ರೈತರು ಸಾಲ ಪಡೆದ ವಾಣಿಜ್ಯ ಬ್ಯಾಂಕ್‌ಗಳಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಮನವಿ ಮಾಡಿದ್ದಾರೆ.

Vijaya Karnataka 18 Dec 2018, 5:00 am
ಚಾಮರಾಜನಗರ : ವಾಣಿಜ್ಯ ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಮಾಡಿರುವ ರೈತರಿಗೆ ಸಾಲ ಮನ್ನಾ ಮಾಡುವ ಸಲುವಾಗಿ ತಂತ್ರಾಂಶವೊಂದನ್ನು ಜಾರಿಗೆ ತಂದಿದ್ದು, ಬೆಳೆ ಸಾಲ ಪಡೆದ ಪ್ರತಿಯೊಬ್ಬ ರೈತರು ಸಾಲ ಪಡೆದ ವಾಣಿಜ್ಯ ಬ್ಯಾಂಕ್‌ಗಳಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಮನವಿ ಮಾಡಿದ್ದಾರೆ.
Vijaya Karnataka Web crop loan facility
ಬೆಳೆಸಾಲಮನ್ನಾ ಸೌಲಭ್ಯ; ಹೆಸರು ನೋಂದಾಯಿಸಲು ಡಿಸಿ ಸೂಚನೆ


2009ರ ಏ. 1ರಿಂದ 2017ರ ಡಿ.31ರವರೆಗೆ ಬಾಕಿ ಇರುವ ಬೆಳೆ ಸಾಲ(ಸುಸ್ತಿಸಾಲ, ಪುನರಾವಸ್ತಿ ಸಾಲ, ಎನ್‌.ಪಿ.ಎ. (ನಾನ್‌ ಪರ್ಫಾಮಿಂಗ್‌ ಅಸೆಟ್‌ ಸಾಲಗಳು) ಪಡೆದಿರುವ ರೈತರು ಸಾಲ ಮನ್ನಾ ಯೋಜನೆಗೆ ಅರ್ಹರಾಗಿದ್ದಾರೆ. ಯೋಜನೆಯಡಿ ಒಂದು ರೈತ ಕುಟುಂಬವು (ಗಂಡ, ಹೆಂಡತಿ, ಅವಲಂಬಿತ ಮಕ್ಕಳು) ಗರಿಷ್ಠ 2 ಲಕ್ಷ ರೂ.ವರೆಗೆ ಮಾತ್ರ ಬೆಳೆ ಸಾಲ ಮನ್ನಾ ಸೌಲಭ್ಯ ಪಡೆಯಲು ಅವಕಾಶವಿದೆ.

ಜಿಲ್ಲೆಯ ವಾಣಿಜ್ಯ ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಪಡೆದ ರೈತರ ಸಂಖ್ಯೆ 22,978 ಇದ್ದು, ಆ ಪೈಕಿ 19,325 ರೈತರ ಬೆಳೆ ಸಾಲ ಮನ್ನಾ ಕುರಿತು ಪರಿಶೀಲಿಸಲಾಗಿದೆ. ಜಿಲ್ಲಾ ವ್ಯಾಪ್ತಿಯ ವಾಣಿಜ್ಯ ಬ್ಯಾಂಕಿನ ಶಾಖೆಗಳಲ್ಲಿ ಪ್ರತಿದಿನ ಕನಿಷ್ಠ 40 ರೈತರು ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಏನೇನು ನೀಡಬೇಕು; ಪ್ರತಿ ರೈತರಿಗೆ ಕ್ರಮಬದ್ದವಾಗಿ ಕ್ರಮ ಸಂಖ್ಯೆ ಮತ್ತು ದಿನಾಂಕ ನಮೂದಿಸಿದ ಟೋಕನ್‌ಗಳನ್ನು ನೀಡಲಾಗುವುದು. ನಿಗದಿಪಡಿಸಿದ ದಿನಾಂಕಗಳಂದು ರೈತರು ಬ್ಯಾಂಕ್‌ ಶಾಖೆಗೆ ತೆರಳಿ ಸ್ವಯಂ ದೃಢೀಕರಣ ಪತ್ರದೊಂದಿಗೆ, ಆಧಾರ್‌ ಕಾರ್ಡ್‌, ಪಡಿತರ ಚೀಟಿ .2018 ಜು.5ಕ್ಕಿಂತ ಮುಂಚಿತವಾಗಿ ಪಡೆದ ಪಡಿತರ ಚೀಟಿ) ನಕಲು, ಪಹಣಿ) ಪತ್ರದೊಂದಿಗೆ ಬೆಳೆ ಸಾಲ ಮನ್ನಾ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಬೇಕು.

ಯಾವ ರೈತರು ವಾರ್ಷಿಕ ಆದಾಯ ತೆರಿಗೆ ಪಾವತಿದಾರರರೋ ಮತ್ತು ರಾಜ್ಯ, ಕೇಂದ್ರ ಸರಕಾರಿ, ಅರೆ ಸರಕಾರಿ, ಸರಕಾರದಿಂದ ಅನುದಾನ ಪಡೆಯುವ ಸಂಸ್ಥೆಗಳಲ್ಲಿ, ಸಾರ್ವಜನಿಕ ಸ್ವಾಮ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು, ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಪ್ರತಿ ತಿಂಗಳು 15 ಸಾವಿರ ರೂ.ಗಳಿಗಿಂತ ಹೆಚ್ಚು ಪಿಂಚಣಿ ಪಡೆಯುವ ನಿವೃತ್ತ ನೌಕರರು ಹಾಗೂ ಸಹಕಾರಿ ಬ್ಯಾಂಕ್‌ಗಳಲ್ಲಿನ ಬೆಳೆ ಸಾಲ ಮನ್ನಾ ಫಲಾನುಭವಿಗಳು ವಾಣಿಜ್ಯ ಬ್ಯಾಂಕ್‌ನ ಬೆಳೆಸಾಲ ಮನ್ನಾ ಯೋಜನೆಗೆ ಅರ್ಹರಿರುವುದಿಲ್ಲ.

ಅರ್ಹ ರೈತರು ಬೆಳೆ ಸಾಲ ಮನ್ನಾ ಯೋಜನೆಯಡಿ ತಮ್ಮ ಬ್ಯಾಂಕ್‌ ಶಾಖೆಗಳಲ್ಲಿ ಹೆಸರು ನೊಂದಾಯಿಸಿಕೊಳ್ಳಲು 2019 ರ ಜ. 10ರವರೆಗೆ ಕಾಲಾವಕಾಶ ನೀಡಲಾಗಿದೆ. ರೈತರು ಯಾವುದೇ ಗೊಂದಲಗಳಿಗೆ ಒಳಗಾಗದೇ ಶಾಂತ ರೀತಿಯಿಂದ ಬ್ಯಾಂಕ್‌ ಅಧಿಕಾರಿಗಳೊಂದಿಗೆ ಸಹಕರಿಸಿ ಬೆಳೆ ಸಾಲ ಮನ್ನಾ ಯೋಜನೆಯ ಲಾಭ ಪಡೆದುಕೊಳ್ಳಬೇಕು.

ಯಾರನ್ನು ಸಂಪರ್ಕಿಸಬೇಕು; ಬೆಳೆ ಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾ ಮಾಹಿತಿ ಕೇಂದ್ರವನ್ನು ನಗರದ ಜಿಲ್ಲಾಡಳಿತ ಭವನದ ಮೊದಲನೇ ಮಹಡಿಯ ಕೊಠಡಿ ಸಂಖ್ಯೆ 104ರಲ್ಲಿ ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆ (08226-223160) ಸಂಪರ್ಕಿಸಿಯೂ ಸಹ ವಿವರ ಪಡೆಯಬಹುದಾಗಿದೆ. ಬೆಳೆ ಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲ ಸಂದೇಹಗಳಿದಲ್ಲಿ ಪರಿಹಾರಕ್ಕಾಗಿ ಹಾಗೂ ಸಲಹೆಗಳನ್ನು ಪಡೆಯಲು ಆಯಾ ತಾಲೂಕಿಗೆÜ ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ದಿಲೀಪ್‌, ಚಾಮರಾಜನಗರ * ಮೊಬೈಲ್‌ (9535803412) ರಾಜೇಂದ್ರ, ಕೊಳ್ಳೇಗಾಲ - (ಮೊ. 9901885361) ಕಾರ್ತಿಕ್‌, ಹನೂರು (ಮೊ. 9743299941), ವಾಸುದೇವ, ಗುಂಡ್ಲುಪೇಟೆ (ಮೊ. 9742593734) ಶರತ್‌, ಯಳಂದೂರು (ಮೊ. 7829596655) ಇವರನ್ನು ಸಂಪರ್ಕಿಸಿ ಬೆಳೆ ಸಾಲ ಮನ್ನಾ ಮಾಹಿತಿ, ಸಲಹೆ ಹಾಗೂ ಪರಿಹಾರ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ